ಎಚ್‌ಡಿಕೆ ಅನಾರೋಗ್ಯ , ವಿಕ್ರಂ ಆಸ್ಪತ್ರೆಗೆ ದಾಖಲು


Team Udayavani, Mar 5, 2017, 3:45 AM IST

HDK-Hospital.jpg

ಬೆಂಗಳೂರು:ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಅನಾರೋಗ್ಯ ನಿಮಿತ್ತ ನಗರದ ವಿಕ್ರಂ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದು ವಾರ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಕಳೆದ ವಾರ ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿ, ಮೊಳಕಾಲ್ಮೂರು, ಮಲೆಬೆನ್ನೂರು ಭಾಗದಲ್ಲಿ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಉರಿ ಬಿಸಿಲಿನಲ್ಲಿ ಓಡಾಟ ಹಾಗೂ ಸ್ವಾಗತಕ್ಕಾಗಿ ಕಾರ್ಯಕರ್ತರು ಸಿಡಿಸಿದ ಪಟಾಕಿ ಹೊಗೆಯಿಂದ ಕೆಮ್ಮು ಹಾಗೂ ಜ್ವರದಿಂದ ಅವರು ಬಳಲುತ್ತಿದ್ದಾರೆ.
ಶುಕ್ರವಾರ ಮೈಸೂರು ಪ್ರವಾಸ ಸಂದರ್ಭದಲ್ಲಿ ಅನಾರೋಗ್ಯ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ಬೆಂಗಳೂರಿಗೆ ಆಗಮಿಸಿ ವಿಕ್ರಂ ಆಸ್ಪತ್ರೆಯಲ್ಲಿ ದಾಖಲಾದರು.ವಿಕ್ರಂ ಆಸ್ಪತ್ರೆ ವೈದ್ಯ ಡಾ. ಸತೀಶ್‌, ಕುಮಾರಸ್ವಾಮಿ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

ಮೊದಲ ದಿನ ಆರೋಗ್ಯದಲ್ಲಿ ಸ್ವಲ್ಪ ಏರು ಪೇರಾಗಿತ್ತು.  ಎಕ್ಸರೇ ಮತ್ತು ರಕ್ತ ಪರೀಕ್ಷೆ ನಡೆಸಲಾಗಿತ್ತು. ಶನಿವಾರ ನಡೆಸಿದ ತಪಾಸಣೆ ಸಂದರ್ಭದಲ್ಲಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಭಾನುವಾರ ಅಥವಾ ಸೋಮವಾರ ಆಸ್ಪತ್ರೆಯಿಂದ ಮನೆಗೆ ಮರಳಬಹುದು ಎಂದು ಹೇಳಿದ್ದಾರೆ.

ಆತಂಕ ಬೇಕಿಲ್ಲ
ಎಚ್‌.ಡಿ.ಕುಮಾರಸ್ವಾಮಿಯವರು ನಿರಂತರ ಪ್ರವಾಸದಿಂದ ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿದ್ದು ವಿಶ್ರಾಂತಿ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ಪಕ್ಷದ ಕಾರ್ಯಕರ್ತರು ಆತಂಕಪಡಬೇಕಿಲ್ಲ. ವಿಶ್ರಾಂತಿ ಅಗತ್ಯ ಇರುವುದರಿಂದ ಕಾರ್ಯಕ್ರಮಗಳಿಗೆ ಬರುವಂತೆ ಒತ್ತಡ ಹಾಕಬಾರದು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

ಮುಂದೂಡಿಕೆ
ಈ ಮಧ್ಯೆ ಮಾರ್ಚ್‌ 15 ರಂದು ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಜೆಡಿಎಸ್‌ ಸಮಾವೇಶ ಮುಂದೂಡಲಾಗಿದೆ. ಅಂದು ರಾಜ್ಯ ಬಜೆಟ್‌ ಇರುವುದರ ಜತೆಗೆ ಕುಮಾರಸ್ವಾಮಿಯವರ ಅನಾರೋಗ್ಯದಿಂದ ಬಳಲುತ್ತಿರುವುದರಿಂದ ಸಮಾವೇಶ ಮುಂದೂಡಲಾಗಿದೆ. ಅಂದು ಜೆಡಿಎಸ್‌ನ ನೂತನ ಕಟ್ಟಡ ಉದ್ಘಾಟನೆ ನಡೆಯಲಿದ್ದು ಕುಮಾರಸ್ವಾಮಿ ಆರೋಗ್ಯ ಚೇತರಿಕೆಯಾದ ನಂತರ ಸಮಾವೇಶ ನಡೆಸಲಾಗುವುದು ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ.

ಟಾಪ್ ನ್ಯೂಸ್

Bommai BJP

Modi 3ನೇ ಸಲ ಪ್ರಧಾನಿಯಾದ 3 ತಿಂಗಳಲ್ಲಿ ಕಾಂಗ್ರೆಸ್‌ ಇಬ್ಭಾಗ: ಬೊಮ್ಮಾಯಿ ಭವಿಷ್ಯ

1-qwe-ewewe

AAP ನಾಯಕರಿಗೆ 100 ಕೋಟಿ ಕಿಕ್ ಬ್ಯಾಕ್;ಕವಿತಾ ವಿರುದ್ಧ ಇಡಿ ಆರೋಪ

1-qwewewq

Delhi; ಹೊತ್ತಿ ಉರಿದ ತಾಜ್ ಎಕ್ಸ್‌ಪ್ರೆಸ್ ರೈಲಿನ ಮೂರು ಬೋಗಿಗಳು

renukaacharya

Threat ಇವತ್ತೇ ನಿನಗೆ ಕೊನೆಯ ದಿನ; ರೇಣುಕಾಚಾರ್ಯ ಅವರಿಗೆ ವಿದೇಶದಿಂದ ಬೆದರಿಕೆ ಕರೆ

Satish Jaraki

Exit poll ಸಮೀಕ್ಷೆಗಳ ಬಗ್ಗೆ ನಂಬಿಕೆಯಿಲ್ಲ: ಸಚಿವ ಸತೀಶ್ ಜಾರಕಿಹೊಳಿ

Feticide case: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಯೋಗದ ಸದಸ್ಯರ ಕಿಡಿ

Feticide case: ಆರೋಪಿಗಳ ಮೇಲೆ ಕಠಿಣ ಕ್ರಮಕ್ಕೆ ಶಿಫಾರಸ್ಸು: ನ್ಯಾ.ಎಸ್.ಕೆ.ಒಂಟಗೋಡಿ

shashi-taroor

Kerala ದಲ್ಲಿ ತಿರುವನಂತಪುರಂ ಬಿಜೆಪಿಯ ಪ್ರಬಲ ಕ್ಷೇತ್ರವಾದರೂ.. :ತರೂರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

Modi 3ನೇ ಸಲ ಪ್ರಧಾನಿಯಾದ 3 ತಿಂಗಳಲ್ಲಿ ಕಾಂಗ್ರೆಸ್‌ ಇಬ್ಭಾಗ: ಬೊಮ್ಮಾಯಿ ಭವಿಷ್ಯ

Satish Jaraki

Exit poll ಸಮೀಕ್ಷೆಗಳ ಬಗ್ಗೆ ನಂಬಿಕೆಯಿಲ್ಲ: ಸಚಿವ ಸತೀಶ್ ಜಾರಕಿಹೊಳಿ

1-qwewqwq

Bengaluru rave party ಪ್ರಕರಣ; ನಟಿ ಹೇಮಾ ಬಂಧನ

Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ

Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ

Special Class: ಮಕ್ಕಳ ಕಲಿಕಾ ಸಾಮರ್ಥ್ಯ ಸುಧಾರಣೆಗೆ ಸ್ಪೆಷಲ್‌ ಕ್ಲಾಸ್‌

Special Class: ಮಕ್ಕಳ ಕಲಿಕಾ ಸಾಮರ್ಥ್ಯ ಸುಧಾರಣೆಗೆ ಸ್ಪೆಷಲ್‌ ಕ್ಲಾಸ್‌

MUST WATCH

udayavani youtube

ನಿಮ್ಮ ಮಗುವಿಗೆ Adenoid ಸಮಸ್ಯೆ ಇದೆಯೇ ಇಲ್ಲಿದೆ ಪರಿಹಾರ

udayavani youtube

ಉಳ್ಳಾಲ: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

ಹೊಸ ಸೇರ್ಪಡೆ

Bommai BJP

Modi 3ನೇ ಸಲ ಪ್ರಧಾನಿಯಾದ 3 ತಿಂಗಳಲ್ಲಿ ಕಾಂಗ್ರೆಸ್‌ ಇಬ್ಭಾಗ: ಬೊಮ್ಮಾಯಿ ಭವಿಷ್ಯ

1-qwe-ewewe

AAP ನಾಯಕರಿಗೆ 100 ಕೋಟಿ ಕಿಕ್ ಬ್ಯಾಕ್;ಕವಿತಾ ವಿರುದ್ಧ ಇಡಿ ಆರೋಪ

1-qwewewq

Delhi; ಹೊತ್ತಿ ಉರಿದ ತಾಜ್ ಎಕ್ಸ್‌ಪ್ರೆಸ್ ರೈಲಿನ ಮೂರು ಬೋಗಿಗಳು

renukaacharya

Threat ಇವತ್ತೇ ನಿನಗೆ ಕೊನೆಯ ದಿನ; ರೇಣುಕಾಚಾರ್ಯ ಅವರಿಗೆ ವಿದೇಶದಿಂದ ಬೆದರಿಕೆ ಕರೆ

KMC Manipal; ಖ್ಯಾತ ಸಂತಾನೋತ್ಪತ್ತಿ ತಜ್ಞ ಡಾ. ಪ್ರತಾಪ್ ಪೂರ್ಣ ಸಮಯದ ಸಮಾಲೋಚನೆಗೆ ಲಭ್ಯ

KMC Manipal; ಖ್ಯಾತ ಸಂತಾನೋತ್ಪತ್ತಿ ತಜ್ಞ ಡಾ. ಪ್ರತಾಪ್ ಪೂರ್ಣ ಸಮಯದ ಸಮಾಲೋಚನೆಗೆ ಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.