ಶಾಸಕ ಪುತ್ರನ ಗೂಂಡಾಗಿರಿ


Team Udayavani, Feb 19, 2018, 6:00 AM IST

nalapad.jpg

ಬೆಂಗಳೂರು: ಕಾಂಗ್ರೆಸ್‌ ಶಾಸಕ ಎನ್‌.ಎ ಹ್ಯಾರಿಸ್‌ ಪುತ್ರ ಮೊಹಮದ್‌ ನಲಪಾಡ್‌ ಹ್ಯಾರಿಸ್‌ ಹಾಗೂ ಆತನ ಬೆಂಬಲಿಗರು ಉದ್ಯಮಿಯೊಬ್ಬರ ಮಗ ವಿದ್ವತ್‌ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ದಬ್ಟಾಳಿಕೆ ಮೆರೆದಿದ್ದಾರೆ.

ಯುಬಿಸಿಟಿಯ “ಫ‌ರ್ಜಿ ಕೆಫೆ’ಯಲ್ಲಿ ಶನಿವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ವಿದ್ವತ್‌ ಮೇಲೆ ಹಲ್ಲೆ ನಡೆದಿದೆ. ಈ ಘಟನೆ ಸಂಬಂಧ ವಿದ್ವತ್‌ ಸ್ನೇಹಿತ ಪ್ರವೀಣ್‌ ವೆಂಕಟಾಚಲಯ್ಯ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಐಪಿಸಿ ಕಲಂ 341, 504, 143 ಸೇರಿದಂತೆ ಇನ್ನಿತರೆ ಕಲಂಗಳ ಅಡಿಯಲ್ಲಿ ಮೊಹಮದ್‌ ನಲಪಾಡ್‌ ಹ್ಯಾರಿಸ್‌ ಹಾಗೂ ಇನ್ನಿತರರ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ನಲಪಾಡ್‌ ಪ್ರಕರಣದ ಮೊದಲನೇ ಆರೋಪಿಯನ್ನಾಗಿ ಪರಿಗಣಿಸಲಾಗಿದ್ದು, ಹಲ್ಲೆ ಪ್ರಕರಣ ವಿವಾದದ ಸ್ವರೂಪ ಪಡೆಯುತ್ತಿದ್ದಂತೆ ಆತ ತಲೆ  ಮರೆಸಿಕೊಂಡಿದ್ದಾನೆ.

ಈಗಾಗಲೇ ತನಿಖೆ ಚುರುಕುಗೊಳಿಸಿರುವ ಪೊಲೀಸರು ಶಾಸಕರ ಪುತ್ರ ಹಲ್ಲೆ ನಡೆಸಿದ ಘಟನಾವಳಿಗಳು ದಾಖಲಾಗಿವೆ ಎನ್ನಲಾದ ಕೆಫೆಯಲ್ಲಿನ ಸಿಸಿಟಿವಿ ಪೂಟೇಜ್‌ಗಳನ್ನು ವಶಕ್ಕೆ  ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ಮಂಜುನಾಥ್‌, ಅಭಿಷೇಕ್‌, ಅರುಣ್‌, ಭಾಸ್ಕರ್‌ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ತಲೆಮರೆಸಿಕೊಂಡಿರುವ ಆರೋಪಿ ನಲಪಾಡ್‌ ಬಂಧನಕ್ಕೆ ಬಲೆ ಬೀಸಿದ್ದಾರೆ. ಖ್ಯಾತ ಉದ್ಯಮಿ ಲೋಕನಾಥ್‌ ಎಂಬವರ ಮಗನಾದ ವಿದ್ವತ್‌ ಗಂಭೀರವಾಗಿ ಹಲ್ಲೆಗೊಳಗಾಗಿದ್ದಾರೆ. ಕಣ್ಣು, ತುಟಿ, ಮುಖ ಊದಿಕೊಂಡಿದ್ದು, ಮಾತನಾಡಲಾಗದ ಸ್ಥಿತಿ ತಲುಪಿದ್ದಾರೆ. ಸದ್ಯ ಮಲ್ಯ ಆಸ್ಪತ್ರೆಯಲ್ಲಿ ವಿದ್ವತ್‌ಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಶಾಸಕರ ಪುತ್ರನ ದರ್ಪ!
ಪೀಣ್ಯಾ ಕೈಗಾರಿಕಾ ವಲಯದಲ್ಲಿ ಸ್ವಂತ ಉದ್ದಿಮೆ ಹೊಂದಿರುವ ಲೋಕನಾಥ್‌ ಪುತ್ರ ವಿದ್ವತ್‌ ವಿದೇಶದಲ್ಲಿ ಎಂಬಿಎ ಪದವಿ ಪೂರ್ಣಗೊಳಿಸಿದ್ದು, ಇತ್ತೀಚೆಗೆ ನಗರಕ್ಕೆ ವಾಪಾಸ್‌ ಆಗಿದ್ದರು. ಶನಿವಾರ ರಾತ್ರಿ 10ರ ಸುಮಾರಿಗೆ ಯುಬಿ ಸಿಟಿಯ “ಫ‌ರ್ಜಿ ಕೆಫೆ’ಗೆ ಸ್ನೇಹಿತರ ಜೊತೆ ಊಟಕ್ಕೆ ತೆರಳಿದ್ದರು. ಕೆಲವೇ ನಿಮಿಷಗಳಲ್ಲಿ ನಲಪಾಡ್‌ ಹ್ಯಾರಿಸ್‌ ಕೂಡ ಬೆಂಬಲಿಗರ ಜೊತೆ ಆಗಮಿಸಿದ್ದ. ಅಕ್ಕ-ಪಕ್ಕದ ಟೇಬಲ್‌ಗ‌ಳಲ್ಲಿ ಕುಳಿತುಕೊಂಡಿದ್ದರು.

ಕಳೆದ ನಾಲ್ಕು ವಾರಗಳ ಹಿಂದೆ ನಡೆದಿದ್ದ ಅಪಘಾತದಲ್ಲಿ ಕಾಲಿಗೆ ಪೆಟ್ಟುಮಾಡಿಕೊಂಡಿದ್ದ ವಿದ್ವತ್‌, ಸ್ವಲ್ಪ ಮುಂದಕ್ಕೆ ಕಾಲು ಚಾಚಿಕುಳಿತುಕೊಂಡಿದ್ದರು. ಇದನ್ನು ನೋಡಿದ ನಲಪಾಡ್‌, ಕಾಲು ಮಡಿಚಿಕೊಂಡು ಸರಿಯಾಗಿ ಕುಳಿತುಕೋ ಎಂದು ವಿದ್ವತ್‌ಗೆ ಸೂಚಿಸಿದ್ದಾರೆ. ಇದಕ್ಕೆ ಅಪಘಾತದಿಂದ ಕಾಲಿಗೆ ಪೆಟ್ಟಾಗಿದೆ, ಮಡಚಿ ಕುಳಿತುಕೊಳ್ಳಲು ಕಷ್ಟ ಎಂದು ವಿದ್ವತ್‌ ಪ್ರತಿಕ್ರಿಯಿಸಿದ್ದಾರೆ. ಇದೇ ವಿಚಾರಕ್ಕೆ ಪರಸ್ಪರ ಮಾತಿನ ಚಕಮಕಿ ನಡೆದಿದೆ. ಕೊನೆಗೆ ನಲಪಾಡ್‌ ವಿದ್ವತ್‌ ಕಪಾಳಕ್ಕೆ ಹೊಡೆದಿದ್ದಾರೆ. ಬಳಿಕ ಆತನ ಬೆಂಬಲಿಗರೊಡಗೂಡಿ ವಿದ್ವತ್‌ ಮುಖ, ಮೂಗು ಎಲ್ಲೆಂದರಲ್ಲಿ ಹೊಡೆದು, ಕಾಲಿನಿಂದ ಒದ್ದು ತೀವ್ರ ಹಲ್ಲೆ ನಡೆಸಿದ್ದಾರೆ. ವಿದ್ವತ್‌ ಸ್ನೇಹಿತರು ಸಹಾಯಕ್ಕೆ ಬಂದರೂ ಅವರನ್ನೂ ಬೆದರಿಸಿ ಸುಮ್ಮನಿರಿಸಿದ್ದಾರೆ. ವಿದ್ವತ್‌ ಕ್ಷಮೆ ಕೇಳುತ್ತಿದ್ದರೂ ಸುಮ್ಮನಾಗದೇ ಹಲ್ಲೆ ಮುಂದುವರಿಸಿದ್ದರು. ಇದರಿಂದ ತೀವ್ರ ಅಸ್ವಸ್ಥನಾಗಿ ವಿದ್ವತ್‌ ಕೆಳಗೆ ಉರುಳಿಬಿದ್ದ ಎಂದು ದೂರಿನಲ್ಲಿ ವಿವರಿಸಲಾಗಿದೆ. ಬಳಿಕ ಕೆಫೆ ಸಿಬ್ಬಂದಿ ಜಗಳ ಬಿಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಬಿಜೆಪಿ- ಆಪ್‌ ಪ್ರತಿಭಟನೆ :
ಶಾಸಕರ ಪುತ್ರನ ಈ ಗೂಂಡಾಗಿರಿ ಪ್ರಕರಣ ಭಾನುವಾರ ಮಧ್ಯಾಹ್ನದ ವೇಳೆ ತೀವ್ರ ಸ್ವರೂಪ ಪಡೆದುಕೊಂಡಿತು. ತಲೆಮರೆಸಿಕೊಂಡಿರುವ ನಲಪಾಡ್‌ ಬಂಧನಕ್ಕೆ ಆಗ್ರಹಿಸಿದ ಬಿಜೆಪಿ ಕಾರ್ಯಕರ್ತರು ಮಲ್ಯ ಆಸ್ಪತ್ರೆ ಮುಂಭಾಗ  ಕೆಲ ಕಾಲ ರಸ್ತೆ ತಡೆ ನಡೆಸಿ ಪ್ರತಿಭಟನೆ  ನಡೆಸಿದರು.

ಇದಾದ ಬಳಿಕ ಪೊಲೀಸರು ಸೂಕ್ತ ತನಿಖೆ ನಡೆಸದೇ ಪ್ರಕರಣ ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ ಶಾಂತಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಸಿಎಂ ಸಿದ್ದರಾಮಯ್ಯ ಹಾಗೂ ಶಾಸಕ ಹ್ಯಾರಿಸ್‌ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರನ್ನು ಪೊಲೀಸರು ಸಮಾಧಾನಪಡಿಸಲು ಹರಸಾಹಸ ಪಡುವಂತಾಯಿತು. ಕೊನೆಗೆ ಕೂಡಲೇ ಆರೋಪಿ ನಲಪಾಡ್‌ ಬಂಧಿಸುವಂತೆ ಆಗ್ರಹಿಸಿ ಪೊಲೀಸ್‌ ಅಧಿಕಾರಿಗಳಿಗೆ ಮನವಿ ನೀಡಲಾಯಿತು.

ಇದಲ್ಲದೇ, ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹಾಗೂ ಕಾರ್ಯಕರ್ತರು ಶಾಂತಿನಗರದಲ್ಲಿರುವ ಶಾಸಕ ಹ್ಯಾರಿಸ್‌ ನಿವಾಸದ ಮುಂದೆ ಪ್ರತಿಭಟನೆ ನಡೆಸಿದರು. ಗೂಂಡಾ ಹ್ಯಾರಿಸ್‌, ಕಾಂಗ್ರೆಸ್‌ ಸರ್ಕಾರ ಗೂಂಡಾ ಸರ್ಕಾರ ಎಂದು ಘೋಷಣೆ ಕೂಗಿದರು. ಈ ವೇಳೆ ಹ್ಯಾರಿಸ್‌ ಬೆಂಬಲಿಗರು ಹಾಗೂ ಆಪ್‌ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು ಬಳಿಕ ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನೆ ತಿಳಿಗೊಳಿಸಿದರು.

ಆಸ್ಪತ್ರೆ ಬಳಿ ಬಂದು ಧಮ್ಕಿ!
ಮಾರಾಣಾಂತಿಕ ಹಲ್ಲೆಗೊಳಗಾದ ವಿದ್ವತ್‌ರನ್ನು ಕೂಡಲೇ ಆತನ ಸ್ನೇಹಿತರು ಮಲ್ಯ ಆಸ್ಪತ್ರೆಗೆ ದಾಖಲಿಸಿದ್ದು, ಅವರ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ವಿದ್ವತ್‌ ಸಹೋದರ ಸಾತ್ವಿಕ್‌ ಹಾಗೂ ತಂದೆ ಆಸ್ಪತ್ರೆ ಬಳಿಗೆ ಬಂದಿದ್ದರು. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವಿದ್ವತ್‌ಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಷ್ಟಾದ ಬಳಿಕವೂ 10-15 ನಿಮಿಷಗಳ ಅಂತರದಲ್ಲಿಯೇ ಮಲ್ಯ ಆಸ್ಪತ್ರೆ ಬಳಿ ಬೆಂಬಲಿಗರ ಜೊತೆ ಬಂದ ನಲಪಾಡ್‌, ವಿದ್ವತ್‌ ಸಹೋದರನ ಬಳಿ ತೆರಳಿ “ನಿನ್ನ ತಮ್ಮ ನಮಗೆ ಅವಾಜ್‌ ಹಾಕ್ತಾನೆ. ಈ ವಿಚಾರವನ್ನು ಇಲ್ಲಿಗೆ ಬಿಟ್ಟು ಬಿಡಿ, ಪೊಲೀಸರಿಗೆ ದೂರು ನೀಡಿದರೆ ಪರಿಣಾಮ ನೆಟ್ಟಗಿರಲ್ಲ’ ಎಂದು ಧಮಕಿ ಹಾಕಿ ವಾಪಾಸ್‌ ಬಂದಿದ್ದಾನೆ.

ಗೂಂಡಾಗಿರಿ ಇದೇ ಮೊದಲಲ್ಲ ?
ಶಾಸಕರ ಪುತ್ರ ನಲಪಾಡ್‌ ವಿರುದ್ಧ ಈ ಹಿಂದೆ 2016ರಲ್ಲಿ ಶಾಂತಿನನಗರದ ಪೆಬಲ್‌ ಬೇ ಪಬ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿಕೊಂಡು ಹಲ್ಲೆ ನಡೆಸಿದ್ದು ಹಾಗೂ ಬೌರಿಂಗ್‌  ಆಸ್ಪತ್ರೆಯ ಸೆಕ್ಯೂರಿಟಿಯೊಬ್ಬರ ಮೇಲೆಯೂ ಹಲ್ಲೆ ನಡೆಸಿದ್ದ ಆರೋಪಗಳು ಕೇಳಿ ಬಂದಿದ್ದವು.

ಟಾಪ್ ನ್ಯೂಸ್

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

prahlad-joshi

Congress ಪಕ್ಷದಿಂದ ಅಂಬೇಡ್ಕರ್‌ಗೆ ಅಗೌರವ: ಸಚಿವ ಜೋಶಿ ಆರೋಪ

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Chaluvaraya Swamy ಇಷ್ಟು ವರ್ಷ ಪೆನ್‌ಡ್ರೈವ್‌ ಇಟ್ಟುಕೊಂಡಿದ್ದೇಕೆ?

Chaluvaraya Swamy ಇಷ್ಟು ವರ್ಷ ಪೆನ್‌ಡ್ರೈವ್‌ ಇಟ್ಟುಕೊಂಡಿದ್ದೇಕೆ?

Prajwal Revanna ವಿರುದ್ಧ ಕ್ರಮಕ್ಕೆ ತಕರಾರಿಲ್ಲ: ಎಚ್‌.ಡಿ. ದೇವೇಗೌಡ

Prajwal Revanna ವಿರುದ್ಧ ಕ್ರಮಕ್ಕೆ ತಕರಾರಿಲ್ಲ: ಎಚ್‌.ಡಿ. ದೇವೇಗೌಡ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.