ಕಸಾಪ ಶತಮಾನೋತ್ಸವ ಭವನ ಶೀಘ್ರ ಆರಂಭ


Team Udayavani, Nov 9, 2017, 12:48 PM IST

cm.jpg

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌ ಶತಮಾನೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ನಾಲ್ಕು ವರ್ಷಗಳ ಹಿಂದೆ ಶಂಕುಸ್ಥಾಪನೆ ನೆರವೇರಿದ್ದ ಪರಿಷತ್ತಿನ ಶತಮಾನೋತ್ಸವ ಭವನ ಇದೀಗ ಉದ್ಘಾಟನೆಗೆ ಸಜ್ಜಾಗಿದೆ. 2014ರಲ್ಲಿ ಪುಂಡಲೀಕ ಹಾಲಂಬಿ ಅವರು ಸಾಹಿತ್ಯ ಪರಿಷತ್‌ ಅಧ್ಯಕ್ಷರಾಗಿದ್ದಾಗ ಶತಮಾನೋತ್ಸವ ನಡೆದಿತ್ತು. ಈ ಸಂಭ್ರಮಕ್ಕಾಗಿ ಪರಿಷತ್‌ ಆವರಣದಲ್ಲಿ ಶತಮಾನೋತ್ಸವ ಭವನ ನಿರ್ಮಾಣಕ್ಕೆ ಉದ್ದೇಶಿಸಿ ಜೂ.17ರಂದು ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಸರ್ಕಾರ ಈ ಭವನ ನಿರ್ಮಾಣಕ್ಕೆ ಸಕಾಲದಲ್ಲಿ ಸುಮಾರು 2.5 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿಡಲಾಗಿತ್ತು.

ಆದರೆ, ಕಾಮಗಾರಿ ನಡೆಸಬೇಕಾಗಿದ್ದ ಕರ್ನಾಟಕ ವಸತಿ ನಿಗಮ ಕಟ್ಟಡ ನಿರ್ಮಾಣಕ್ಕೆ ಮೀನಮೇಷ ಎಣಿಸಿತ್ತು. ಇದರಿಂದ ಶತಮಾನ ಪೂರೈಸಿದ ಹೆಗ್ಗು ರುತಾಗಿ ಭವನ ನಿರ್ಮಾಣವನ್ನು ತಮ್ಮ ಅಧಿಕಾರ ಅವಧಿಯಲ್ಲೇ ಮುಗಿಸಬೇಕು ಎಂಬ ಹಾಲಂಬಿ ಅವರ ಆಸೆ ಕೊನೆಗೂ ಈಡೇರಲೇ ಇಲ್ಲ. 

ಕರ್ನಾಟಕ ವಸತಿ ನಿಗಮಕ್ಕೆ ಕಡತ ಹಿಡಿದುಕೊಂಡು ಅಲೆದು ಸಾಕಾಗಿದ್ದ ಪುಂಡಲೀಕ ಹಾಲಂಬಿ ಬಹಳ ಬೇಸರದಿಂದ ಸುಮ್ಮನಾಗಿದ್ದರು. ಈ ನಡುವೆಯೇ ಪರಿಷತ್ತಿನ ಚುನಾವಣೆಯೂ ಘೋಷಣೆಯಾಗಿದ್ದರಿಂದ ಶತಮಾನೋತ್ಸವ
ಭವನದ ಕಾಮಗಾರಿ ಆರಂಭಗೊಳ್ಳಲಿಲ್ಲ. 

ಹಾಲಂಬಿ ಯಿಂದ ಗುದ್ದಲಿಪೂಜೆ: ಕಸಾಪ ಇತಿಹಾಸದಲ್ಲೇ ಅತ್ಯಂತ ಅಧಿಕ ಮತಗಳಿಂದ ಚುನಾಯಿತರಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಡಾ. ಮನುಬಳಿಗಾರ್‌ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಶತಮಾನೋತ್ಸವ ಭವನಕ್ಕೆ ಹಾಲಂಬಿ ಅವರಿಂದ ಗುದ್ದಲಿಪೂಜೆ ಮಾಡಿಸಿದರು. ಅಷ್ಟೇ ಅಲ್ಲದೇ 2016 ಏಪ್ರಿಲ್‌-ಮೇ ತಿಂಗಳಲ್ಲಿ ಭವನ ಕಾಮಗಾರಿ ಆರಂಭಿಸುವಂತೆ ಕರ್ನಾಟಕ ವಸತಿ ನಿಗಮದ ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದರು. ಈ ಪರಿಣಾಮ 18 ತಿಂಗಳಲ್ಲಿ ಸುಸಜ್ಜಿತವಾದ ಶತಮಾನೋತ್ಸವ ಭವನ ತಲೆ ಎತ್ತಿದ್ದು, ಇದೀಗ ಕಟ್ಟಡ ನಿರ್ಮಾಣ ಪೂರ್ಣಗೊಂಡಿದೆ.

4.20 ಕೋಟಿ ರೂ. ಖರ್ಚು: ಕರ್ನಾಟಕ ವಸತಿ ನಿಗಮ ಸುಮಾರು 4.20 ಕೋಟಿ ರೂ.ವೆಚ್ಚದಲ್ಲಿ ಶತಮಾನೋತ್ಸವ ಭವನ ನಿರ್ಮಾಣ ಮಾಡಿದೆ. ರಾಜ್ಯ ಸರ್ಕಾರ ಭವನ ನಿರ್ಮಾಣಕ್ಕಾಗಿ 4 ಕೋಟಿ ರೂ.ಅನುದಾನ ನೀಡಿದ್ದು, 20 ಲಕ್ಷ ರೂ. ಬಡ್ಡಿಯಿಂದ ಬಂದಿದೆ. ಭವನದ ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಶೇ.10ರಷ್ಟು ಬಾಕಿ ಕಾಮಗಾರಿ ಉದ್ಘಾಟನೆ ದಿನದೊಳಗೆ ಮುಗಿಯಲಿದೆ. ಸಂಸದ ಪಿ.ಸಿ.ಮೋಹನ್‌ ಭವನದಲ್ಲಿ ನಿರ್ಮಾಣಗೊಳ್ಳುತ್ತಿರುವ ಆಡಿಟೋರಿಯಂ ಅನ್ನು ಅತ್ಯಾಧುನಿಕವಾಗಿ ನಿರ್ಮಿಸಲು ಸುಮಾರು 50 ಲಕ್ಷ ರೂ.ಗಳನ್ನು ದೇಣಿಗೆಯಾಗಿ ನೀಡುವ ಭರವಸೆ ನೀಡಿದ್ದು, ಆಡಿಟೋರಿಯಂ ವಿಶೇಷ ತಂತ್ರಜ್ಞಾನ ಬಳಸಿ ನಿರ್ಮಿಸಲಾಗುವುದು ಎಂದು ಕಸಾಪ ಅಧ್ಯಕ್ಷ ಮನುಬಳಿಗಾರ್‌ ಉದಯವಾಣಿಗೆ ತಿಳಿಸಿದರು.

ಮೂರು ಮಹಡಿ: ಶತಮಾನೋತ್ಸವ ಭವನದಲ್ಲಿ ಮೂರು ಮಹಡಿಗಳಿದ್ದು, ಕೆಳಮಹಡಿಯಲ್ಲಿ ಕಚೇರಿ, ವಾಚನಾಲಯ ಮತ್ತು 2 ಶೌಚಾಲಯಗಳಿವೆ. ಮೊದಲ ಮಹಡಿಯಲ್ಲಿ ಆರು ಅತಿಥಿ ಕೊಠಡಿಗಳಿದ್ದು, ಈ ಕೊಠಡಿಗಳಿಗೆ ಹೊಂದಿ ಕೊಂಡಂತೆ ಆರು ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಮೂರನೇ ಮಹಡಿಯಲ್ಲಿ ಅತ್ಯಾಧುನಿಕ ಆಡಿಟೋರಿಯಂ ನಿರ್ಮಾಣಗೊಳ್ಳುತ್ತಿದ್ದು, ಅಲ್ಲಿ ಕೂಡ ಎರಡು ಶೌಚಾಲಯಗಳ ವ್ಯವಸ್ಥೆ ಮಾಡ ಲಾಗಿದೆ. ತಳ ಮಹಡಿಯಿಂದ 1 ಮತ್ತು 2ನೇ ಮಹಡಿಗೆ ಹೋಗಲು ಲಿಫ್ಟ್ ವ್ಯವಸ್ಥೆಯೂ ಇದೆ. 

ಸಿಎಂ ರಿಂದ ಅಡಿಗಲ್ಲು 
ಚಾಮರಾಜಪೇಟೆಯ ಕಸಾಪದ ಶ್ರೀಕೃಷ್ಣರಾಜ ಪರಿಷನ್ಮಂದಿರ ಹಿಂಭಾಗದಲ್ಲಿರುವ 4 ಸಾವಿರ ಚದರ ಅಡಿ ವಿಸ್ತೀರ್ಣದ ಜಾಗದಲ್ಲಿ 2014 ಜೂನ್‌ 17ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಡಿಗಲ್ಲು ಹಾಕಿದ್ದರು. 2016 ಏಪ್ರಿಲ್‌ ಅಂತ್ಯದಲ್ಲಿ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಪುಂಡಲೀಕ ಹಾಲಂಬಿ ಗುದ್ದಲಿಪೂಜೆ ಮಾಡಿದ್ದರು. ಕಸಾಪದ ಶತಮಾನೋತ್ಸವದ ಸ್ಮರಣೆಗಾಗಿ ಸರ್ಕಾರ ಸುಮಾರು 4 ಕೋಟಿ ರೂ.ಗಳನ್ನು ಶತಮಾನೋತ್ಸವ ಭವನಕ್ಕಾಗಿ ಅನುದಾನ ನೀಡಿತ್ತು. 

ಮೈಸೂರಿನ ಸಾಹಿತ್ಯ ಸಮ್ಮೇಳನ ಮುಗಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ರಿಂದ ಶತಮಾನೋತ್ಸವ ಭವನ ಲೋಕಾರ್ಪಣೆಗೊಳ್ಳಲಿದೆ. ಡಿಸೆಂಬರ್‌ ಮೊದಲ ಅಥವಾ ಎರಡನೇ ವಾರದಲ್ಲಿ ಮುಹೂರ್ತ ನಿಗದಿ ಮಾಡುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.
ಡಾ.ಮನುಬಳಿಗಾರ್‌, ಅಧ್ಯಕ್ಷ, ಕಸಾಪ 

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.