ನೇಪಾಳದೊಂದಿಗೆ ಕಸಾಪ ನೆಂಟಸ್ತನ


Team Udayavani, Sep 24, 2018, 12:30 PM IST

nepala.jpg

ಬೆಂಗಳೂರು: ಭಾಷೆ ಹಾಗೂ ಸಾಹಿತ್ಯದ ಬೆಳವಣಿಗೆ ದೃಷ್ಟಿಯಿಂದ ನೇಪಾಳದೊಂದಿಗೆ ನೆಂಟಸ್ತನ ಮಾಡಲು ಕನ್ನಡ ಸಾಹಿತ್ಯ ಪರಿಷತ್‌ ಮುಂದಾಗಿದೆ. ಆ  ನಿಟ್ಟಿನಲ್ಲಿ ಕನ್ನಡದ ಹೆಸರಾಂತ ಸಾಹಿತಿಗಳ ಕವಿತೆಗಳು ನೇಪಾಳಿ ಭಾಷೆಗೆ, ಹಾಗೇ ಆ ಭಾಷೆಯ ಹೆಸರಾಂತ ಕವಿಗಳ ಕವಿತೆಗಳು ಕನ್ನಡ ಭಾಷೆಯಲ್ಲಿ  ದೊರೆಯುವಂತೆ ಮಾಡುವ ಯೋಜನೆ ಸಿದ್ಧಪಡಿಸಿದ್ದು, ಇನ್ನು 3 ತಿಂಗಳಲ್ಲಿ ಓದುಗರಿಗೆ ಲಭ್ಯವಾಗಲಿದೆ. 

ನೇಪಾಳಿ ಭಾಷಾ ಸಾಂಸ್ಕೃತಿಕ ಮತ್ತು ಸಾಹಿತ್ಯ ವಿಭಾಗದ 6 ಮಂದಿ ಒಳಗೊಂಡ ನಿಯೋಗ ಕಳೆದ ವರ್ಷ ನೇಪಾಳ ಕಲಾ ಡಾಟ್‌.ಕಾಂ ಮುಖ್ಯಸ್ಥೆ  ಮಮಿಲಾ ಜೋಷಿ ನೇತೃತ್ವದಲ್ಲಿ ಬೆಂಗಳೂರಿಗೆ ಭೇಟಿ ನೀಡಿತ್ತು. ಈ ವೇಳೆ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ.ಮನು ಬಳಿಗಾರ್‌ ರನ್ನು ಭೇಟಿ ಮಾಡಿ,  ಕವಿತೆಗಳ ವಿನಿಮಯದ ಸಂಬಂಧ ಮಾತುಕತೆ ನಡೆಸಿತ್ತು. 

ಕಸಾಪ ಅಧ್ಯಕ್ಷ ಡಾ.ಮನು ಬಳಿಗಾರ್‌ ಮತ್ತು ಮಮಿಲಾ ಜೋಷಿ ಅವರು ಕವಿತೆ ವಿನಿಮಯದ  ಕುರಿತು ಒಪ್ಪಿಗೆ ಸೂಚಿಸಿದ್ದರು. ಈ ವೇಳೆ ಕನ್ನಡ ಸಾಹಿತ್ಯ ಲೋಕದ ಜ್ಞಾನಪೀಠ ಪುರಸ್ಕೃತ ಕವಿಗಳ ಜತೆಗೆ ಇತರೆ 50 ಕವಿಗಳ ಕವಿತೆಗಳನ್ನು ನೇಪಾಳಿ  ಭಾಷೆಗೆ, ಹಾಗೆಯೆ ನೇಪಾಳಿ ಭಾಷೆಯ 50 ಕವಿತೆಗಳನ್ನು ಕನ್ನಡಕ್ಕೆ ಭಾಷಾಂತರಿಸಿ ಪುಸ್ತಕ ರೂಪದಲ್ಲಿ ಪ್ರಕಟಿಸುವ ಸಂಬಂಧದ ಒಪ್ಪಂದಕ್ಕೆ ಪರಿಷತ್ತಿನ  ಹಿರಿಯರ ಸಮ್ಮುಖದಲ್ಲಿ ಸಹಿ ಹಾಕಲಾಗಿತ್ತು. 

ಯಾವ ಕವಿಗಳ ಕವಿತೆಗಳು?: ಜ್ಞಾನಪೀಠ ಪುರಸ್ಕೃತರಾದ ಕುವೆಂಪು, ಡಾ.ದ.ರಾ.ಬೇಂದ್ರೆ, ಡಾ.ವಿ.ಕೃ.ಗೋಕಾಕ್‌, ಡಾ.ಚಂದ್ರಶೇಖರ ಕಂಬಾರ,  ಡಾ.ಯು.ಆರ್‌.ಅನಂತಮೂರ್ತಿ ಜತೆಗೆ ರಾಷ್ಟ್ರಕವಿ ಡಾ.ಜಿ.ಎಸ್‌.ಶಿವರುದ್ರಪ್ಪ, ಪಿ. ಲಂಕೇಶ್‌, ಡಾ.ಸಿದ್ದಲಿಂಗಯ್ಯ, ಡಾ.ಕೆ.ಎಸ್‌. ನಿಸಾರ್‌ ಅಹಮದ್‌,  ಡಾ.ಚಂದ್ರಶೇಖರ ಪಾಟೀಲ, ಡಾ.ಬರಗೂರ ರಾಮಚಂದ್ರಪ್ಪ, ಸಿದ್ಧಯ್ಯ ಪುರಾಣಿಕ್‌, ಡಾ.ದೊಡ್ಡರಂಗೇಗೌಡ, 

ಡಾ.ಚನ್ನವೀರ ಕಣವಿ, ಡಾ.ಸುಮತೀಂದ್ರ ನಾಡಿಗ, ಡಾ.ಎಚ್‌.ಎಸ್‌.ವೆಂಕಟೇಶ ಮೂರ್ತಿ, ಡಾ.ಜಯಂತ ಕಾಯ್ಕಿಣಿ, ಪ್ರೊ. ತೇಜಸ್ವಿನಿ ಕಟ್ಟಿಮನಿ ಸೇರಿದಂತೆ ನಾಡಿನ 50  ಹೆಸರಾಂತ ಸಾಹಿತಿಗಳ ಕವಿತೆಗಳು ನೇಪಾಳಿ ಭಾಷೆಗೆ ಅನುವಾದವಾಗಲಿವೆ. ಕುವೆಂಪು ಕವಿತೆಗಳನ್ನು ಎನ್‌.ಎಸ್‌. ನಟರಾಜ, ದ.ರಾ.ಬೇಂದ್ರೆ  ಕವಿತೆಯನ್ನು ಕೆ.ಎಸ್‌. ರಾಘವೇಂದ್ರ, ಡಾ.ಯು.ಆರ್‌. ಅನಂತಮೂರ್ತಿ ಕವಿತೆಯನ್ನು ಸುಕೇತು ಮೆಹ್ತಾ

ಮತ್ತು ಶರತ್‌ ಅನಂತಮೂರ್ತಿ, ಡಾ.ಜಿ.ಎಸ್‌.ಶಿವರುದ್ರಪ್ಪ ಕವಿತೆಗಳನ್ನು ಜಿ.ಎಸ್‌.ಆಮೂರ, ಪಿ.ಲಂಕೇಶ್‌ ಅವರ ಕವಿತೆಗಳನ್ನು ಪಿ.ರಾಮಮೂರ್ತಿ ಆಂಗ್ಲ ಭಾಷೆಗೆ ಭಾಷಾಂತರಿಸಿದ್ದಾರೆ. ಇನೂ,° ಹಲವು ಕವಿಗಳ ಕವಿತೆಗಳ ಇಂಗ್ಲಿಷ್‌ ಅನುವಾದವನ್ನು ಬೇರೆ-ಬೇರೆ ಅನುವಾದಕರಿಗೆ ಕಸಾಪ ವಹಿಸಿದೆ. ನಂತರ  ಅವುಗಳನ್ನು ನೇಪಾಳಿ ಭಾಷಾಂತರಕಾರರು ತಮ್ಮ ಭಾಷೆಗೆ ತರ್ಜುಮೆ ಮಾಡುತ್ತಾರೆ. 

ನೇಪಾಳಿ ಭಾಷೆಯ ಕವಿಗಳು: ಅದೇರೀತಿ ನೇಪಾಳಿ ಹೆಸರಾಂತ ಕವಿ ಗೋಪಾಲ ಪ್ರಸಾದ್‌ ರಿಮಾಲ್‌, ಲಕ್ಷಿ ಪ್ರಸಾದ್‌ ದೇವ್‌ಕೋಟ, ತುಳಸಿ ದಿವಾಸ್‌,  ಶೈಲೇಂದ್ರ ಸರ್ಕಾರ್‌, ನರೇಶ್‌ ಶಕ್ಯಾ, ಎಸ್‌.ಪಿ.ಕೋಯಿರಾಲ, ಅವಿನಾಶ್‌ ಶ್ರೇಷ್ಠ, ಕೃಷ್ಣ ಸೇನ್‌ ಇನ್ನಿತರ ಕವಿಗಳ ಕವಿತೆಗಳನ್ನು ಆಂಗ್ಲ ಭಾಷೆಗೆ, ಅಲ್ಲಿಂದ  ಕನ್ನಡಕ್ಕೆ ಅನುವಾದ ಮಾಡಲಾಗುತ್ತದೆ.

ಮುದ್ರಣ ಹಂತದಲ್ಲಿ ಪುಸ್ತಕ: ಕನ್ನಡ ಭಾಷೆಯ ಕವಿತೆಗಳನ್ನು ಈಗಾಗಲೇ ಇಂಗ್ಲಿಷ್‌ ಭಾಷೆಗೆ ಅನುವಾದ ಮಾಡಿ ನೇಪಾಳಿಗೂ  ಭಾಷಾಂತರಗೊಳಿಸಲಾಗಿದ್ದು, ನೇಪಾಳಿ ಕವಿತೆಗಳನ್ನು ಕನ್ನಡಕ್ಕೆ ಭಾಷಾಂತರಿಸುವ ಕಾರ್ಯವೂ ಮುಗಿದು, ಪುಸ್ತಕಗಳು ಮುದ್ರಣ ಹಂತದಲ್ಲಿವೆ. 3  ತಿಂಗಳಲ್ಲಿ ಈ ಕೆಲಸ ಪೂರ್ಣ ಗೊಳ್ಳಲಿದ್ದು, ಶೀಘ್ರದಲ್ಲೇ ಅವುಗಳನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗುವುದು ಎಂದು ಕಸಾಪ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.

ಭಾಷಾ ಬೆಳವಣಿಗೆ ಹಿನ್ನೆಲೆಯಲ್ಲಿ ಕಸಾಪ ನೇಪಾಳದೊಂದಿಗೆ  ನೆಂಟಸ್ತಿಕೆ ಮಾಡಲು ಮುಂದಾಗಿದೆ. ಈ ಕೊಡು-ಕೊಳ್ಳುವಿಕೆ ಪ್ರಕ್ರಿಯೆಯಿಂದಾಗಿ ಕನ್ನಡ ಭಾಷಾ ಸೊಗಡು, ನೇಪಾಳಿಗೆ  ಹಾಗೂ ಅಲ್ಲಿನ ಸಾಹಿತ್ಯದ ಸೊಗಡು ಕನ್ನಡಿಗರಿಗೆ  ದೊರೆಯಲಿದೆ. 
-ಡಾ.ಮನು ಬಳಿಗಾರ್‌, ಕಸಾಪ ಅಧ್ಯಕ್ಷ

* ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.