ಚಾಮುಂಡೇಶ್ವರಿ ಜತೆ ಬಸವಕಲ್ಯಾಣದ ಮೊರೆ


Team Udayavani, Apr 6, 2018, 6:00 AM IST

Elections,CM-Siddaramaiah.jpg

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಯಾವ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಬೇಕು ಎನ್ನುವ ಗೊಂದಲದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ಪಕ್ಷದ ಆಂತರಿಕ ವರದಿಯಿಂದಲೇ ತಲ್ಲಣರಾಗಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಚಾಮುಂಡೇಶ್ವರಿ ಕ್ಷೇತ್ರದ  ಹೊರತಾಗಿ ಮತ್ತೂಂದು ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಕಾಂಗ್ರೆಸ್‌ ಪಕ್ಷವೇ ಗೆದ್ದು ಮತ್ತೆ ಅಧಿಕಾರಕ್ಕೆ ಬಂದಲ್ಲಿ ಮುಖ್ಯಮಂತ್ರಿ ಹುದ್ದೆಯನ್ನು ಅಬಾಧಿತವಾಗಿ ಉಳಿಸಿಕೊಳ್ಳಲು ತಮ್ಮ ಸ್ಪರ್ಧೆ ಹೇಗಿರಬೇಕು ಎನ್ನುವ ಬಗ್ಗೆ ಗುಪ್ತಚರ ಇಲಾಖೆಯಿಂದ ಮತ್ತು ಖಾಸಗಿ ತಂಡದಿಂದ ವರದಿ ತರಿಸಿಕೊಂಡಿದ್ದಾರೆ. ಆದರೆ, ಈ ಎರಡೂ ವರದಿಗಳಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಈ ಬಾರಿ ಸೋಲು ಖಚಿತ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಹೀಗಾಗಿ ಮುಖ್ಯಮಂತ್ರಿ ಸ್ಪರ್ಧೆಗೆ ಬಸವಣ್ಣನ ಕರ್ಮಭೂಮಿ ಬಸವಕಲ್ಯಾಣ ಹೆಚ್ಚು ಸೂಕ್ತ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿವೆ ಎಂದು ಸಿಎಂ ಆಪ್ತ ವಲಯದ ಮೂಲಗಳು “ಉದಯವಾಣಿ’ಗೆ ತಿಳಿಸಿವೆ. ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದ ಬಗ್ಗೆ ಭಾವನಾತ್ಮಕ ಸಂಬಂಧ ಇರಿಸಿಕೊಂಡಿರುವುದರಿಂದ ಅಲ್ಲೆ ಸ್ಪರ್ಧೆಗೆ ಇಚ್ಛಿಸಿದ್ದು, ಗೆಲುವಿನ ಓಟ ಮುಂದುವರಿಸಲು ಬಸವಕಲ್ಯಾಣವ ನ್ನು ಎರಡನೇ ಕ್ಷೇತ್ರವಾಗಿ ಆಯ್ಕೆ ಮಾಡಿಕೊಳ್ಳಬೇಕೆಂದು ಸಲಹೆ ನೀಡಲಾಗಿದೆ.

ಲಿಂಗಾಯತ-ವೀರಶೈವ ಪ್ರತ್ಯೇಕ ಧರ್ಮದ ಬಗ್ಗೆ ಸಿದ್ದರಾಮಯ್ಯ ಸರ್ಕಾರ ತೆಗೆದುಕೊಂಡಿರುವ ನಿಲುವು ಬಸವಕಲ್ಯಾಣದಲ್ಲಿ ಅವರಿಗೆ ವರವಾಗಿ ಪರಿಣಮಿಸುವ ಸಾಧ್ಯತೆ ಇದೆ. ಲಿಂಗಾಯತ ಧರ್ಮಗುರು ಮಾತೆ ಮಹಾದೇವಿ ಅವರು ಪ್ರತ್ಯೇಕಧರ್ಮದ ಚಳವಳಿಯಲ್ಲಿ ಮುಂಚೂಣಿಯಲ್ಲಿರುವುದು ಮತ್ತು ಸಿದ್ದರಾಮಯ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಅದಕ್ಕೆ ಪೂರಕವಾಗಿರುವುದು ಬಸವಕಲ್ಯಾಣ ಕ್ಷೇತ್ರ ಆಯ್ಕೆ ಮಾಡಿಕೊಳ್ಳುವ ಶಿಫಾರಸಿನ ಪ್ರಮುಖ ಅಂಶ ಎಂದು ಸಿಎಂ ಕಚೇರಿ ಮೂಲಗಳು ಸ್ಪಷ್ಟಪಡಿಸಿವೆ.

ಅದರ ಜತೆಗೆ ಬಸವಣ್ಣನ ಅನುಭವ ಮಂಟಪ ಕಾಮಗಾರಿಗೆ ಸಿದ್ದರಾಮಯ್ಯ ಸರ್ಕಾರ 100 ಕೋಟಿ ಅನುದಾನ ಘೋಷಿಸಿದ್ದು, ಈಗಾಗಲೇ 10 ಕೋಟಿ ರೂ. ಬಿಡುಗಡೆಯಾಗಿದೆ. ಇದು ಮಾತೆ ಮಹಾದೇವಿ ಹೋರಾಟಕ್ಕೆ ಸಿಕ್ಕ ಗೌರವ ಕೂಡ. ಇದು ಸಿದ್ದರಾಮಯ್ಯ ಅವರಿಗೂ ಆ ಕ್ಷೇತ್ರದ ಲಿಂಗಾಯತರ ಮತಭರವಸೆ ಸಿಗುವ ಅವಕಾಶ ಇದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಚಾಮುಂಡೇಶ್ವರಿ ಮತ್ತು ವರುಣಾ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ಸ್ಪರ್ಧಿಸುವುದು ಬಹುತೇಕ ಖಚಿತ. ಆದರೆ, ಅವರಿಬ್ಬರನ್ನು ಸೋಲಿಸಲು ಬಿಜೆಪಿ ಮತ್ತು ಜೆಡಿಎಸ್‌ ರಣತಂತ್ರ ಹೇರಿದ್ದು, ಒಳ ಒಪ್ಪಂದದ ಮೂಲಕ ಚಾಮುಂಡೇಶ್ವರಿಯಲ್ಲಿ ಜೆಡಿಎಸ್‌ನ ಜಿ.ಟಿ.ದೇವೇಗೌಡ ಅವರನ್ನು ಮತ್ತು ವರುಣಾದಲ್ಲಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರನ್ನು ಗೆಲ್ಲಿಸುವ ಬಗ್ಗೆ ತಯಾರಿ ನಡೆದಿದೆ ಎನ್ನಲಾದ ಮಾಹಿತಿ ಸಿದ್ದರಾಮಯ್ಯ ಅವರನ್ನು ಗಂಭೀರವಾಗಿ ಯೋಚಿಸುವಂತೆ ಮಾಡಿದೆ. ರಾಜ್ಯದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ, ಹೆಣೆದಿರುವ ತಂತ್ರ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಕೆಡಹುವ ಅವಕಾಶ ಹೆಚ್ಚಿದೆ ಎನ್ನುವುದೂ ಸಿದ್ದರಾಮಯ್ಯ ಅವರಿಗೆ ನುಂಗಲಾರದ ತುತ್ತಾಗಿದೆ.

ಇದರ ಜತೆಯಲ್ಲೇ ಬಸವಕಲ್ಯಾಣದ ಹಾಲಿ ಶಾಸಕ ಜೆಡಿಎಸ್‌ನ‌ ಮಲ್ಲಿಕಾರ್ಜುನ ಖೂಬಾ ಅವರು ಬಿಜೆಪಿ ಸೇರಿರುವುದು ಮತ್ತು ಬಿಜೆಪಿಯ ಮಾಜಿ ಶಾಸಕ ಎಂ.ಜಿ. ಮುಳೆ ಜೆಡಿಎಸ್‌ ಕದ ತಟ್ಟಿರುವುದು ಬಿಜೆಪಿಯಲ್ಲಿ ಬಂಡಾಯದ ಬಿಸಿ ಹೆಚ್ಚಿಸಿದೆ. ಈ ಬೆಳವಣಿಗೆ ಮತ್ತು  ಕ್ಷೇತ್ರದ ಜಾತಿ ಲೆಕ್ಕಾಚಾರ ಸಿದ್ದರಾಮಯ್ಯ ಅವರಿಗೆ ಲಾಭವಾಗಿ ಪರಿಣಮಿಸಬಹುದು ಎಂಬ ವಿವರ ವರದಿಯಲ್ಲಿದೆ.

ಬಸವಕಲ್ಯಾಣ ಯಾಕೆ? ವರಿದಿಯಲ್ಲಿ ಏನಿದೆ?
– ಬಸವಕಲ್ಯಾಣದ ಪ್ರಭಾವಿ ಸಮುದಾಯಗಳು: ರೆಡ್ಡಿಗಳು, ಹಿಂದುಳಿದವರು, ಪರಿಶಿಷ್ಟ (ಬಲ), ಪರಿಶಿಷ್ಟ (ಎಡ), ಲಂಬಾಣಿಗಳು, ಮುಸ್ಲಿಮರು, ಮರಾಠರು, ಲಿಂಗಾಯತರು.
– ಪರಿಶಿಷ್ಟ (ಎಡ) ಮತ್ತು ಪರಿಶಿಷ್ಟ (ಬಲ), ಲಂಬಾಣಿ, ಇತರ ಹಿಂದುಳಿದ ವರ್ಗದವರಲ್ಲಿ ಶೇಕಡಾ 75ಕ್ಕಿಂತ ಹೆಚ್ಚು ಸಿದ್ದರಾಮಯ್ಯ ಪರ ಒಲವು.
– ರೆಡ್ಡಿಗಳಲ್ಲಿ ಶೇ.30 ಮತ್ತು ಮರಾಠ ಸಮುದಾಯದಲ್ಲಿ ಶೇ.20 ಸಿದ್ದರಾಮಯ್ಯ ಅವರಿಗೆ ಮತ ಪರಿವರ್ತನೆಯಾಗಬಹುದು.
– ಲಿಂಗಾಯತರಲ್ಲಿ ಶೇಕಡಾ 25 ಮತಗಳು ಸಿದ್ದರಾಮಯ್ಯ ಪರವಾಗಬಹುದು. ಇದು ರಾಜ್ಯಾದ್ಯಂತ ಲಿಂಗಾಯತ ಮತ ವಿಭಜನೆಯ ದಿಕ್ಸೂಚಿಯೂ ಆಗಬಹುದು.
– ಮುಸ್ಲಿಮರ ಶೇಕಡಾ 90 ಮತ್ತು ಕುರುಬರ ಶೇ. 95 ಮತಗಳನ್ನು ಸಿದ್ದರಾಮಯ್ಯ ಸೆಳೆಯಬಹುದು.
– ಬಿಜೆಪಿಯಿಂದ ಮಲ್ಲಿಕಾರ್ಜುನ ಖೂಬಾ, ಜೆಡಿಎಸ್‌ನಿಂದ ಎಂ.ಜಿ. ಮುಳೆ ಅಭ್ಯರ್ಥಿಗಳಾಗುವುದು ಬಹುತೇಕ ಖಚಿತ.
– ಖೂಬಾ ಅವರಿಗೆ ಲಿಂಗಾಯತರ ಶೇ. 70 ಮತಗಳು ಬೀಳುವ ಸಾಧ್ಯತೆಯಿದ್ದು, ವಿಜಯಿಯಾಗಲು ಕಠಿಣ ಹಾದಿಯಿದೆ.

ಬಸವಕಲ್ಯಾಣದಲ್ಲಿ ಮತದಾರರು
ಲಿಂಗಾಯತರು-30,000
ಮುಸಲ್ಮಾನರು- 40,000
ಹಿಂದುಳಿದ ವರ್ಗ- 15,000
ಪರಿಶಿಷ್ಟ ಜಾತಿ (ಎಡ ಮತ್ತು ಬಲ)- 30,000
ಮರಾಠರು-30,000

– ನವೀನ್‌ ಅಮ್ಮೆಂಬಳ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.