ಪೆರಿಷಬಲ್ ಉತ್ಪನ್ನಗಳ ರಫ್ತಿನಲ್ಲಿ ದೇಶದಲ್ಲೇ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮೊದಲ ಸ್ಥಾನ!
Team Udayavani, Oct 8, 2021, 9:37 PM IST
ದೇವನಹಳ್ಳಿ: ತಾಲೂಕಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತಿ ಹೆಚ್ಚು ಪೆರಿಷೆಬಲ್ ಪದಾರ್ಥಗಳ ಸರಕು ಸಾಗಣಿ ಮಾಡಿದ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಕೃಷಿ ಮತ್ತು ಸಂಸ್ಕರಿಸಿದ ಉತ್ಪನ್ನಗಳ ರಫ್ತು ಅಭಿವೃದ್ಧಿ ಮಂಡಳಿ (ಎಪಿಇಡಿಎ) ಅವರ ಮಾಹಿತಿ ಪ್ರಕಾರ 2020-21ರ ಹಣಕಾಸು ವರ್ಷದಲ್ಲಿ 41,130 ಮೆಟ್ರಿಕ್ ಟನ್ನಷ್ಟು ಕಡಿಮೆ ಬಾಳಿಕೆ ಅವಧಿಯ ಹಣ್ಣು, ತರಕಾರಿಯಂಥ (ಪೆರಿಷಬಲ್) ಉತ್ಪನ್ನಗಳನ್ನು ರಫ್ತು ಮಾಡಲಾಗಿದ್ದು, ಇದು ದೇಶದ ಪೆರಿಷಬಲ್ ಉತ್ಪನ್ನಗಳ ಪೈಕಿ ಶೇ.31ರಷ್ಟು ಕೆಂಪೇಗೌಡ ವಿಮಾನ ನಿಲ್ದಾಣದಿಂದಲೇ ಹೋಗಿದೆ.
ಕೋಳಿ, ಹೂಗಳ ರಫ್ತಿನಲ್ಲೂ ಕೆಂಪೇಗೌಡ ವಿಮಾನ ನಿಲ್ದಾಣವೇ ಮುಂಚೂಣಿಯಲ್ಲಿದ್ದು, 28,182 ಮೆಟ್ರಿಕ್ಟನ್ನಷ್ಟು ಕೋಳಿ ಹಾಗೂ 1,296 ಮೆಟ್ರಿಕ್ಟನ್ ಅಷ್ಟು ಹೂವುಗಳನ್ನು ರಫ್ತು ಮಾಡಲಾಗಿದೆ.
ಇದನ್ನೂ ಓದಿ:ಸಾರಿಗೆ ನೌಕರರಿಗೆ ವೇತನ ಪಡೆಯುವ ಚಿಂತೆ
24 ವಿಮಾನಯಾನ ಸಂಸ್ಥೆಗಳು 46 ವಿದೇಶಗಳಲ್ಲಿ ಪೆರಿಷಬಲ್ ಉತ್ಪನ್ನಗಳನ್ನು ರಫ್ತು ಮಾಡುತ್ತಿವೆ. ಪೆರಿಷಬಲ್ ಉತ್ಪನ್ನಗಳನ್ನು ಅತ್ಯಾಧುನಿಕ ತಂತ್ರಜ್ಞಾನದಿಂದ ಕೆಡದಂತೆ ಸಂಸ್ಕರಿಸಿ ವೇಗವಾಗಿ ರಫ್ತು ಮಾಡಲಾಗುತ್ತಿದೆ. ಇದರಿಂದ ರಫ್ತು ಬೇಡಿಕೆಯೂ ಸಹ ದಿನೇದಿನೆ ಹೆಚ್ಚುತ್ತಲೇ ಇದೆ ಎಂದು ಬಿಐಎಎಲ್ ಸ್ಟಾರ್ಟಜಿ ಆಂಡ್ ಡೆವಲಪ್ಮೆಂಟ್ ಮುಖ್ಯಾಧಿಕಾರಿ ಸಾತ್ಯಕಿ ರಘುನಾಥ್ ಹೇಳಿದ್ದಾರೆ.
ಪ್ರಧಾನಿ ಅವರ ಆಶಯದಂತೆ ರೈತರ ಉತ್ಪನ್ನಗಳಿಗೆ ಆದಾಯ ಕೊಡಿಸುವ ನಿಟ್ಟಿನಲ್ಲಿ ಉತ್ಪನ್ನಗಳ ರಫ್ತು ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಳ್ಳಲಾಗುತ್ತಿದೆ. ವಿಮಾನ ನಿಲ್ದಾಣ, ರಫ್ತು ಹಾಗೂ ಪಾಲುದಾರರ ಸಹಯೋಗದಲ್ಲಿ ಕೋಲ್ಡ್ ಸ್ಟೋರೇಜ್ನ ಇನ್ನಷ್ಟು ಮೇಲ್ದರ್ಜೆಗೇರಿಸಲು ಸಹ ಯೊಜಿಸಿದ್ದೇವೆ ಎಂದು ಎಪಿಇಡಿಎ ಅಧ್ಯಕ್ಷ ಡಾ.ಎಂ. ಅಂಗಮುತ್ತು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುತ್ತಿಗೆದಾರರ ಬೇಜವಾಬ್ದಾರಿ, ಕಾಮಗಾರಿ ವಿಳಂಬದಿಂದ ಮನೆಗಳಿಗೆ ನೀರು :ಎಸ್.ಟಿ.ಸೋಮಶೇಖರ್ ಕಿಡಿ
ಅಪರಾಧಿಗಳನ್ನು ಹಿಡಿಯಬೇಕಾದ ಪೊಲೀಸರು ಅಪರಾಧ ನಡೆಸಿದರೆ ಕ್ಷಮೆ ಇಲ್ಲ : ಗೃಹ ಸಚಿವ ಎಚ್ಚರಿಕೆ
ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ : ಸಚಿವ ಬಿ.ಸಿ.ಪಾಟೀಲ್
ಭಾರಿ ಮಳೆಗೆ ವಿದ್ಯುತ್ ವ್ಯತ್ಯಯ : ಖುದ್ದು ನಿರ್ವಹಣೆಗಿಳಿದ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ
ಭಾರಿ ಮಳೆ : ನೀರು ನುಗ್ಗಿರುವ ಮನೆಗಳಿಗೆ 25,000 ರೂ ಪರಿಹಾರ : ಸಿಎಂ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟ
ಪ್ರತಿಷ್ಠೆಗೆ ರಚನೆಯಾದ ತಾಲೂಕುಗಳು ಅನಾಥ; ತಹಶೀಲ್ದಾರ್ ನೇಮಕವಾಗಿಲ್ಲ ,ಆಡಳಿತ ಸೌಧವಿಲ್ಲ
ಚಳ್ಳಕೆರೆಯಲ್ಲಿ ಹನ್ಸ-ಎನ್ಜಿ ಯಶಸ್ವಿ ಪ್ರಯೋಗ; ಸಿಎಸ್ಐಆರ್, ಎನ್ಎಎಲ್ನಿಂದ ವಿಮಾನ ಸಿದ್ಧ
ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ
ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ