ನಾನು ಅಹಿಂದ; ಸರಕಾರವಲ್ಲ: ಸಿಎಂ


Team Udayavani, Mar 29, 2017, 2:22 AM IST

Siddhu-30-3.jpg

ಬೆಂಗಳೂರು: ‘ಅಹಿಂದ’ ಪರ ಎಂದು ಹೇಳಿಕೊಳ್ಳಲು ನನಗೆ ಮುಜುಗರವಿಲ್ಲ. ಆದರೆ, ನಮ್ಮ ಸರಕಾರ ಅಹಿಂದಾಗೆ ಮಾತ್ರ ಸೀಮಿತವೂ ಅಲ್ಲ. ಸಾಮಾಜಿಕ ನ್ಯಾಯ ನಮ್ಮ ಬದ್ಧತೆ, ಎಲ್ಲ ಜಾತಿ ಸಮುದಾಯದವರನ್ನು ಒಳಗೊಂಡ ಸಮಗ್ರ ಅಭಿವೃದ್ಧಿ ನಮ್ಮ ನಂಬಿಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್‌ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, ಅಹಿಂದ ಪರ ಹಾಗೂ ಚುನಾವಣಾ ದೃಷ್ಟಿಯ ಬಜೆಟ್‌, ಸಾಲದ ಭಾರ ಹೊರಿಸಿದ ಸರಕಾರ ಎಂಬ ಟೀಕೆಗಳಿಗೆ ತನ್ನದೇ ಆದ ಧಾಟಿಯಲ್ಲಿ ತಿರುಗೇಟು ನೀಡಿ, ಶೇ. 24.1 ರಷ್ಟಿರುವ ದಲಿತರು, ಶೇ. 15ರಷ್ಟಿರುವ ಅಲ್ಪಸಂಖ್ಯಾಕರು, ಶೇ. 27.5 ರಷ್ಟಿರುವ ಹಿಂದುಳಿದ ವರ್ಗದವರನ್ನು ಬಿಟ್ಟು ಸಮಗ್ರ ಅಭಿವೃದ್ಧಿ ಹೇಗೆ ಸಾಧ್ಯ? ಹಾಗೆಂದು ಬೇರೆ ವರ್ಗದವರನ್ನೂ ನಿರ್ಲಕ್ಷ್ಯ ಮಾಡುವ ಪ್ರಶ್ನೆಯೇ ಇಲ್ಲ. ವಿದ್ಯಾಸಿರಿ ಯೋಜನೆಯಡಿ 3 ಲಕ್ಷ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ 15 ಸಾವಿರ ರೂ. ಪ್ರೋತ್ಸಾಹಧನ ನೀಡಲಾಗಿದೆ. ಇದು ಕೇವಲ ಒಂದು ವರ್ಗಕ್ಕೆ ಮಾತ್ರ ಸೇರುತ್ತಾ. ವಿಪಕ್ಷ ಬಿಜೆಪಿ ನಮ್ಮ ಬಜೆಟ್‌ ಅನ್ನು ಜಾತಿ, ಧರ್ಮ ಆಧಾರದ ‘ಕನ್ನಡಕ’ ಅಥವಾ ದುರ್ಬೀನು ಹಾಕಿಕೊಂಡು ನೋಡುತ್ತಿದೆಯಷ್ಟೇ ಎಂದರು.

ಬಿಬಿಎಂಪಿಯ 198 ವಾರ್ಡ್‌ಗಳಲ್ಲಿ ರಿಯಾಯಿತಿ ದರದಲ್ಲಿ ಊಟ, ತಿಂಡಿ ಪೂರೈಸಲು ಉದ್ದೇಶಿಸಿರುವ ನಮ್ಮ ಕ್ಯಾಂಟೀನ್‌ಗೆ ‘ಇಂದಿರಾ’ ಕ್ಯಾಂಟೀನ್‌ ಎಂದು ನಾಮಕರಣ ಮಾಡುವುದಾಗಿ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು. ರೈತರ ಸಾಲ ಮನ್ನಾ ಮಾಡುವ ವಿಚಾರದಲ್ಲಿ ಈಗಲೂ ನಾವು ಮುಕ್ತ ಮನಸ್ಸು ಹೊಂದಿದ್ದೇವೆ ಎಂದು ಪುನರುಚ್ಚರಿಸಿದ ಸಿದ್ದರಾಮಯ್ಯ, ಕೇಂದ್ರ ಸರಕಾರ ವಾಣಿಜ್ಯ ಬ್ಯಾಂಕ್‌ಗಳಲ್ಲಿ ಪಡೆದ ಶೇ. 50ರಷ್ಟು ಸಾಲವನ್ನು ಮನ್ನಾ ಮಾಡಿದರೆ ನಾವೂ ಸಹಕಾರ ಸಂಘಗಳಲ್ಲಿ ಮಾಡಿರುವ  ಶೇ. 50ರಷ್ಟು ಸಾಲ ಮನ್ನಾ ಮಾಡಲು ಸಿದ್ಧ ಎಂದು ಸಿದ್ದರಾಮಯ್ಯತಿಳಿಸಿದರು.

ಬಿಜೆಪಿಯವರು ಹಿಂದೆ ಗುಜರಾತ್‌ ಮಾದರಿ ಎನ್ನುತ್ತಿದ್ದರು. ಆದರೆ, ಈಗ ಯಾಕೋ ಉತ್ತರಪ್ರದೇಶ ಮಾದರಿ ಅಂತಿದ್ದಾರೆ. ಆದರೆ, ನಮಗೆ ಸಮಗ್ರ ಕರ್ನಾಟಕ ಅಭಿವೃದ್ಧಿಯೇ ಮಾದರಿ. ಬಿಜೆಪಿ ಏನೇ ಹೇಳಿದರೂ ಅದರ ಹಿಂದೆ ಆರೆಸ್ಸೆಸ್‌ ಇರುತ್ತದೆ. ಆರೆಸ್ಸೆಸ್‌ ಬಿಟ್ಟು ಬಿಜೆಪಿಯಿಲ್ಲ, ಬಿಜೆಪಿ ಬಿಟ್ಟು ಆರೆಸ್ಸೆಸ್‌ ಇಲ್ಲ. ಆರೆಸ್ಸೆಸ್‌ನ ರಾಜಕೀಯ ಮುಖವಾಡ ಅಥವಾ ಆಕಾರವೇ ಬಿಜೆಪಿ.
-ಸಿದ್ದರಾಮಯ್ಯ, ಮುಖ್ಯಮಂತ್ರಿ

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.