8ಕ್ಕೆ ಊಟಿ ಉದ್ಯಾನ “ಕರ್ನಾಟಕ ಸಿರಿ’ ಲೋಕಾರ್ಪಣೆ


Team Udayavani, Jan 2, 2018, 6:10 AM IST

OOty.jpg

ಬೆಂಗಳೂರು: “ಕಾವೇರಿ ನೀರು ಹಂಚಿಕೆ ವಿವಾದ’ ಕರ್ನಾಟಕ-ತಮಿಳುನಾಡಿನ ನಡುವೆ ಕಂದಕ ಸೃಷ್ಟಿಸಿದೆ. ಆದರೆ, ಊಟಿಯಲ್ಲಿ ಅರಳಲಿರುವ ಹೂವುಗಳು ಈ ಎರಡೂ ರಾಜ್ಯಗಳ ಹೃದಯಗಳನ್ನು ಬೆಸೆಯುವ ಸಂಪರ್ಕ ಕೊಂಡಿಯಾಗಿ ಮೂಡಿಬರಲಿವೆ.

ಹೌದು, ತಮಿಳುನಾಡಿನ ಊಟಿಯಲ್ಲಿ ರಾಜ್ಯ ತೋಟಗಾರಿಕಾ ಇಲಾಖೆಯಿಂದ ನಿರ್ಮಿಸಿದ ಬಹುನಿರೀಕ್ಷಿತ “ಕರ್ನಾಟಕ ಸಿರಿ’ ತೋಟಗಾರಿಕಾ ಉದ್ಯಾನ ಜನವರಿ 8ರಂದು ಉದ್ಘಾಟನೆಗೊಳ್ಳಲಿದೆ. ತೋಟಗಾರಿಕೆ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ, ಪ್ರವಾಸೋದ್ಯಮ ಸಚಿವ ಪ್ರಿಯಾಂಕ ಖರ್ಗೆ, ತಮಿಳುನಾಡಿನ ತೋಟಗಾರಿಕೆ ಮತ್ತು ಪ್ರವಾಸೋದ್ಯಮ ಸಚಿವ ದೊರೈಕಣ್ಣು ಸೇರಿ ಎರಡೂ ರಾಜ್ಯಗಳ ಹಿರಿಯ ತೋಟಗಾರಿಕೆ ಮತ್ತು ಪ್ರವಾಸೋದ್ಯಮ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಊಟಿಯ ಜೈವಿಕ ಉದ್ಯಾನಕ್ಕೆ ವರ್ಷಕ್ಕೆ ಸುಮಾರು 25 ಲಕ್ಷ ಜನ ಭೇಟಿ ನೀಡುತ್ತಾರೆ. ಅದರಿಂದ 10 ಕೋಟಿ ರೂ.ಗಳಷ್ಟು ಆದಾಯ ತಮಿಳುನಾಡಿನ ಸರ್ಕಾರಕ್ಕೆ ಸಿಗುತ್ತಿದೆ. ಆ ಪ್ರವಾಸಿಗರನ್ನು ನಮ್ಮ ಈ ಉದ್ಯಾನಕ್ಕೆ ಸೆಳೆಯುವ ಪ್ರಯತ್ನ ಇದಾಗಿದೆ. ಶೇ.80ರಷ್ಟು ಪ್ರವಾಸಿಗರು ಈ ಉದ್ಯಾನಕ್ಕೆ ಭೇಟಿ ನೀಡುವ ನಿರೀಕ್ಷೆ ಇದೆ ಎಂದು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ (ಉದ್ಯಾನಗಳು ಮತ್ತು ತೋಟಗಳು) ಎಂ. ಜಗದೀಶ್‌ ತಿಳಿಸಿದ್ದಾರೆ.

ಸುಮಾರು 38 ಎಕರೆ ಪ್ರದೇಶದ ಈ ಉದ್ಯಾನವು ಊಟಿಯ ಹೆಸರಾಂತ ಪ್ರವಾಸಿತಾಣವಾಗಿರುವ ಜೈವಿಕ ಉದ್ಯಾನದಿಂದ ನಾಲ್ಕು ಕಿ.ಮೀ. ಹಾಗೂ ಬಸ್‌ ನಿಲ್ದಾಣದಿಂದ ಒಂದೂವರೆ ಕಿ.ಮೀ. ದೂರದಲ್ಲಿದೆ. ಗಾಜಿನ ಮನೆಯಲ್ಲಿ 2,000 ಅಲಂಕಾರಿಕ ಹೂವಿನ ಗಿಡಗಳು, ಶೀತವಲಯದ ಅಪರೂಪ ಮತ್ತು ಆಕರ್ಷಕವಾದ 80ಕ್ಕೂ ಹೆಚ್ಚು ಸಸಿಗಳು, ಐದು ಎಕರೆ ಹುಲ್ಲುಗಾವಲು, ವಿವಿಧ ಶೈಲಿಯಲ್ಲಿ ಕತ್ತರಿಸಿದ ಆಕರ್ಷಕ ಗಿಡಗಳು (ಟೊಪಿಯಾರಿ), ಇಟಾಲಿಯನ್‌ ಶೈಲಿಯ ಉದ್ಯಾನ, ಫ‌ಸಲ್‌ ಶೈಲಿಯ ಉದ್ಯಾನ, ಎರಡು ಎಕರೆ ಟೀ ಎಸ್ಟೇಟ್‌. ಅತಿಥಿಗೃಹ ಮತ್ತು ವಾಹನ ನಿಲುಗಡೆ ಸ್ಥಳ. ಮಕ್ಕಳ ಆಕರ್ಷಣೆಗಾಗಿ ನೀಲಗಿರಿ ಕುರಿಮರಿಗಳನ್ನು ಇಲ್ಲಿ ಸಾಕಲಾಗಿದೆ. ಚಿಕ್ಕ ಕೊಳಗಳೂ ಇಲ್ಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಬಳವಳಿಯಾಗಿ ನೀಡಿದ ಭೂಮಿ: ಮೈಸೂರಿನ ಜಯಚಾಮರಾಜೇಂದ್ರ ಒಡೆಯರ್‌ ಈ ಉದ್ಯಾನದ ಜಮೀನನ್ನು ಇಲಾಖೆಗೆ ಬಳವಳಿಯಾಗಿ ನೀಡಿದ್ದರು. ಅದನ್ನೀಗ ಉದ್ಯಾನವಾಗಿ ಅಭಿವೃದ್ಧಿಪಡಿಸಲಾಗಿದೆ.  ತೋಟಗಾರಿಕಾ ತಜ್ಞ ಡಾ.ಎಂ.ಎಚ್‌.ಮರಿಗೌಡ ಅವರು ಇಲಾಖೆಯಲ್ಲಿ¨ªಾಗ, ಅವರ ಮನವಿಯ ಮೇರೆಗೆ ಮಹಾರಾಜರು 1940ರಲ್ಲಿ ಜಮೀನನ್ನು ನೀಡಿದ್ದರು. ಅಲ್ಲಿ ಆಲೂಗಡ್ಡೆ ಬಿತ್ತನೆ ಮೊಳಕೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿತ್ತು. ಈ ಕಾರ್ಯ 20 ವರ್ಷಗಳು ಮುಂದುವರಿಯಿತು. ರೋಗಬಾಧೆಯಿಂದಾಗಿ ಆ ಕೆಲಸ ಸ್ಥಗಿತಗೊಂಡಿತು.

ಬಳಿಕ ಕೆಲವು ವರ್ಷಗಳು ಊಟಿ ಕ್ಯಾರೇಟ್‌, ಸೇಬಿನ ಗಿಡಗಳು ಮತ್ತು ಶೀತವಲಯದಲ್ಲಿ ಬೆಳೆಯುವ ಹಣ್ಣಿನ ಸಸಿಗಳನ್ನು ಬೆಳೆಸಲಾಗಿತ್ತು. ಅವು ನಾಶವಾದ ನಂತರ ಹಲವು ವರ್ಷಗಳು ಈ ಜಮೀನು ಪಾಳು ಬಿದ್ದಿತ್ತು. ಇಲಾಖೆಯ ವಿಶೇಷ ಅಧಿಕಾರಿ ಮತ್ತು ಕೆಲ ಆಳುಗಳು ಜಮೀನಿನ ನಿರ್ವಹಣೆ ನೋಡಿಕೊಳ್ಳುತ್ತಿದ್ದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.