Drought ; ಉಡುಪಿ ಜಿಲ್ಲೆಯ ಕಾರ್ಕಳ ಸೇರಿ ರಾಜ್ಯದ 161 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ
ಬ್ರಹ್ಮಾವರ, ಮಂಗಳೂರು, ಮೂಡುಬಿದಿರೆ ಸಾಧಾರಣ ಬರ ಪೀಡಿತ ತಾಲೂಕು
Team Udayavani, Sep 14, 2023, 10:13 AM IST
ಬೆಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳ ಸೇರಿದಂತೆ ‘ರಾಜ್ಯದ 161 ತಾಲೂಕುಗಳು ಬರಪೀಡಿತ ಎಂದು ವಿಪತ್ತು ನಿರ್ವಹಣೆಗೆ ಸಂಬಂಧಿಸಿದ ಕರ್ನಾಟಕ ಸಚಿವ ಸಂಪುಟ ಉಪಸಮಿತಿ ತೀರ್ಮಾನಿಸಿದೆ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಬುಧವಾರ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒಪ್ಪಿಗೆ ಮೇರೆಗೆ ಬರಪೀಡಿತ ತಾಲೂಕುಗಳ ಪಟ್ಟಿಗೆ ಅಧಿಸೂಚನೆ ಹೊರಡಿಸಲಾಗುವುದು. ಕೇಂದ್ರ ಸರಕಾರದ ಮಾರ್ಗಸೂಚಿಗಳ ಪ್ರಕಾರ, ಸಮೀಕ್ಷೆಯನ್ನು ಅನುಸರಿಸಿ, 161 ತಾಲೂಕುಗಳಲ್ಲಿ ತೀವ್ರ ಬರ ಮತ್ತು 34 ತಾಲೂಕುಗಳಲ್ಲಿ ಮಧ್ಯಮ ಬರವಿದೆ. ಹೀಗಾಗಿ 195 ತಾಲೂಕುಗಳಲ್ಲಿ ಬರಗಾಲವಿದೆ’ ಎಂದು ಉಪ ಸಮಿತಿಯ ಮುಖ್ಯಸ್ಥ ಕೃಷ್ಣ ಬೈರೇಗೌಡ ಹೇಳಿದರು.
”40 ತಾಲೂಕುಗಳು ಮಳೆ ಕೊರತೆ ಎದುರಿಸುತ್ತಿವೆ, ಆದರೆ ಕೇಂದ್ರದ ಮಾರ್ಗಸೂಚಿಗಳ ಪ್ರಕಾರ ಬರಪೀಡಿತ ಎಂದು ಘೋಷಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ.ಈ 40 ತಾಲೂಕುಗಳಲ್ಲಿ, ನಾವು ಉಪಗ್ರಹ ಚಿತ್ರಣವನ್ನು ನೋಡಿದಾಗ, ಹಸಿರು ಹೊದಿಕೆ ಅಥವಾ ಸಸ್ಯವರ್ಗದ ಬೆಳವಣಿಗೆ ಮತ್ತು ತೇವಾಂಶದ ತೊಂದರೆ ಕಂಡುಬರುವುದಿಲ್ಲ. ಕೇಂದ್ರದ ಮಾರ್ಗಸೂಚಿಗಳ ಅಡಿಯಲ್ಲಿ ಇವು ಕಡ್ಡಾಯ ಅವಶ್ಯಕತೆಗಳಾಗಿರುವುದರಿಂದ, ಅಲ್ಲಿ ಮಳೆಯ ಕೊರತೆಯ ಹೊರತಾಗಿಯೂ, ನಾವು ಅವುಗಳನ್ನು ಬರಪೀಡಿತ ಎಂದು ಘೋಷಿಸಲು ಸಾಧ್ಯವಿಲ್ಲ”ಎಂದರು.
ರಾಜ್ಯದಲ್ಲಿ 31 ಜಿಲ್ಲೆಗಳಲ್ಲಿ ಒಟ್ಟು 236 ತಾಲೂಕುಗಳಿವೆ. “ನಾವು ಈ ವಿರೋಧಾತ್ಮಕ ವರದಿಗಳನ್ನು ಹೊಂದಿರುವುದರಿಂದ, ವೈಜ್ಞಾನಿಕವಾಗಿ ವಿಶ್ಲೇಷಿಸಿ, ಅಧ್ಯಯನ ನಡೆಸಿ 10 ದಿನಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯದ ನಾಲ್ಕು ಕೃಷಿ ವಿಶ್ವವಿದ್ಯಾಲಯಗಳು ಮತ್ತು ಒಂದು ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ಸಂಪುಟ ಉಪಸಮಿತಿ ಸೂಚಿಸಿದೆ ಎಂದರು.
ಬರ ಘೋಷಣೆಯಾದ ನಂತರ ಪೀಡಿತ ತಾಲೂಕುಗಳಲ್ಲಿ ಕಾರ್ಯಪಡೆಗಳನ್ನು ರಚಿಸಲಾಗುವುದು, ಕುಡಿಯುವ ನೀರು ಸರಬರಾಜು ಮಾಡಲು ಟ್ಯಾಂಕರ್ಗಳನ್ನು ವ್ಯವಸ್ಥೆ ಮಾಡಲು ಮತ್ತು ಬಾಡಿಗೆ ಬೋರ್ವೆಲ್ಗಳನ್ನು ನೀಡಲು ಹಣ ನೀಡಲಾಗುವುದು. ರೈತರಿಗೆ ಉಚಿತವಾಗಿ ಮೇವಿನ ಬೀಜಗಳನ್ನು ನೀಡಲಾಗುತ್ತಿದ್ದು, ಇದಕ್ಕಾಗಿ 20 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದ್ದು, ಪರಿಸ್ಥಿತಿಗೆ ಸ್ಪಂದಿಸಿ ಪರಿಹಾರ ನೀಡಲು ಸರ್ಕಾರ ಎಲ್ಲ ಪ್ರಯತ್ನಗಳನ್ನು ಪೂರ್ವಭಾವಿಯಾಗಿ ಮಾಡುತ್ತಿದೆ. ಬರಪೀಡಿತ ತಾಲೂಕುಗಳಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯಿದೆಯಡಿ 100ರಿಂದ 150 ವ್ಯಕ್ತಿಗಳ ದಿನಗಳನ್ನು ಹೆಚ್ಚಿಸಲಾಗುವುದು. ಈ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿಗಳು ಕುಡಿಯುವ ನೀರು ಪೂರೈಕೆಗೆ ಬಳಸಬಹುದಾದ 492 ಕೋಟಿ ರೂ., ನಮ್ಮ ಸರಕಾರ ದ ಬಳಿ 400 ಕೋಟಿ ಸಿದ್ಧವಿದೆ. ಡಿಸಿಗಳು ಹೆಚ್ಚಿನ ಮನವಿ ಮಾಡಿದರೆ ಹಣ ನೀಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ