“ಯಜಮಾನ್ರ ‘ ಗೆಲ್ಲಿಸಲು ಟೊಂಕ ಕಟ್ಟಿದ ಪತ್ನಿಯರು


Team Udayavani, May 4, 2018, 6:50 AM IST

akss.jpg

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣಾ ಕಣದಲ್ಲಿರುವ ಸಿಎಂ ಸಿದ್ದರಾಮಯ್ಯ,ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೇರಿ ಘಟಾನುಘಟಿ ನಾಯಕರ ಪರ ಪತ್ನಿ-ಮಕ್ಕಳು, ನೆಂಟರಿಷ್ಟರು ಪ್ರಚಾರಕ್ಕಿಳಿದಿದ್ದಾರೆ.

ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಪರ ಅನಿತಾ ಕುಮಾರಸ್ವಾಮಿ ರಾಮನಗರ ಹಾಗೂ ಚನ್ನಪಟ್ಟಣದಲ್ಲಿ ಪ್ರಚಾರ ಮಾಡುತ್ತಿದ್ದರೆ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪರ ಪತ್ನಿ ಉಷಾ ಕನಕಪುರದಲ್ಲಿ ಪ್ರಚಾರದಲ್ಲಿ ತೊಡಗಿದ್ದಾರೆ. ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ, ಸಚಿವ ಕೃಷ್ಣ ಬೈರೇಗೌಡರ ಪರ ಪತ್ನಿ ಮೀನಾಕ್ಷಿ, ಮಾಜಿ ಸಚಿವ ದಿನೇಶ್‌ ಗುಂಡೂರಾವ್‌ ಪರವಾಗಿ ಟಬು ಪ್ರಚಾರ ನಡೆಸುತ್ತಿದ್ದಾರೆ.

ಚನ್ನಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಯೋಗೇಶ್ವರ್‌ ಪತ್ನಿ ಶೀಲಾ, ಪುತ್ರಿ, ಚಿತ್ರ ನಟಿ ನಿಶಾ ತಂದೆ ಪರ ಬಿರುಸಿನ ಪ್ರಚಾರದಲ್ಲಿ
ತೊಡಗಿದ್ದಾರೆ. ರಾಮನಗರ ಹಾಗೂ ಚನ್ನಪಟ್ಟಣದಲ್ಲಂತೂ ಅನಿತಾ ಕುಮಾರಸ್ವಾಮಿ ಅವರು ತಾವೇ ಅಭ್ಯರ್ಥಿ ಎನ್ನುವಷ್ಟರ ಮಟ್ಟಿಗೆ ಪ್ರಚಾರದಲ್ಲಿ ತೊಡಗಿದ್ದಾರೆ. ಪುತ್ರ ಹಾಗೂ ನಟ ನಿಖೀಲ್‌ ರಾಮನಗರದಲ್ಲಿ ಪ್ರಚಾರ ಕೈಗೊಂಡಿದ್ದಾರೆ.

ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್‌ ರಾಜ್ಯದ ವಿವಿಧೆಡೆ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ ದಲ್ಲಿರುವುದರಿಂದ ಅವರ ಪತ್ನಿ ಉಷಾ ಕನಕಪುರದಲ್ಲಿ ಪ್ರಚಾರದಲ್ಲಿ ತೊಡಗಿದ್ದಾರೆ. ಮೈಸೂರಿನಲ್ಲಿಯೂ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ಮಾಡಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅವರ ಸೊಸೆ ಸ್ಮಿತಾ ರಾಕೇಶ್‌ ಪ್ರಚಾರ ನಡೆಸುತ್ತಿದ್ದಾರೆ.

ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿ ಜೆಡಿಎಸ್‌ ಅಭ್ಯರ್ಥಿ ರಾಮಚಂದ್ರ ಪರ ಅವರ ಸೊಸೆ, ಚಿತ್ರನಟಿ ಅಮೂಲ್ಯ ಪ್ರಚಾರ
ನಡೆಸುತ್ತಿದ್ದಾರೆ. ಸರ್ವಜ್ಞನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕೆ.ಜೆ.ಜಾರ್ಜ್‌ ಪರ ಪುತ್ರ ರಾಣಾ ಜಾರ್ಜ್‌, ಗೋವಿಂದರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪುತ್ರ ಅರುಣ್‌ ಸೋಮಣ್ಣ ಪ್ರಚಾರದಲ್ಲಿ ತೊಡಗಿದ್ದಾರೆ.

ಕೆ.ಆರ್‌.ನಗರದಲ್ಲಿ ಜೆಡಿಎಸ್‌ ಅಭ್ಯರ್ಥಿ ಸಾರಾ ಮಹೇಶ್‌ ಪರ ಪುತ್ರ ಜಯಂತ್‌, ಹುಣಸೂರಲ್ಲಿ ಜೆಡಿಎಸ್‌ ಅಭ್ಯರ್ಥಿ ಎಚ್‌. ವಿಶ್ವನಾಥ್‌ ಪರ ಪುತ್ರರಾದ ಅಮಿತ್‌,ಸಂತೋಷ್‌ ಮತ್ತು ಪೂರ್ವಜ್‌, ನಂಜನಗೂಡಲ್ಲಿ ಬಿಜೆಪಿ ಅಭ್ಯರ್ಥಿ ಹರ್ಷವರ್ಧನ ಪರ ಮಾಜಿ ಸಚಿವ ಶ್ರೀನಿವಾಸ ಪ್ರಸಾದ್‌, ಚಾಮುಂಡೇಶ್ವರಿಯಲ್ಲಿ ಜೆಡಿಎಸ್‌ ಅಭ್ಯರ್ಥಿ ಜಿ.ಟಿ.ದೇವೇಗೌಡ ಅವರ ಪರ ಪುತ್ರ ಹರೀಶ್‌ ಗೌಡ, ಹೊಳೆನರಸೀಪುರದಲ್ಲಿ ಜೆಡಿಎಸ್‌ ಅಭ್ಯರ್ಥಿ ರೇವಣ್ಣ ಪರ ಪುತ್ರ ಪ್ರಜ್ವಲ್‌, ಪತ್ನಿ ಭವಾನಿ ಪ್ರಚಾರ ನಡೆಸುತ್ತಿದ್ದಾರೆ.

ಕೊಪ್ಪಳದಲ್ಲಿ ಬಿಜೆಪಿ ಅಭ್ಯರ್ಥಿ ಅಮರೇಶ ಕರಡಿ ಪರ ಪತ್ನಿ ಮಂಜುಳಾ, ಸಹೋದರ ಜಿಪಂ ಸದಸ್ಯ ಗವಿಸಿದಟಛಿಪ್ಪ ಕರಡಿ ಹಾಗೂ ತಂದೆ ಸಂಸದ ಸಂಗಣ್ಣ ಕರಡಿ ಪ್ರಚಾರಕ್ಕಿಳಿದಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ ಪರ ತಂದೆ ಬಸವರಾಜ ಹಿಟ್ನಾಳ, ಸಹೋದರ ಜಿಪಂ ಅಧ್ಯಕ್ಷ ರಾಜಶೇಖರ ಹಿಟ್ನಾಳ ಪ್ರಚಾರಕ್ಕಿಳಿದಿದ್ದಾರೆ.

ಕಲಬುರಗಿ ದಕ್ಷಿಣ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಬಸವರಾಜ ಡಿಗ್ಗಾವಿ ಪರ ಪತ್ನಿ ನಾಗರತ್ನಾ ಡಿಗ್ಗಾವಿ ಕಲಬುರಗಿ ಪಟ್ಟಣದ
ಕುಂಬಾರಗಲ್ಲಿಯಲ್ಲಿ ಮನೆಮನೆಗೆ ತೆರಳಿ ಮತಯಾಚಿಸಿದರು. ಚಿತ್ತಾಪುರ ಕಾಂಗ್ರೆಸ್‌ ಅಭ್ಯರ್ಥಿ ಸಚಿವ ಪ್ರಿಯಾಂಕ್‌ ಖರ್ಗೆ ಪರ ಅವರ ಪತ್ನಿ ಶೃತಿ ಖರ್ಗೆ ಕಮಕನೂರಿನಲ್ಲಿ ಮತಯಾಚಿಸಿದರು. ಕೊಪ್ಪಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಮರೇಶ ಕರಡಿ ಪರ ಅವರ ಪತ್ನಿ ಮಂಜುಳಾ ಮತಯಾಚಿಸಿದರು. ಕನಕಗಿರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶಿವರಾಜ ತಂಗಡಗಿ ಪರ ಪತ್ನಿ ವಿದ್ಯಾ ತಂಗಡಗಿ ಮತಯಾಚಿಸಿದರು.ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಕಾಂಗ್ರೆಸ್‌ ಅಭ್ಯರ್ಥಿ ಅಪ್ಪಾಜಿ ನಾಡಗೌಡರ ಪತ್ನಿ ಸುವರ್ಣಾ ರೋಡ್‌ಶೋನಲ್ಲಿ ಪಾಲ್ಗೊಂಡು ಪತಿ ಪರ ಪ್ರಚಾರ ನಡೆಸಿದರು.

ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಸಿ.ಟಿ.ರವಿ ಅವರ ಪರ ಅವರ ಪತ್ನಿ ಪಲ್ಲವಿ ರವಿ, ಚಿಕ್ಕಮಗಳೂರು ಕಾಂಗ್ರೆಸ್‌ ಅಭ್ಯರ್ಥಿ ಬಿ.ಎಲ್‌. ಶಂಕರ್‌ ಪರ ಅವರ ಪತ್ನಿ ಮಲ್ಲಿಕಾ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಪ್ರಚಾರ ನಡೆಸಿದರು.

ಟಾಪ್ ನ್ಯೂಸ್

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.