ಜಾನಪದ ತ್ರಿಪದಿಗಳಿಗೆ ಚಿತ್ರಕಲೆಯ ಜೀವಂತಿಕೆ

ವಿಶಿಷ್ಟ ಪ್ರಯತ್ನಕ್ಕೆ ಹೆಜ್ಜೆಯಿರಿಸಿದ ಕರ್ನಾಟಕ ಲಲಿತಕಲಾ ಅಕಾಡೆಮಿ ; ಶೀಘ್ರ ಅಪರೂಪದ ಕಾರ್ಯಕ್ಕೆ ಚಾಲನೆ

Team Udayavani, Sep 19, 2021, 2:55 PM IST

ಜಾನಪದ ತ್ರಿಪದಿಗಳಿಗೆ ಚಿತ್ರಕಲೆಯ ಜೀವಂತಿಕೆ

ಬೆಂಗಳೂರು: ಈ ನೆಲದ ಶ್ರೀಮಂತ ಜಾನ ಪದ ಸಂಸ್ಕೃತಿಯನ್ನು ಜೀವಂತವಾಗಿರಿಸುವ ನಿಟ್ಟಿನಲ್ಲಿ ಕರ್ನಾಟಕ ಲಿಲಿತಕಲಾ ಅಕಾಡೆಮಿ
ಹೆಜ್ಜೆಯಿರಿಸಿದೆ. ಕನ್ನಡ ಜಾನಪದ ತ್ರಿಪದಿಗಳ ಸಂದೇಶವನ್ನು ಚಿತ್ರಕಲೆಯ ಮೂಲಕ ಹಿಡಿದಿಡುವ ನಿಟ್ಟಿನಲ್ಲಿ ಅಕಾಡೆಮಿ ಮುಂದಾಗಿದ್ದು ಇದಕ್ಕೆ ಕರ್ನಾಟಕ ಜಾನಪದ ಅಕಾಡೆಮಿ ಬೆನ್ನೆಲುಬಾಗಿ ನಿಲ್ಲಲಿದೆ.

ಕನ್ನಡದ ಜಾನಪದ ತ್ರಿಪದಿಗಳಲ್ಲಿ ನೀತಿಕಥೆ ಹುದುಗಿದೆ. ಅವುಗಳನ್ನು ಮತ್ತೆ ಜನರಿಗೆ ತಲುಪಿಸ ಬೇಕಾದ ಅಗತ್ಯವಿದೆ. ಆ ಹಿನ್ನೆಲೆಯಲ್ಲಿ ಕರ್ನಾಟಕ ಲಲಿಕತ ಅಕಾಡೆಮಿ ವಿಶಿಷ್ಟ ಯೋಜನೆ ರೂಪಿಸಿದ್ದು ಲಲಿತಕಲೆಯಲ್ಲಿ ತ್ರಿಪದಿಗಳನ್ನು ಹಿಡಿದಿಡುವ ಪ್ರಯತ್ನದಲ್ಲಿದೆ.

ಈ ಬಗ್ಗೆ ರಾಮನಗರದ ಕರ್ನಾಟಕ ಜಾನಪದ ಪರಿಷತ್ತಿನಲ್ಲಿ ಜಾನಪದ ಕಲಾವಿದರ ಮತ್ತು ಚಿತ್ರಕಲಾವಿದರ ಶಿಬಿರವನ್ನು ಹಮ್ಮಿಕೊಳ್ಳಲು ಅಕಾಡೆಮಿ ತೀರ್ಮಾನಿಸಿದೆ. ಆ ಶಿಬಿರದಲ್ಲಿ ಈ ನಾಡಿನ ಹಿರಿಯ ಜಾನಪದ ಕಲಾವಿದ ಅಪ್ಪಗೆರೆ ತಿಮ್ಮರಾಜು ಸೇರಿದಂತೆ ಅನೇಕ ಜಾನಪದ ಕಲಾವಿದರನ್ನು ಆಹ್ವಾನಿಸಿ ಅವರಿಂದ ಜಾನಪದ ತ್ರಿಪದಿಗಳನ್ನು ಹಾಡಿಸಿ ಆ ಜಾನಪದ ತ್ರಿಪದಿಗಳ ತತ್ವಗಳನ್ನು ಚಿತ್ರಕಲೆಯ ಮೂಲಕ
ಜೀವತಂವಾಗಿರಿಸುವ ಕಾರ್ಯ ನಡೆಯಲಿದೆ. ಇದಕ್ಕಾಗಿಯೇ ಲಲಿತಕ ಕಲಾ ಅಕಾಡೆಮಿ ಈಗಾಗಲೇ ಕರ್ನಾಟಕ ಜಾನಪದ ಪರಿಷತ್ತಿನೊಂದಿಗೆ
ಸಂಪರ್ಕದಲ್ಲಿದ್ದು ಶೀಘ್ರದಲ್ಲೇ ಈ ಅಪರೂಪದ ಕಾರ್ಯಕ್ಕೆ ಚಾಲನೆ ದೊರೆಯಲಿದೆ ಎಂದು ಅಕಾಡೆಮಿ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ನಮ್ಮ ಜಾನಪದ ತ್ರಿಪದಿಗಳಲ್ಲಿ ನೀತಿ ಸಂದೇಶವಿದೆ. ಅದನ್ನು ಕಲೆಯ ಮೂಲಕ ಜನರಿಗೆ ಮತ್ತೆ ತಲುಪಿಸಬೇಕಾಗಿದೆ. ಆ ಹಿನ್ನೆಲೆಯಲ್ಲಿ ಅಕಾಡೆಮಿ ಜಾನಪದ ಪರಿಷತ್ತಿನ ಜತೆಗೂಡಿ ಈ ಯೋಜನೆ ರೂಪಿಸುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರು ಭಾರತದ ಬಯೋಟೆಕ್ ರಾಜಧಾನಿ: ಕೇಂದ್ರ ಸಚಿವ ಪಿಯೂಷ್ ಗೋಯಲ್

ಪುಸ್ತಕ ರೂಪ ನೀಡಲಾಗುವುದು: ಲಲಿತಕಲಾ ಅಕಾಡೆಮಿ ಈ ಬಾರಿ ಭಿನ್ನರೀತಿಯ ಯೋಜನೆ ರೂಪಿಸಿದೆ. ನಾಡಿನ ಹಿರಿಯ ಚಿತ್ರಕಲಾವಿದರು ಮತುಜಾನಪದ ಕಲಾವಿದರೊಡಗೂಡಿ ತ್ರಿಪದಿ ಸಂದೇಶಗಳಿಗೆ ಜೀವಬೆಸೆಯುವ ಕೆಲಸ ನಡೆಯಲಿದೆ. ಕಲಾವಿದರು ತ್ರಿಪದಿಗಳನ್ನು ಹಾಡಲಿದ್ದಾರೆ. ಆ ಹಾಡಿನ ಭಾವಕ್ಕೆ ತಕ್ಕಂತೆ ಹಿರಿಯ ಕಲಾವಿದರು ಕಲಾಕೃತಿ ಬಿಡಿಸಲಿದ್ದಾರೆ. ಜಾನಪದ ತ್ರಿಪದಿಗಳನ್ನು ಒಳಗೊಂಡ ಕಲಾ ಕೃತಿಗಳಿಗೆ ಪುಸ್ತಕ ರೂಪ ನೀಡಲಾಗುವುದು ಎಂದು ಲಲಿತಕಲಾ ಅಕಾಡೆಮಿ ಅಧ್ಯಕ್ಷ ಡಿ. ಮಹೇಂದ್ರ ಹೇಳಿದ್ದಾರೆ. ಕೂಸು ಇದ್ದ ಮನೆಗೆ ಬೀಸಣಿಕೆ ಯಾತಕ್ಕ ಕೂಸು ಕಂದಯ್ಯ ಒಳಹೊರಗ ಆಡಿದರೆ ಬೀಸಣಿಕೆ ಗಾಳಿ ಸುಳಿದಾವು ಬ್ಯಾಸಗಿ ದಿವಸಕ ಬೇವಿನ ಮರತಂಪು ಭೀಮರತಿಯೆಂಪ ಹೊಳಿತಂಪು ಹಡೆದವ್ವ ನೀತಂಪು ನನ್ನ ತವರೀಗೆ ಇಂಥ ಹಲವಾರು ಜಾನಪದ ತ್ರಿಪದಿಗಳು ನಮಗೆ ದೊರೆಯಲಿವೆ. ಈ ಎಲ್ಲಾ ಜಾನಪದ
ತ್ರಿಪದಿಗಳನ್ನು ಕಲಾಕೃತಿಗಳಲ್ಲಿ ಹಿಡಿದಿಡಲಾಗುವುದು ಎಂದು ತಿಳಿಸಿದ್ದಾರೆ.

ಶಿಬಿರಕ್ಕಾಗಿ ಸಕಲ ಸಿದ್ಧತೆ
ಕರ್ನಾಟಕ ಜಾನಪದ ಪರಿಷತ್ತು ಈ ಶಿಬಿರಕ್ಕಾಗಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. ರಾಮನಗರ ಜಾನಪದ ಪರಿಷತ್ತಿನಲ್ಲಿ ಸೆ.27ರಂದು ಕಾರ್ಯಕ್ರಮ ನಡೆಯಲಿದೆ. ಇದಕ್ಕೆ ಎಲ್ಲಾ ರೀತಿಯ ಸಹಕಾರವನ್ನು ಪರಿಷತ್ತು ನೀಡಲಿದೆ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಟಿ.ತಿಮ್ಮೇಗೌಡ ಹೇಳಿದ್ದಾರೆ. ಜಾನಪದವನ್ನು ಉಳಿಸಿಬೆಳೆಸುವ ನಿಟ್ಟಿನ ಕಾರ್ಯಕ್ರಮ ಇದಾಗಿದೆ ಎಂದು ಹೇಳಿದ್ದಾರೆ.

ಕನ್ನಡದ ಜಾನಪದ ತ್ರಿಪದಿಗಳನ್ನು ಕಲೆಯ ಮೂಲಕ ಹಿಡಿದಿಡುವ ಪ್ರಯತ್ನ ನಡೆದಿದೆ. ಇದಕ್ಕೆ ಕರ್ನಾಟಕ ಜಾನಪದ ಪರಿಷತ್ತು ಕೂಡ ಕೈ ಜೋಡಿಸಲಿದೆ.
-ಡಿ.ಮಹೇಂದ್ರ, ಅಧ್ಯಕ್ಷರು
ಕರ್ನಾಟಕ ಲಲಿತಕಲಾ ಅಕಾಡೆಮಿ

-ದೇವೇಶ ಸೂರಗುಪ್ಪ

 

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.