ಕೆಂಪೇಗೌಡ ಪ್ರಶಸ್ತಿ ಪುರಸ್ಕೃತ ಪಟ್ಟಿ ಪ್ರಕಟ 


Team Udayavani, Aug 16, 2018, 12:58 PM IST

kempegowda.jpg

ಬೆಂಗಳೂರು: ನಾಡಪ್ರಭು ಕೆಂಪೇಗೌಡ ದಿನಾಚರಣೆಯ ಅಂಗವಾಗಿ ಪ್ರತಿವರ್ಷ ಬಿಬಿಎಂಪಿಯಿಂದ ನೀಡಲಾಗುವ ಕೆಂಪೇಗೌಡ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆಯಾಗಿದ್ದು, ಈ ಬಾರಿ 270 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 

ವಿವಿಧ ಕಾರಣಗಳಿಂದ ಮೂರು ಬಾರಿ ಮುಂದೂಡಲಾಗಿದ್ದ ಕೆಂಪೇಗೌಡ ದಿನಾಚರಣೆ ಗುರುವಾರ (ಆ.16) ನಡೆಯಲಿದ್ದು, ಬೆಳಗ್ಗೆಯಿಂದಲೇ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಇದರೊಂದಿಗೆ ಮಧ್ಯಾಹ್ನ 2 ಗಂಟೆಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ಉತ್ತಮ ನೌಕರರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದು, ಸಂಜೆ 6 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಪುರಸ್ಕೃತರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. 

ಈ ಬಾರಿಯ ಕೆಂಪೇಗೌಡ ಪ್ರಶಸ್ತಿ ನಟರಾದ ಸುದೀಪ್‌, ಅರವಿಂದ ರಮೇಶ್‌, ಟಿ.ಎನ್‌.ಸೀತಾರಾಂ, ಸಾಹಿತಿ ಎಂ.ಎಸ್‌.ಆಶಾದೇವಿ, ತಲಕಾಡು ಚಿಕ್ಕರಂಗೇಗೌಡ, ರಂಗಭೂಮಿ ಕಲಾವಿದ ಶ್ರೀನಿವಾಸ ಜಿ.ಕಪ್ಪಣ್ಣ, ಡಾ. ಕಾಮಿನಿ ರಾವ್‌, ತಿಮ್ಮೇಗೌಡ ಸೇರಿದಂತೆ ಪ್ರಮುಖರನ್ನು ಆಯ್ಕೆ ಮಾಡಲಾಗಿದೆ. 

ಕೆಂಪೇಗೌಡ ದಿನಾಚರಣೆಗೆ ಪಾಲಿಕೆಯಿಂದ ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಬುಧವಾರ ಬೆಳಗ್ಗೆ ಕೆಂಪೇಗೌಡ ನಿರ್ಮಿತ ನಾಲ್ಕು ಗಡಿಗೋಪುರ ಹಾಗೂ  ಮಾಗಡಿ ಕೆಂಪೇಗೌಡ ಸಮಾಧಿಯಿಂದ ಜ್ಯೋತಿಯಾತ್ರೆ ಆರಂಭವಾಗುವ ಮೂಲಕ ಜಯಂತಿ ಆಚರಣೆಗೆ ಚಾಲನೆ ದೊರೆಯಲಿದೆ.

ಬೆಳಗ್ಗೆ 9 ಗಂಟೆಗೆ ಲಾಲ್‌ಬಾಗ್‌, ಕೆಂಪಾಂಬುಧಿ ಕೆರೆ, ಹಲಸೂರು ಹಾಗೂ ಮೇಖೀ ವೃತ್ತದಲ್ಲಿರುವ ನಾಲ್ಕು ಗೋಪುರಗಳಿಂದ ಜ್ಯೋತಿಯಾತ್ರೆ ಆರಂಭವಾಗಿ, ಬಿಬಿಎಂಪಿಯ ಕೇಂದ್ರ ಕಚೇರಿಗೆ ಬಂದು ಪೂರ್ಣವಾಗಲಿದೆ. ಇತ್ತೀಚೆಗೆ ಪತ್ತೆಯಾದ ಮಾಗಡಿಯಲ್ಲಿನ ಕೆಂಪೇಗೌಡರ ಸಮಾಧಿಯಿಂದಲೂ ಜ್ಯೋತಿಯಾತ್ರೆ ನಡೆಯಲಿದ್ದು, ಅದು ಸಹ ಬಿಬಿಎಂಪಿ ಕೇಂದ್ರ ಕಚೇರಿಗೆ ಬಂದು ಕೊನೆಗೊಳ್ಳಲಿದೆ.

ಜ್ಯೋತಿಯಾತ್ರೆ ವೇಳೆ ಗೊಂಬೆ ಕುಣಿತ, ಡೊಳ್ಳು ಕುಣಿತ, ವೀರಗಾಸೆ ಮೊದಲಾದ ಜಾನಪದ ಕಲಾ ತಂಡಗಳು ದಾರಿಯುದ್ದಕ್ಕೂ ಪ್ರದರ್ಶನ ನೀಡುವ ಮೂಲಕ ಯಾತ್ರೆಗೆ ಮೆರುಗು ನೀಡಲಿವೆ. ಜತೆಗೆ ಸ್ತಬ್ಧಚಿತ್ರಗಳ ಪ್ರದರ್ಶನ ಕೂಡಾ ಮೆರವಣಿಗೆಯ ಆಕರ್ಷಣೆ ಹೆಚ್ಚಿಸಲಿವೆ.

ಬೆಳಗ್ಗೆ 8 ಗಂಟೆಗೆ ಬಿಬಿಎಂಪಿ ಮುಂಭಾಗದ ಕೆಂಪೇಗೌಡ ಹಾಗೂ ಸೊಸೆ ಲಕ್ಷ್ಮಿದೇವಿ ಪ್ರತಿಮೆಗೆ ಮೇಯರ್‌ ಆರ್‌.ಸಂಪತ್‌ ರಾಜ್‌ ಮಾಲಾರ್ಪಣೆ ಮಾಡಲಿದ್ದು, 9 ಗಂಟೆಗೆ ಲಾಲ್‌ಬಾಗ್‌ನಲ್ಲಿರುವ ಗಡಿಗೋಪುರಕ್ಕೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಪೂಜೆ ನೆರವೇರಿಸಿ ಜ್ಯೋತಿಯಾತ್ರೆಗೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಕೋರಮಂಗಲದಲ್ಲಿರುವ ಸೊಸೆ ಲಕ್ಷ್ಮಿದೇವಿ ಸಮಾಧಿಯ ಬಳಿ ಪೂಜೆ ನಡೆಯಲಿದೆ.

ಬೆಳಗ್ಗೆ 11 ಗಂಟೆಗೆ ಬಿಬಿಎಂಪಿಯ ಕೇಂದ್ರ ಕಚೇರಿಗೆ ಆಗಮಿಸಲಿರುವ ನಾಲ್ಕು ಗಡಿಗೋಪುರಗಳ ಜ್ಯೋತಿಯಾತ್ರೆಯನ್ನು ಮೇಯರ್‌ ಹಾಗೂ ಉಪಮುಖ್ಯಮಂತ್ರಿ ಬರಮಾಡಿಕೊಳ್ಳಲಿದ್ದಾರೆ. ನಂತರದಲ್ಲಿ ಪಾಲಿಕೆ ಆವರಣದ ಡಾ.ರಾಜ್‌ಕುಮಾರ್‌ ಗಾಜಿನ ಮನೆಯಲ್ಲಿ ಅಧಿಕಾರಿಗಳು ಹಾಗೂ ನೌಕರರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ವಿವಿಧ ಕಲಾತಂಡಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಡಲಿವೆ.

ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿರುವ ಪ್ರಮುಖರು
ಚಿತ್ರರಂಗ:
ಸುದೀಪ್‌, ರಮೇಶ್‌ ಅರವಿಂದ್‌, ಬಿ.ಸುರೇಶ್‌, ಟಿ.ಎನ್‌.ಸೀತಾರಾಂ, ಅನುಶ್ರೀ, ಸೃಜನ್‌ ಲೋಕೇಶ್‌, ಬೆಂಗಳೂರು ನಾಗೇಶ್‌, ಎಂ.ಎನ್‌.ಸುರೇಶ್‌. 

ವೈದ್ಯಕೀಯ ಸೇವೆ: ಡಾ.ನವೀನ್‌, ಡಾ.ಸಂಜಯ್‌ ರಾವ್‌, ಡಾ.ಕಾಮಿನಿ ರಾವ್‌, ಡಾ.ಚಾಂಡಿ, ಡಾ.ವಿಶಾಲ್‌ ರಾವ್‌, ಡಾ. ಬಿ.ಎ.ನಾಗರಾಜ್‌.

ಸಾಹಿತ್ಯ: ಡಾ.ಎಂ.ವಿ.ಶ್ರೀನಿವಾಸ್‌, ಎಂ.ಜಿ.ನಾಗರಾಜ್‌, ಎಂ.ಎಸ್‌.ಆಶಾದೇವಿ, ತಲಕಾಡು ಚಿಕ್ಕರಂಗೇಗೌಡ, ಅಪ್ಪಣ್ಣ ರೆಡ್ಡಿ ನಾರಾಯಣ ಘಟ್ಟ ಹಾಗೂ ತಿಮ್ಮೇಗೌಡ.

ಇತರೆ ಕ್ಷೇತ್ರ: ಡಾ.ಪದ್ಮಭೂಷಣ ಮಹದೇವಪ್ಪ (ಕೃಷಿ), ಪ್ರದೀಪ್‌ ಆರ್ಯ (ಭಾರತೀಯ ಸೇನೆ), ಪಿ. ಧನಂಜಯ (ರಂಗಭೂಮಿ), ಡಾ.ಸಚ್ಚಿದಾನಂದ್‌ (ಉಪ ಕುಲಪತಿ), ಓಂ ಸ್ವರೂಪ್‌ ಗೌಡ (ಕ್ರೀಡೆ), ಜಿ.ಮೂಡಲಪ್ಪ (ರಂಗಭೂಮಿ), ಡಾ.ರವೀಂದ್ರ (ಸರ್ಕಾರಿ ಸೇವೆ), ಕೆ.ಎಂ.ಇಂದ್ರ (ಸಂಗೀತ), ರವಿಶಂಕರ್‌ ಎನ್‌.ಎಸ್‌.ರಾವ್‌ (ಕ್ರೀಡೆ), ಜೈಬೋ, ಕೆ. ಮಾಯಪ್ಪ ಹಾಗೂ ಜಮಾಲ್‌ (ಶಿಕ್ಷಣ), ಅರುಳಾಳನ್‌ (ಧಾರ್ಮಿಕ), ಶ್ರೀನಿವಾಸ್‌ ಜಿ.ಕಪ್ಪಣ್ಣ (ರಂಗಭೂಮಿ), ನಾಗರಾಜ್‌ ಶೆಣೈ (ಸಮಾಜಸೇವೆ), ಸಿ.ಜಿ.ಶ್ರೀನಿವಾಸ್‌ (ಉದ್ಯಮಿ), ವಿನಯ್‌ ಮೃತ್ಯುಂಜಯ (ಕ್ರೀಡೆ), ಶ್ರೀನಿವಾಸ್‌ ರೆಡ್ಡಿ (ಸಮಾಜ ಸೇವೆ).

ಮಾಧ್ಯಮ ಕ್ಷೇತ್ರ: ಪತ್ರಕರ್ತರಾದ ಎಂ.ನಾಗರಾಜು, ರವಿಶಂಕರ್‌ ಭಟ್‌, ವೆಂಕಟಸುಬ್ಬಯ್ಯ, ಸುದರ್ಶನ್‌, ಶಿವರಾಮ್‌, ಬಿ.ಪಿ.ಮಲ್ಲಪ್ಪ, ನಾರಾಯಣ ಸ್ವಾಮಿ, ಬಿ.ಎನ್‌.ರಮೇಶ್‌, ಜ್ಯೋತಿ ಇರ್ವತ್ತೂರು, ಎಂ.ಸಿ. ಶೋಭ, ಜಿ. ರಾಮಕೃಷ್ಣ ಇನ್ನಿತರರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.