ನಿಗದಿಗಿಂತ ಹೆಚ್ಚು ಹರಿದ ಕಾವೇರಿ

ಕಾವೇರಿ ಕೊಳ್ಳ ಭಾಗದಲ್ಲಿ ಉತ್ತಮ ಮಳೆ | ನೀರು ಬಿಡುವ ವಿಚಾರ: ಸರ್ಕಾರ ನಿರಾಳ

Team Udayavani, Nov 4, 2020, 1:56 PM IST

bng-tdy-3

ಬೆಂಗಳೂರು: ಕಾವೇರಿ ಜಲಾನಯನ ಕೊಳ್ಳದಲ್ಲಿ ಈ ವರ್ಷ ಉತ್ತಮ ಮಳೆಯಾಗಿರುವುದರಿಂದ ತಮಿಳುನಾಡಿಗೆ ಅಕ್ಟೋಬರ್‌ ಅಂತ್ಯದವರೆಗೂ ಬಿಡುಗಡೆಯಾಗುವ ನೀರಿಗಿಂತಲೂ ಹೆಚ್ಚು ನೀರು ಹರಿದು ಹೋಗಿದ್ದು, ಈ ವರ್ಷ ಕಾವೇರಿ ಕೊಳ್ಳದ ರೈತರು ಹಾಗೂ ರಾಜ್ಯ ಸರ್ಕಾರಕ್ಕೆ ಕಾವೇರಿ ತಲೆನೋವಿಲ್ಲ.

ಪ್ರತಿ ವರ್ಷ ಮಳೆಗಾಲ ಮುಕ್ತಾಯವಾಗುತ್ತಿರುವಂತೆ ಕಾವೇರಿ ಕೊಳ್ಳದ ಅಣೆಕಟ್ಟೆಗಳಲ್ಲಿನ ನೀರಿನ ಪ್ರಮಾಣದ ಆಧಾರದಲ್ಲಿ (ಸುಪ್ರೀಂಕೋರ್ಟ್‌ ಆದೇಶದನ್ವಯ) ಮುಂದಿನ ಎಂಟು ತಿಂಗಳು ತಮಿಳುನಾಡಿಗೆ ನೀರು ಹರಿಸುವುದು ರಾಜ್ಯ ಸರ್ಕಾರಕ್ಕೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸುತ್ತದೆ. ಈ ವರ್ಷ ಮುಂಗಾರಿನಲ್ಲಿ ಕಾವೇರಿ ಕೊಳ್ಳದ ಭಾಗದಲ್ಲಿ ಉತ್ತಮ ಮಳೆಯಾಗಿರುವುದರಿಂದ ಕೆಆರ್‌ಎಸ್‌, ಕಬಿನಿ, ಹೇಮಾವತಿ ನದಿಗಳು ಭರ್ತಿಯಾಗಿದ್ದು, ನದಿ ಪಾತ್ರದ ಪ್ರದೇಶದಲ್ಲಿ ಮಳೆ ಯಾಗುತ್ತಿರುವುದರಿಂದಲೇ ತಮಿಳುನಾಡಿಗೆ ಪ್ರತಿ ತಿಂಗಳು ಬಿಡಬೇಕಾದ ನೀರಿಗಿಂತಲೂ ಹೆಚ್ಚು ನೀರು ಈಗಾಗಲೇ ಬಿಳಿಗುಂಡ್ಲುವಿನಲ್ಲಿ ದಾಖಲಾಗಿದೆ.

ತಮಿಳುನಾಡಿಗೆ ಎಷ್ಟು?: ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ 2018ರಲ್ಲಿ ಸುಪ್ರೀಂಕೋರ್ಟ್‌ ನೀಡಿರುವ ಆದೇಶ ದಂತೆ ತಮಿಳುನಾಡಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ 177 ಟಿಎಂಸಿ ಅಡಿ ನೀರು ಹರಿಸಬೇಕು. ಜೂನ್‌ನಿಂದ ಮೇ ವರೆಗೂ ಮಾನ್ಸೂನ್‌ ವರ್ಷದಲ್ಲಿ ಪ್ರತಿ ತಿಂಗಳು ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುವುದನ್ನು ನಿಗದಿ ಪಡಿಸಲಾಗಿದ್ದು, ಈ ವರ್ಷದ ಮಾನ್ಸೂನ್‌ ವರ್ಷದಲ್ಲಿ ಜೂನ್‌ನಿಂದ ಅಕ್ಟೋಬರ್‌ವರೆಗೆ 143. 82 ಟಿಎಂಸಿ ನೀರು ಹರಿಸಬೇಕಾಗಿದೆ.

ಆದರೆ, ಈಗಾಗಲೇ ನ.1ರವರೆಗೆ ಕೆಆರ್‌ಎಸ್‌ನಿಂದ 160.603 ಟಿಎಂಸಿ ನೀರು ತಮಿಳುನಾಡಿನ ಬಿಳಿಗುಂಡ್ಲುವಿನಲ್ಲಿ ನೀರು ಸಂಗ್ರಹವಾಗಿರುವುದು ದಾಖಲಾಗಿದೆ. ಅಕ್ಟೋಬರ್‌ ವರೆಗೆ ಸುಪ್ರೀಂ ಕೋರ್ಟ್‌ ನಿಗದಿಪಡಿಸಿರುವುದಕ್ಕಿಂತಲೂ 17 ಟಿಎಂಸಿ ಹೆಚ್ಚು ನೀರು ತಮಿಳುನಾಡಿಗೆ ಹರಿದು ಹೋಗಿದ್ದು, ನವೆಂಬರ್‌ ತಿಂಗಳಲ್ಲಿ ಬಿಡಬೇಕಿರುವ 13.76 ಟಿಎಂಸಿ ನೀರು ಕೂಡ ಈಗಾಗಲೇ ಹರಿದು ಹೋಗಿದ್ದು ರಾಜ್ಯ ಸರ್ಕಾರ ನಿರಾಳವಾಗುವಂತೆ ಮಾಡಿದೆ. ಅಲ್ಲದೇ ಕಾವೇರಿ ನದಿ ಪಾತ್ರದಲ್ಲಿ ಮಳೆಯಾಗುತ್ತಿರುವುದರಿಂದ ಪ್ರತಿ ದಿನ ಸುಮಾರು 6000 ದಿಂದ 8000 ಕ್ಯೂಸೆಕ್‌ ನೀರು ನದಿಯಿಂದಲೇ ಹರಿದು ಹೋಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಅಣೆಕಟ್ಟೆಯಿಂದ ನೀರು ಹರಿಸುವ ಗೋಜಿಗೆ ಹೋಗಿಲ್ಲ.

8 ತಿಂಗಳಲ್ಲಿ 17 ಟಿಎಂಸಿ ಮಾತ್ರ : ನವೆಂಬರ್‌ನಿಂದ ಮುಂದಿನ ಜೂನ್‌ ವರೆಗೂ ರಾಜ್ಯದಿಂದ ತಮಿಳುನಾಡಿಗೆ ಕೇವಲ 17 ಟಿಎಂಸಿ ನೀರು ಮಾತ್ರ ಬಿಡಬೇಕಿದೆ. ನವೆಂಬರ್‌ನಲ್ಲಿ 13.78 ಟಿಎಂಸಿ, ಡಿಸೆಂಬರ್‌ನಲ್ಲಿ 7.35 ಟಿಎಂಸಿ,2021 ರ ಜನವರಿಯಲ್ಲಿ 2.76 ಟಿಎಂಸಿ, ಫೆಬ್ರವರಿಯಲ್ಲಿ 2.50 ಟಿಎಂಸಿ, ಮಾರ್ಚ್‌ ನಲ್ಲಿ 2.50, ಏಪ್ರಿಲ್‌ನಲ್ಲಿ 2.50 ಹಾಗೂ ಮೇ ತಿಂಗಳಲ್ಲಿ 2.50 ಟಿಎಂಸಿ ನೀರು ಹರಿಸಬೇಕಿದೆ. ಇನ್ನೂ ಕಾವೇರಿ ಜಲಾನ ಯನ ಪ್ರದೇಶದಲ್ಲಿ ಮಳೆಯಾಗುತ್ತಿರುವು  ದರಿಂದ ಹಾಗೂ ರಾಜ್ಯದ ರೈತರ ಬೆಳೆಗಳಿಗೆ ನೀರು ಹರಿಸಿದಾಗ ಹೆಚ್ಚುವರಿ ನೀರು ನದಿಗೆ ಹರಿದು ತಮಿಳುನಾಡಿಗೆ ಹೋಗುವುದರಿಂದ ಉಳಿದ 17 ಟಿಎಂಸಿ ನೀರು ಜಲಾಶಯದಿಂದ ಬಿಡದಿದ್ದರೂ ಹರಿದು ಹೋಗುವ ಸಾಧ್ಯತೆ ಇದೆ. ಹೀಗಾಗಿ ಈ ಮಾನ್ಸೂನ್‌ ವರ್ಷದಲ್ಲಿ ಕಾವೇರಿ ನೀರು ಬಿಡುವ ಕುರಿತು ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸುತ್ತಾರೆ.

ನಿರ್ವಹಣಾ ಮಂಡಳಿ ವ್ಯಾಪ್ತಿ: ಪ್ರತಿ ತಿಂಗಳು ಆಯಾ ರಾಜ್ಯಗಳಿಗೆ ಸುಪ್ರೀಂಕೋರ್ಟ್‌ ಆದೇಶದಂತೆ ಹಂಚಿಕೆಯಾಗಿರುವ ನೀರನ್ನು ಬಿಡುಗಡೆಗೊಳಿಸಲು ಕೇಂದ್ರ ಸರ್ಕಾರದ ಜಲ ಸಂಪನ್ಮೂಲ ಇಲಾಖೆ ಅಧಿಕಾರಿ ನೇತೃತ್ವದಲ್ಲಿ ಎಲ್ಲ ರಾಜ್ಯಗಳ ಅಧಿಕಾರಿಗಳನ್ನೊಳಗೊಂಡ ಕಾವೇರಿ ನೀರು ನಿರ್ವಹಣಾ ಮಂಡಳಿ ನಿರ್ದೇಶನದಂತೆ ತಮಿಳು ನಾಡಿಗೆ ನೀರು ಬಿಡಲಾಗುತ್ತಿದ್ದು, ಯಾವುದೇ ರೀತಿಯ ಗೊಂದಲ ಉಂಟಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ರೈತರಿಗೆ ಅನುಕೂಲ: ಈ ಬಾರಿ ಮುಂಗಾರಿನಲ್ಲಿ ಉತ್ತಮ ಮಳೆಯಾಗಿದ್ದರಿಂದ ತಮಿಳು ನಾಡಿಗೆ ನೀರು ಬಿಡಲು ಯಾವುದೇ ತೊಂದರೆಯಾಗದಿರುವುದರಿಂದ ಬೇಸಿಗೆಯಲ್ಲಿ ಕಾವೇರಿ ಕೊಳ್ಳದ ರೈತರಿಗೆ ನೀರಿನ ಸಮಸ್ಯೆಯಾಗುವುದಿಲ್ಲ. ಹೀಗಾಗಿ ಕಾವೇರಿ ಜಲಾನಯನ ಪ್ರದೇಶದ ರೈತರು ಈ ವರ್ಷ ಬೇಸಿಗೆಯಲ್ಲಿ ನೀರಿನ ಸಮಸ್ಯೆ  ಯಾಗುವುದಿಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ.

ಕಾವೇರಿ ಕಣಿವೆಯಲ್ಲಿ ಅತಿ ಹೆಚ್ಚು ಮಳೆಯಾಗಿದೆ. ನ್ಯಾಯಾಧಿಕರಣದ ನಿರ್ದೇಶನದಂತೆ ಅಕ್ಟೋಬರ್‌ ವರೆಗೆ ತಮಿಳುನಾಡಿಗೆ 143.46 ಟಿಎಂಸಿಯಷ್ಟು ನೀರನ್ನು ಬಿಡಬೇಕು. ಅದೃಷ್ಟವಶಾತ್‌ ಕಾವೇರಿ ಕಣಿವೆಯಲ್ಲಿ ಮಳೆಯ ಪ್ರಮಾಣ ಜಾಸ್ತಿ ಆದ ಕಾರಣ 159.36 ಟಿಎಂಸಿಯಷ್ಟು ನೀರನ್ನು ನಾವು ಈಗಾಗಲೇ ಬಿಡುಗಡೆ ಮಾಡಿದ್ದೇವೆ. ರಮೇಶ್‌ ಜಾರಕಿಹೊಳಿ, ಜಲ ಸಂಪನ್ಮೂಲ ಸಚಿವ.

 

ಶಂಕರ ಪಾಗೋಜಿ

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.