ಸೈನೈಡ್‌ ಮೋಹನ್‌ಗಿಲ್ಲ ಗಲ್ಲು, ಸಾಯೋತನಕ ಜೈಲು


Team Udayavani, Oct 13, 2017, 6:10 AM IST

Cyanide-Mohan,-High-Court-8.jpg

ಬೆಂಗಳೂರು: ಬಂಟ್ವಾಳದ ಅನಿತಾ ಎಂಬಾಕೆಗೆ ಸೈನೆಡ್‌ ನೀಡಿ ಕೊಲೆಗೈದು ದರೋಡೆ ಮಾಡಿದ ಪ್ರಕರಣದಲ್ಲಿ ಸರಣಿ ಹಂತಕ ಮೋಹನ್‌ ಕುಮಾರ್‌ ಅಲಿಯಾಸ್‌ ಸೈನೆಡ್‌ ಮೋಹನ್‌ನನ್ನು ಅಪರಾಧಿ ಎಂದು ಘೋಶಿಸಿರುವ ಹೈಕೋರ್ಟ್‌, ಅಧೀನ ನ್ಯಾಯಾಲಯ ಆತನಿಗೆ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಮಾರ್ಪಾಡುಗೊಳಿಸಿ ಜೀವಿತಾವಧಿವರೆಗೂ ಜೈಲು ಶಿಕ್ಷೆ ವಿಧಿಸಿ ತೀರ್ಪುನೀಡಿದೆ.

ಅನಿತಾ ಕೊಲೆ ಪ್ರಕರಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ವಿಧಿಸಿರುವ ಗಲ್ಲು ಶಿಕೆ ರದ್ದುಪಡಿಸಬೇಕು ಮತ್ತು ಪ್ರಕರಣದಲ್ಲಿ ತನ್ನನ್ನು ಖುಲಾಸೆಗೊಳಿಸುವಂತೆ ಅಪರಾಧಿ ಮೋಹನ್‌ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದನು. ಹಾಗೆಯೆ, ಗಲ್ಲು ಶಿಕ್ಷೆ ಕಾಯಂಗೊಳಿಸುವಂತೆ ಕೋರಿ ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ ಕ್ರಿಮಿನಲ್‌ ರೆಫ‌ರ್ಡ್‌ ಕೇಸ್‌ ಅರ್ಜಿ ಸಲ್ಲಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದ ಈ ಎರಡೂ ಅರ್ಜಿಗಳ ವಿಚಾರಣೆ ಬುಧವಾರವೇ ಪೂರ್ಣಗೊಳಿಸಿದ್ದ ನ್ಯಾಯಮೂರ್ತಿಗಳಾದ ರವಿ ಮಳೀಮಠ ಮತ್ತು ನ್ಯಾ.ಜಾನ್‌ಮೈಕೆಲ್‌ ಕುನ್ಹಾ ಅವರಿದ್ದ ವಿಭಾಗೀಯ ಪೀಠ, ಗುರುವಾರ ಮಧ್ಯಾಹ್ನ ತೀರ್ಪು ಪ್ರಕಟಿಸಿ ಪ್ರಕ್ರಿಯೆ ಪೂರ್ಣಗೊಳಿಸಿತು.

ಅಧೀನ ನ್ಯಾಯಾಲಯವು  ಆರೋಪಿಗೆ ನೀಡಿದ್ದ ಗಲ್ಲು ಶಿಕ್ಷೆಯನ್ನು ಕಡಿಮೆಗೊಳಿಸಿದ ಹೈಕೋರ್ಟ್‌, ಸಾಯುವವರೆಗೂ ಕಾರಾಗೃಹ ಶಿಕ್ಷೆ ವಿಧಿಸಿದ್ದು, ಜೀವಿತಾವಧಿಯ ಕೊನೆವರೆಗೂ ಜೈಲಿನಿಂದ ಅಪರಾಧಿ ಮೋಹನ್‌ ಕುಮಾರ್‌ ಅಲಿಯಾಸ್‌ ಸೈನೆಡ್‌ಮೋಹನ್‌ಗೆ ಬಿಡುಗಡೆ ಮಾಡಬಾರದು ಮತ್ತು ಕ್ಷಮಾದಾನ ಸಹ ನೀಡಬಾರದು ಎಂದು ತೀರ್ಪು ನೀಡಿತು.

ಮೂವರು ಮಹಿಳೆಯರ ಕೊಲೆ ಹಾಗೂ ದರೋಡೆ ಪ್ರಕರಣಗಳಲ್ಲಿ ಅಧೀನ ನ್ಯಾಯಾಲಯವು ಮೋಹನ್‌ಗೆ ಗಲ್ಲು ಶಿಕ್ಷೆ ವಿಧಿಸಿತ್ತು. ಅದರಲ್ಲಿ ಒಂದು ಪ್ರಕರಣವನ್ನು ಹೈಕೋರ್ಟ್‌ಗೆ ಗುರುವಾರ ಬಗೆಹರಿಸಿದ್ದು, ಇನ್ನೆರಡು ಪ್ರಕರಣಗಳ ವಿಚಾರಣೆ ನಡೆಸಬೇಕಿದೆ. ಮತ್ತೂಂದು ಪ್ರಕರಣದ ವಿಚಾರಣೆ ಅ.23ಕ್ಕೆ ನಡೆಸುವುದಾಗಿ ನ್ಯಾಯಪೀಠ ತಿಳಿಸಿದೆ. ವಿಚಾರಣೆಗೆ ಖುದ್ದು ಹಾಜರಾಗಿದ್ದ ಮೋಹನ್‌ನನ್ನು ಜೈಲಿಗೆ ವಾಪಸ್‌ ಕರೆದುಕೊಂಡು ಹೋಗಿ, ಅ.23ರಂದು ಮತ್ತೆ ವಿಚಾರಣೆಗೆ ಕರೆತರುವಂತೆ ಜೈಲಾಧಿಕಾರಿಗಳಿಗೆ ನ್ಯಾಯಪೀಠ ನಿರ್ದೇಶಿಸಿತು.

ಮೋಹನ್‌ ಪೂರ್ವಯೋಜಿತವಾಗಿ ಅನಿತಾಳ ಕೊಲೆ ಮಾಡಿದ್ದು, ಆಕೆಯ ಚಿನ್ನಾಭರಣಗಳನ್ನು ದರೋಡೆ ಮಾಡಿದ್ದಾನೆ ಅಪರಾಧ ಕೃತ್ಯಗಳನ್ನು ಮಾಡಲೆಂದೇ ಶಿಕ್ಷಕ ವೃತ್ತಿಯನ್ನು ಬಿಟ್ಟಿರುವ ಆತನು ಸುಮಾರು 20 ಅಮಾಯಕ ಮಹಿಳೆಯರನ್ನು ಕೊಲೆಗೈದು ದರೋಡೆ ಮಾಡಿ ಪರಾರಿಯಾಗಿದ್ದನು. ಹೀಗಾಗಿ ಆತನಿಗೆ ಗಲ್ಲು ಶಿಕ್ಷೆ ವಿಧಿಸಿರುವ ಅಧೀನ ನ್ಯಾಯಾಲಯದ ಕ್ರಮ ಸರಿಯಿದ್ದು, ಹೈಕೋರ್ಟ್‌ ಗಲ್ಲು  ಶಿಕ್ಷೆ ಖಾಯಂಗೊಳಿಸಬೇಕೆಂದು  ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ವಿಜಯ್‌ಕುಮಾರ್‌ ವಾದಿಸಿದ್ದರು. ಮತ್ತೂಂದೆಡೆ ತನ್ನ ಪರ ಖುದ್ದು ವಾದ ಮಂಡಿಸಿದ ಮೋಹನ್‌ ಸಾಧಾರಣ ಜೈಲು ಶಿಕ್ಷೆ ವಿಧಿಸುವಂತೆ ಕೋರಿದ್ದನು.

ವಿಭಾಗೀಯ ಪೀಠವು ವಾದ-ಪ್ರತಿವಾದ ಆಲಿಸಿದ್ದು, ಅನಿತಾ ಕೊಲೆ  ಸೇರಿ ಇತರೆ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ನಂತರ ಅಪರಾಧ ಪ್ರಕರಣಗಳಿಂದ ತಪ್ಪಿಸಿಕೊಳ್ಳಲು  ಅಮಾಯಕ ಮಹಿಳೆಯರಿಗೆ ಸೈನೈಡ್‌ ನೀಡಿ ಕೊಲೆ ಮಾಡಿದ್ದಾನೆ . ಜತೆಗೆ ಚಿನ್ನಾಭರಣಗಳನ್ನು ದರೋಡೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಎಲ್ಲ ಪ್ರಕರಣಗಳು ಒಂದೇ ರೀತಿಯಲ್ಲಿ ಇರುವುದರಿಂದ ಇದು ಅಪರೂಪದಲ್ಲೇ ಅಪರೂಪ ಪ್ರಕರಣ ಎಂದು ಅಭಿಪ್ರಾಯಪಟ್ಟು ಅಧೀನ ನ್ಯಾಯಾಲಯವು ಅಪರಾಧಿಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು. 

ಆದರೆ, ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆಯಲ್ಲಿ ಇದು ಅಪರೂಪದಲ್ಲೇ ಅಪರೂಪ ಪ್ರಕರಣ ಎಂದು ಸಾಬೀತು ಮಾಡುವಲ್ಲಿ ಪ್ರಾಸಿಕ್ಯೂಷನ್‌ ವಿಫ‌ಲವಾಗಿದೆ.ಅನಿತಾ ಮೇಲೆ ಅತ್ಯಾಚಾರ ನಡೆಸಿರುವುದು ಸಹ ಸಾಬೀತಾಗಿಲ್ಲ.  ಮೇಲಾಗಿ ಮೃತ ಸಂತ್ರಸ್ತರಿಗೆ ಅಪರಾಧಿಯು ದೈಹಿಕ ಹಿಂಸೆ ನೀಡಿ ಕೊಲೆ ಮಾಡಿಲ್ಲ. ಇದರಿಂದ ಪ್ರಕರಣವು ಸಾಮಾನ್ಯ ಅಪರಾಧ ಕೃತ್ಯವಾಗಿದೆ. ಆದ್ದರಿಂದ ಸುಪ್ರೀಂಕೋರ್ಟ್‌ ಬಚ್ಚನ್‌ ಸಿಂಗ್‌ ಪ್ರಕರಣದಲ್ಲಿ ನೀಡಿದ ತೀರ್ಪಿನಂತೆ ಅಪರಾಧಿ ಮೋಹನ್‌ಗೆ ಗಲ್ಲು ಶಿಕ್ಷೆ ವಿಧಿಸಲಾಗದು ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.