3 ಕ್ಷೇತ್ರಗಳ ಕೈ ಬಿ.ಫಾರಂ ವಿತರಣೆಗೆ ತಡೆ
Team Udayavani, Apr 18, 2018, 6:10 AM IST
ಬೆಂಗಳೂರು: ಟಿಕೆಟ್ ಘೋಷಣೆಯಾದ ಕ್ಷೇತ್ರಗಳ ಬಿ.ಫಾರಂ ವಿತರಣೆ ಆರಂಭಿಸಿದ್ದ ಕಾಂಗ್ರೆಸ್ ಏಕಾಏಕಿಯಾಗಿ 3 ಕ್ಷೇತ್ರಗಳ
ಹಂಚಿಕೆಯನ್ನು ತಡೆ ಹಿಡಿದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಬಾದಾಮಿ ಕ್ಷೇತ್ರದ ಬಿ ಫಾರಂ ವಿತರಣೆ ತಡೆ ಹಿಡಿಯಲಾಗಿದೆ. ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಒತ್ತಡದಿಂದ ಜಗಳೂರು ಬಿ ಫಾರಂ ವಿತರಣೆ ಮಾಡಿಲ್ಲ ಎಂದು ಹೇಳಲಾಗಿದೆ. ಬಾದಾಮಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಅಧ್ಯಕ್ಷರನ್ನು ಭೇಟಿ ಮಾಡಿ ಘೋಷಿತ ಅಭ್ಯರ್ಥಿ ಡಾ.ದೇವರಾಜ್ಗೆ ಬಿ. ಫಾರಂ ನೀಡದಂತೆ ಮನವಿ ಮಾಡಿಕೊಂಡರು. ಜಗಳೂರು ಕ್ಷೇತ್ರದ ಹಾಲಿ ಶಾಸಕ ಎಚ್.ಪಿ. ರಾಜೇಶ್ ಕೂಡ ಅಧ್ಯಕ್ಷರನ್ನು ಭೇಟಿ ಮಾಡಿ ಬಿ. ಫಾರಂ ವಿತರಿಸದಂತೆ ಮನವಿ ಮಾಡಿದರು.
ಚಂದ್ರಮೌಳಿಗೆ ವಿರೋಧ: ಮಡಿಕೇರಿ ಕ್ಷೇತ್ರದ ಟಿಕೆಟ್ ಪಡೆದಿರುವ ಮಾಜಿ ಪಬ್ಲಿಕ್ ಪ್ರಾಸಿಕ್ಯೂಟರ್ ಚಂದ್ರಮೌಳಿಗೆ ಟಿಕೆಟ್ ನೀಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಸಾವಿರಾರು ಕೋಟಿ ರೂ. ವಂಚನೆ ಮಾಡಿರುವ ಮೆಹೂಲ್ ಚೌಕ್ಸಿ ಪರ ವಕಾಲತ್ತು ವಹಿಸಿದ್ದರಿಂದ ಅವರಿಗೆ ಟಿಕೆಟ್ ನೀಡಿದರೆ ರಾಷ್ಟ್ರಮಟ್ಟದಲ್ಲಿ ಪಕ್ಷಕ್ಕೆ ಮುಜುಗರವಾಗಲಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಸಂಚಾಲಕ ಬ್ರಿಜೇಶ್ ಕಾಳಪ್ಪ ಆರೋಪಿಸಿದ್ದರು. ಆ ಹಿನ್ನೆಲೆಯಲ್ಲಿ ಚಂದ್ರಮೌಳಿಗೆ ಟಿಕೆಟ್ ಘೋಷಣೆಯಾಗಿದ್ದರೂ, ಬಿ. ಫಾರಂ ನೀಡದಂತೆ ಹೈ ಕಮಾಂಡ್ ತಡೆ ಹಿಡಿದಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ