ಗಿರಿಜನರೆಡೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ

ಬುಡಕಟ್ಟು ಸಮುದಾಯದ ಕಲೆ, ಸಾಹಿತ್ಯ, ವೈದ್ಯಕೀಯ ಪದ್ಧತಿ ಜೀವಂತವಾಗಿರಿಸುವ ಪ್ರಯತ್ನ

Team Udayavani, Oct 17, 2021, 11:28 AM IST

8

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಗಿರಿಜನರೆಡೆಗೆ ಅಕಾಡೆಮಿ ಕೊಂಡೊಯ್ಯುವ ನಿಟ್ಟಿ ನಲ್ಲಿ ಕಾರ್ಯಕ್ರಮ ರೂಪಿಸಿದ್ದು, ಬಡಕಟ್ಟು ಸಮು ದಾಯದ ಶ್ರೀಮಂತ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಆ ಸಮುದಾಯದ ಯುವ ಸಮೂಹಕ್ಕೆ ಪರಿಚಯಿಸುವ ಉದ್ದೇಶ ಹೊಂದಿದೆ.

ಗಿರಿಜನ ಉಪಯೋಜನೆ ಅನುದಾನ ಬಳಕೆ ಮಾಡಿಕೊಂಡು ಇಂತದ್ದೊಂದು ಯೋಜನೆ ರೂಪಿ ಸಿದ್ದು ಇದಕ್ಕಾಗಿಯೇ ಹಲವು ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಈ ಹಿಂದೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಮೈಸೂರು ಜಿಲ್ಲೆಯ ಎಚ್‌.ಡಿ.ಕೋಟೆಯ ಹೊಸಹಳ್ಳಿಯ ಗಿರಿಜನರ ಹಾಡಿಯಲ್ಲಿ “ಬುಡಕಟ್ಟು ಸಾಹಿತ್ಯ ಮತ್ತು ಸಂಸ್ಕೃತಿಕ ಕುರಿತ’ ಶಿಬಿರವನ್ನು ಹಮ್ಮಿಕೊಂಡಿತ್ತು. ಸುಮಾರು 40 ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳ ಈ ಕಮ್ಮಟದಲ್ಲಿ ಭಾಗವಹಿಸಿ ಕಮ್ಮಟಕ್ಕೆ ಮೆಚ್ಚುಗೆ ವ್ಯಕ್ತವಾದ್ದರಿಂದ ಅಕಾಡೆಮಿ ಇದೀಗ ಗಿರಿಜನರೆಡೆಗೆ ಯೋಜನೆಗೆ ಮುಂದಾಗಿದೆ.

 ಎಲ್ಲೆಲ್ಲಿ ಕಮ್ಮಟಗಳು: ರಾಜ್ಯದ ಕೆಲವು ಭಾಗಗಳಲ್ಲಿ ಬುಡಕಟ್ಟು ಸಮುದಾಯದ ಕಮ್ಮಟಗಳನ್ನು ಹಮ್ಮಿಕೊಳ್ಳುವ ಬಗ್ಗೆ ಅಕಾಡೆಮಿ ಮಟ್ಟದಲ್ಲಿ ಚರ್ಚೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯ್ಡಾ ಭಾಗ ದಲ್ಲಿ ಅಧಿಕ ಸಂಖ್ಯೆಯಲ್ಲಿ ಬಡುಕಟ್ಟು ಸಮು ದಾಯದ ಜನರು ನೆಲೆಸಿದ್ದಾರೆ.ಆ ಪ್ರದೇಶ ವ್ಯಾಪ್ತಿಯಲ್ಲೂ ಕೂಡ ಬಡಕಟ್ಟು ಸಾಹಿತ್ಯ, ಸಾಂಸ್ಕೃತಿಕ ಮತ್ತು ವೈದ್ಯಕೀಯ ಸಾಹಿತ್ಯದ ಕುರಿತಂತೆ ಕಮ್ಮಟವನ್ನು ಹಮ್ಮಿಕೊಳ್ಳುವ ಆಲೋಚನೆಯಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಬಿ.ವಿ.ವಸಂತಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿ:- ಗಂಗಾವತಿ: ಹೆಚ್ಚಳವಾಗುತ್ತಿರುವ ಅನಾಥ ವಯೋವೃದ್ಧರು, ಭಿಕ್ಷುಕರ ಸಂಖ್ಯೆ ಜಿಲ್ಲಾಡಳಿತ ಮೌನ

ಇದರ ಜತೆಗೆ ರಾಯಚೂರು ಭಾಗದಲ್ಲೂ ಕೂಡ ಅಕಾಡೆಮಿ ವತಿಯಿಂದ ಗಿರಿಜನರ ಕಮ್ಮಟ ಹಮ್ಮಿಕೊಳ್ಳುವ ಕುರಿತಂತೆ ಚಿಂತನೆ ನಡೆಸಲಾಗಿದೆ. ಇದಾದ ಬಳಿಕ ಕೊಡಗು ಜಿಲ್ಲೆಯಲ್ಲಿ ಕೂಡ ಬುಡಕಟ್ಟು ಸಮುದಾಯದ ಕಲೆ, ಸಾಂಸ್ಕೃತಿಕ ಹಿರಿಮೆ, ಸಾಹಿತ್ಯ ಸೇರಿದಂತೆ ಮತ್ತಿತರ ವಿಷಯಗಳಿಗೆ ಸಂಬಂಧಿಸಿದಂತೆ ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಬುಡಕಟ್ಟು ಸಮುದಾಯದ ಶ್ರೀಮಂತ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ. ಗಿರಿಜನರ ಉಪಯೋಜನೆಯಡಿ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಬುಡಕಟ್ಟು ಸಮುದಾಯ ಸಾಹಿತ್ಯ ಮತ್ತು ಸಂಸ್ಕೃತಿಯ ಕುರಿತು ಆ ಸಮುದಾಯದ ಈಗಿನ ಪೀಳಿಗೆಯ ಮಕ್ಕಳಿಗೆ ಸರಿಯಾದ ಪರಿಚಯವಿಲ್ಲ.

ಅಲ್ಲದೆ ಅವರಲ್ಲಿರುವ ಕೀಳರಿಮೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಕಮ್ಮಟಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ಈಗಾಗಲೇ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯುದಯಕ್ಕೆ ಸರ್ಕಾರ ನೀಡಿರುವ ಅನುದಾನವನ್ನು ಅಕಾಡೆಮಿ ಬಳಕೆ ಮಾಡಿಕೊಂಡಿಲ್ಲ.ಹೀಗಾಗಿ ಆ ಅನುದಾನವನ್ನು ಬಳಕೆ ಮಾಡಿಕೊಳ್ಳಲು ಅಕಾಡೆಮಿ ಮುಂದಾಗಿದೆ. ಬುಡಕಟ್ಟು ಸಮುದಾಯದ ಕಾರ್ಯಕ್ರಮ ರೂಪಿಸಲು ಸರ್ಕಾರ ನೀಡಿರುವ ಅನುದಾನ ಇನ್ನೂ 30ಲಕ್ಷ ರೂ.ಇದ್ದು ಅದನ್ನು ಬುಡಕಟ್ಟು ಸಮುದಾಯದ ಸಾಹಿತ್ಯ ಮತ್ತು ಸಂಸ್ಕೃತಿಕ ಕುರಿತ ಕಮ್ಮಟಗಳಿಗೆ ಬಳಕೆ ಮಾಡಿಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸುತ್ತಾರೆ.

ಬುಡಕಟ್ಟು ಸಮುದಾಯದಲ್ಲಿ ಶ್ರೀಮಂತ ಸಂಸ್ಕೃತಿ ಇದೆ. ಅದನ್ನು ಮುಂದಿನ ಪೀಳಿಗೆಗೆ ತಲುಪಿಸುವ ನಿಟ್ಟಿನಲ್ಲಿ ಕೆಲಸ ಆಗಬೇಕಾಗಿದೆ. ಆ ಹಿನ್ನೆಲೆಯಲ್ಲಿ ಬಡಕಟ್ಟು ಸಮುದಾಯದ ವಿದ್ಯಾವಂತ ವಿದ್ಯಾರ್ಥಿಗಳನ್ನು ಬಳಕೆ ಮಾಡಿಕೊಂಡು ಆ ಸಮುದಾಯದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಜೀವಂತವಾಗಿಡುವ ಕೆಲಸ ಅಕಾಡೆಮಿ ವತಿಯಿಂದ ನಡೆದಿದೆ. – ಡಾ.ಬಿ.ವಿ.ವಸಂತಕುಮಾರ್‌, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ.

●ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.