ಕೆಂಪೇಗೌಡ ಪ್ರಶಸ್ತಿ: ಹೈಕೋರ್ಟ್ನಲ್ಲಿ ಅರ್ಜಿ ವಜಾ
Team Udayavani, Nov 10, 2018, 11:48 AM IST
ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಬಿಬಿಎಂಪಿ ನೀಡುವ ನಾಗರಿಕ ಪುರಸ್ಕಾರ “ನಾಡಪ್ರಭು ಕೆಂಪೇಗೌಡ ಪ್ರಶಸ್ತಿ’ ಹಾಗೂ ಅದರ ಆಯ್ಕೆಗೆ ನಿರ್ದಿಷ್ಟ ಮಾನದಂಡಗಳನ್ನು ರೂಪಿಸುವಂತೆ ನಿರ್ದೇಶನ ನೀಡಲು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿತು.
ಬೆಂಗಳೂರಿನ ಜೆ.ಪಿ.ನಗರ 2ನೇ ಹಂತದ ನಿವಾಸಿ ಕೆ.ಅನಿಲ್ ಕುಮಾರ್ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ದಿನೇಶ್ ಮಹೇಶ್ವರಿ ಅವರ ನೇತೃತ್ವದ ವಿಭಾಗೀಯ ಪೀಠ, ಪ್ರಶಸ್ತಿಗೆ ಮಾನದಂಡ ಹಾಗೂ ಆಯ್ಕೆ ಸಮಿತಿ ರಚನೆ ಬಗ್ಗೆ ಸರ್ಕಾರ, ಬಿಬಿಎಂಪಿಗೆ ಮನವಿ ಸಲ್ಲಿಸುವಂತೆ ಅರ್ಜಿದಾರರಿಗೆ ಹೇಳಿ, ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.
ವಿಚಾರಣೆ ವೇಳೆ “ಸಂಬಂಧಪಟ್ಟವರಿಗೆ ಮನವಿ ಸಲ್ಲಿಸುವ ಬದಲು ನೇರವಾಗಿ ನ್ಯಾಯಾಲಯದ ಮೊರೆ ಹೋಗಿದ್ದೀರಿ. ಪ್ರಶಸ್ತಿ ಯಾರಿಗೆ ಕೊಡಬೇಕು, ಯಾರಿಗೆ ಕೊಡಬಾರದು ಎಂದು ಕೋರ್ಟ್ ನಿರ್ಧರಿಸಲು ಸಾಧ್ಯವಿಲ್ಲ. ಅದಕ್ಕೆ ಸರ್ಕಾರ ಹಾಗೂ ಬೇರೆ ಸಂಸ್ಥೆಗಳಿವೆ. ಅವು ಆ ಕೆಲಸ ಮಾಡಲಿವೆ. ಯಾವುದೇ ಸಾರ್ವಜನಿಕ ಹಿತಾಸಕ್ತಿ ಕಾಣುತ್ತಿಲ್ಲ ನಮ್ಮ ಆದ್ಯತೆಗಳೇನು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಿದೆ ಎಂದು ನ್ಯಾಯಪೀಠ ಸೂಕ್ಷ್ಮವಾಗಿ ಹೇಳಿ ಅರ್ಜಿ ವಜಾಗೊಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
MUST WATCH
ಹೊಸ ಸೇರ್ಪಡೆ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್