![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಸರ್ಕಾರದಿಂದ 17ರಂದು ಕೆಂಪೇಗೌಡ ಜಯಂತಿ
Team Udayavani, Apr 12, 2017, 12:36 PM IST
![dev-hegde.jpg](https://www.udayavani.com/wp-content/uploads/2017/04/12/dev-hegde.jpg)
ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಇದೇ ಪ್ರಪ್ರಥಮ ಬಾರಿಗೆ ಏ.17ರಂದು ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಕೆಂಪೇಗೌಡ ಜಯಂತಿ ಅಂಗವಾಗಿ ಪಾಲಿಕೆಯ ಆವರಣದಲ್ಲಿನ ಡಾ.ರಾಜಕುಮಾರ್ ಗಾಜಿನ ಮನೆಯಲ್ಲಿ ಮಂಗಳವಾರ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಡೈನಾಮಿಕ್ ನಗರ ಎಂಬ ಹೆಗ್ಗಳಿಕೆ ಗಳಿಸಿದ್ದು, ಅದಕ್ಕೆ ಕೆಂಪೇಗೌಡರು ಹಾಕಿಕೊಟ್ಟ ಬುನಾದಿಯೇ ಕಾರಣ. ಹೀಗಾಗಿ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರದ ವತಿಯಿಂದ ಕೆಂಪೇಗೌಡ ದಿನಾಚರಣೆ ಆಚರಿಸಲಾಗುವುದು ಎಂದರು.
ಕೆಂಪೇಗೌಡರ ಜಯಂತಿ ಆಚರಣೆ ಕುರಿತು ಈಗಾಗಲೇ ಆದಿಚುಂಚನಗಿರಿ ಮಠಾಧೀಶರೊಂದಿಗೆ ಚರ್ಚಿಸಿದ್ದು, ಅವರು ಏ.17ರಂದು ಜಯಂತಿ ಆಚರಿಸುವಂತೆ ಸಲಹೆ ನೀಡಿದ್ದಾರೆ. ಮೊದಲಿಗೆ ರಾಜ್ಯಮಟ್ಟದಲ್ಲಿ ಜಯಂತಿ ಆಚರಿಸಿ ಆನಂತರದ ದಿನಗಳಲ್ಲಿ ಜಿಲ್ಲಾಮಟ್ಟದಲ್ಲೂ ಆಚರಣೆಗೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ನಗರದ ಬಡವರಿಗೆ ಕಡಿಮೆ ದರದಲ್ಲಿ ಉಪಹಾರ ಹಾಗೂ ಊಟ ಒದಗಿಸುವ ಉದ್ದೇಶದಿಂದ ಇಂದಿರಾ ಕ್ಯಾಂಟಿನ್ ಆರಂಭಿಸಲಾಗುತ್ತಿದ್ದು, ಪಾಲಿಕೆಯ 198 ವಾರ್ಡ್ಗಳಲ್ಲೂ ಕ್ಯಾಂಟಿನ್ ತೆರೆಯಲಾಗುವುದು. ಈ ನಿಟ್ಟಿನಲ್ಲಿ ಸ್ಥಳ ಆಯ್ಕೆ ಕಾರ್ಯ ಪ್ರಗತಿಯಲ್ಲಿದ್ದು, ಇನ್ನು 2 ತಿಂಗಳಲ್ಲಿ ಕ್ಯಾಂಟಿನ್ಗಳು ಕಾರ್ಯಾರಂಭ ಮಾಡುವ ವಿಶ್ವಾಸವಿದೆ ಎಂದರು.
ಬೆಂಗಳೂರು ಅಭಿವೃದ್ಧಿಗೆ ಅಗತ್ಯ ಹಣಕಾಸು ನೆರವು ನೀಡಲು ಸರ್ಕಾರ ಸಿದ್ಧವಿದ್ದರೂ, ಬಿಬಿಎಂಪಿಯಿಂದ ಅದನ್ನು ಬಳಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಹಿಂದೆ ಪಾಲಿಕೆ ಆಡಳಿತ ನಡೆಸಿದವರು, ಗಾರ್ಡನ್ ಸಿಟಿ ಖ್ಯಾತಿಯ ಬೆಂಗಳೂರಿಗೆ “ಗಾಬೇìಜ್ ಸಿಟಿ’ ಎಂಬ ಕುಖ್ಯಾತಿ ತಂದಿದ್ದರು. ಆದರೆ, ನಮ್ಮ ಸರ್ಕಾರ ಆಡಳಿತಕ್ಕೆ ಬಂದ ನಂತರ ತ್ಯಾಜ್ಯ ವಿಲೇವಾರಿಗೆ ಹೆಚ್ಚಿನ ಅನುದಾನ ನೀಡಿ ಸಮಸ್ಯೆ ಉಂಟಾಗದಂತೆ ಕ್ರಮಕೈಗೊಳ್ಳಲಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ನಗರದಲ್ಲಿ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಈ ಹಿಂದಿನಂತೆ ಕಸದ ತೊಟ್ಟಿಗಳನ್ನು ಇರಿಸುವಂತೆ ಸಲಹೆಗಳು ಕೇಳಿಬಂದಿದ್ದು, ಈ ನಿಟ್ಟಿನಲ್ಲಿ ಬಿಬಿಎಂಪಿ ಅಧಿಕಾರಿಗಳು ಮುಂದಾಗಬೇಕು. ಜತೆಗೆ ಬೆಂಗಳೂರನ್ನು ಸ್ವತ್ಛ ಹಾಗೂ ಸುಂದರವಾಗಿಸಿಕೊಳ್ಳುವುದು ಬಿಬಿಎಂಪಿ, ಸರ್ಕಾರ ಹಾಗೂ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ ಸಿದ್ದರಾಮಯ್ಯ ತಿಳಿಸಿದರು.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.