Rajya Sabha Election: ಕಾಂಗ್ರೆಸ್ ಗೆ ಮೂರೂ, ಬಿಜೆಪಿಗೆ ಒಂದು, ಮೈತ್ರಿ ಅಭ್ಯರ್ಥಿಗೆ ಸೋಲು
Team Udayavani, Feb 27, 2024, 7:00 PM IST
ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿ ಸಾಧಿಸಿದೆ, ಬಿಜೆಪಿಯ ಓರ್ವ ಅಭ್ಯರ್ಥಿ ಗೆಲುವು ಸಾಧಿಸಿದ್ದು ಜೊತೆಗೆ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಸೋಲು ಅನುಭವಿಸುವ ಮೂಲಕ ಮುಖಭಂಗ ಅನುಭವಿಸಿದ್ದಾರೆ.
ಇಂದು ನಡೆದ ಚುನಾವಣೆಯಲ್ಲಿ ಒಟ್ಟು 224 ಮತಗಳ ಪೈಕಿ ಒಟ್ಟು 222 ಮಂದಿ ಮತ ಚಲಾಯಿಸಿದ್ದಾರೆ. ಅದರಲ್ಲಿ ಯಲ್ಲಾಪುರದ ಬಿಜೆಪಿ ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಮತದಾನ ಮಾಡದೆ ಗೈರಾಗಿದ್ದು, ಕಾಂಗ್ರೆಸ್ ಶಾಸಕ ರಾಜಾವೆಂಕಟಪ್ಪ ನಾಯಕ ಅವರು ಕಳೆದ ಭಾನುವಾರ (ಫೆ.25) ರಂದು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು 222 ಮಂದಿ ಶಾಸಕರು ಮತದಾನ ಮಾಡಿದಂತಾಗಿದೆ.
ಹಾಗಾದರೆ ಯಾವ ಅಭ್ಯರ್ಥಿ ಎಷ್ಟು ಮತಗಳನ್ನು ಪಡೆದುಕೊಂಡಿದ್ದಾರೆ ಎಂಬುದನ್ನು ನೋಡುವುದಾದರೆ ಕಾಂಗ್ರೆಸ್ ನ ಅಜಯ್ ಮಾಕೆನ್ -47, ನಾಸೀರ್ ಹುಸೇನ್ – 47, ಜಿ.ಸಿ. ಚಂದ್ರಶೇಖರ – 45, ನಾರಾಯಣ ಸಾ. ಭಾಂಡಗೆ – 47, ಕುಪೇಂದ್ರ ರೆಡ್ಡಿ – 36 ಮತಗಳನ್ನು ಗಳಿಸಿದ್ದಾರೆ.
ಅಡ್ಡ ಮತದಾನ ಮಾಡಿದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್
ಭಾರಿ ಕುತೂಹಲಕ್ಕೆ ಕಾರಣವಾಗಿದ್ದ ರಾಜ್ಯಸಭಾ ಚುನಾವಣೆಯಲ್ಲಿ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಅವರು ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತದಾನ ಮಾಡುವ ಮೂಲಕ ಬಿಜೆಪಿಗೆ ಶಾಕ್ ನೀಡಿದ್ದಾರೆ. ಈಗಾಗಲೇ ಕಾಂಗ್ರೆಸ್ ನಾಯಕರ ಜೊತೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ಅವರು ಇಂದು ಅಡ್ಡ ಮತದಾನ ಮಾಡುವ ಮೂಲಕ ತಮ್ಮ ನಡೆಯನ್ನು ತೋರಿಸಿದ್ದಾರೆ.
ಇದನ್ನೂ ಓದಿ: ಆಡಳಿತ ಸೌಧ ಅಸ್ವಚ್ಛತೆ… ತಹಶೀಲ್ದಾರ್ ಅವರನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ