ಸಿದ್ಧಗಂಗಾ ಶ್ರೀ ಊರು ವಿಶ್ವ ಪಾರಂಪರಿಕ ಕೇಂದ್ರ
Team Udayavani, Feb 9, 2019, 12:50 AM IST
ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿದ್ದ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಹುಟ್ಟೂರು, ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ವೀರಾಪುರ ಗ್ರಾಮವನ್ನು,ಮಾದರಿ ಗ್ರಾಮವನ್ನಾಗಿ ಅಭಿವೃದ್ದಿಪಡಿಸಲು ಯೋಜನೆ ರೂಪಿಸಲಾಗಿದೆ.
ಶ್ರೀಗಳ ಜೀವನ ಸಾಧನೆ ಮತ್ತು ವಿಚಾರಗಳನ್ನು ವಿಶ್ವದೆಲ್ಲೆಡೆ ಸಾರಲು ವೀರಾಪುರ ಗ್ರಾಮದ ಜನ್ಮಸ್ಥದಲ್ಲಿ ಒಂದು
“ವಿಶ್ವದರ್ಜೆಯ ಸಾಂಸ್ಕೃತಿಕ ಮತ್ತು ವಿಶ್ವಪಾರಂಪರಿಕ ಕೇಂದ್ರ’ವನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ, 2019-20 ಸಾಲಿನಲ್ಲಿ 25 ಕೋಟಿ ರೂ. ವಿಶೇಷ ಅನುದಾನವನ್ನು ಮೀಸಲಿರಿಸಲಾಗಿದೆ.
ಬೇಲೂರು ಮಠದಂತಾಗಲಿದೆ
ಬಾಲಗಂಗಾಧರ ಶ್ರೀ ಹುಟ್ಟೂರು
ನಾಥ ಪಂಥ ಮತ್ತು ಅದರ ನಿಲುವುಗಳನ್ನು ರಾಜ್ಯದಲ್ಲಿ ಪ್ರಚಾರ ಪಡಿಸುವ ಮೂಲಕ ಆದಿಚುಂಚನಗಿರಿ ಕ್ಷೇತ್ರವನ್ನು ಶೈಕ್ಷಣಿಕ
ಕೇಂದ್ರವನ್ನಾಗಿ ರೂಪಿಸಿ, ಹೆಸರುವಾಸಿಯಾಗಿದ್ದ ಬಾಲಗಂಗಾಧರ ಸ್ವಾಮೀಜಿಯವರ ಜನ್ಮಸ್ಥಳವನ್ನು ಮಾದರಿ ಗ್ರಾಮವನ್ನಾಗಿ ರೂಪಿಸಲು ಯೋಜನೆ ಸಿದ್ಧಪಡಿಸಲಾಗಿದೆ.
ರಾಮನಗರ ಜಿಲ್ಲೆ ಬಿಡದಿ ತಾಲೂಕಿನ ಬಾಣಂದೂರು ಶ್ರೀಗಳ ಹುಟ್ಟೂರು. ಇಲ್ಲಿ ಸ್ವಾಮಿ ವಿವೇಕಾನಂದರು, ಕೋಲ್ಕತಾದಲ್ಲಿ ಸ್ಥಾಪಿಸಿದ ಬೇಲೂರು ಮಠದ ಮಾದರಿಯಲ್ಲೇ “ಸಾಂಸ್ಕೃತಿಕ ಹಾಗೂ ಪಾರಂಪರಿಕ ಕೇಂದ್ರವನ್ನು’ ಶುರು ಮಾಡಲು ನಿರ್ಧರಿಸಲಾಗಿದೆ. ಇದರ ಮೂಲಕ ಬಾಲಗಂಗಾಧರ ಶ್ರೀಗಳ ಜೀವನ ಸಾಧನೆ ಮತ್ತು ವಿಚಾರಧಾರೆಗಳನ್ನು ಸಾರಲಾಗುವುದು. ಇದಕ್ಕಾಗಿ 25 ಕೋಟಿ ರೂ. ವಿಶೇಷ ಅನುದಾನ ಇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್