ಕೆಂಪೇಗೌಡ ಬಸ್ ನಿಲ್ದಾಣಅಭಿವೃದ್ಧಿಗೆ ನೀಲನಕ್ಷೆ: ಎಂಡಿ
Team Udayavani, Dec 23, 2018, 1:18 PM IST
ಬೆಂಗಳೂರು: ಕೆಂಪೇಗೌಡ ಬಸ್ ನಿಲ್ದಾಣವನ್ನು “ಪ್ರಯಾಣಿಕ ಸ್ನೇಹಿ’ಯಾಗಿ ಅಭಿವೃದ್ಧಿಪಡಿಸಲು ನೀಲನಕ್ಷೆ ತಯಾರಿಸುವುದರೊಂದಿಗೆ ಅದರ ಕಾರ್ಯಸಾಧ್ಯತೆ ಬಗ್ಗೆ ಅಧ್ಯಯನ ವರದಿ ತಯಾರಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಮೆಜೆಸ್ಟಿಕ್ನಲ್ಲಿರುವ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಶನಿವಾರ ದಿಢೀರ್ ಭೇಟಿ ನೀಡಿ ಸುಮಾರು ಎರಡು ಗಂಟೆಗಳ ಕಾಲ ಪರಿಶೀಲನೆ ನಡೆಸಿದ ಅವರು, ಚಿಕ್ಕ ಲಾಲ್ಬಾಗ್ ರಸ್ತೆಯಿಂದ ಟರ್ಮಿನಲ್ಗೆ ರಸ್ತೆ ಅಭಿವೃದ್ಧಿ, ಮೆಟ್ರೋ ನಿಲ್ದಾಣದಿಂದ ಕೆಎಸ್ಆರ್ಟಿಸಿ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪಾದಚಾರಿ ಮಾರ್ಗಕ್ಕೆ ಚಾವಣಿ, ಲಗೇಜು ಕೊಠಡಿಗಳಲ್ಲಿ ಸಿಸಿಟಿವಿ ವ್ಯವಸ್ಥೆ, ಅಗ್ನಿನಂದಕಗಳ ಅಳವಡಿಕೆ ಸೇರಿದಂತೆ ನಿಲ್ದಾಣದ ಸಮಗ್ರ ಅಭಿವೃದ್ಧಿಗೆ ಶೀಘ್ರ ನೀಲನಕ್ಷೆ ಸಿದ್ಧಪಡಿಸುವಂತೆ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.
ಬಿಎಂಆರ್ಸಿಎಲ್ನಿಂದ ನಿಗಮಕ್ಕೆ ಹಸ್ತಾಂತರಗೊಂಡ ಖಾಲಿ ಜಾಗದ ಸುರಕ್ಷತೆಗಾಗಿ ಹೆಚ್ಚಿನ ಭದ್ರತಾ ಸಿಬ್ದಂದಿ ನಿಯೋಜಿಸಬೇಕು. ಸರ್ಕಾರದ ಸಂಬಂಧಪಟ್ಟ ಇಲಾಖೆಯ ಸಮನ್ವಯದೊಂದಿಗೆ ಜನೌಷಧಿ ಕೇಂದ್ರಗಳನ್ನು ಬಸ್ ನಿಲ್ದಾಣದಲ್ಲಿ ಪ್ರಾರಂಭಿಸಬೇಕು. ನಿಲ್ದಾಣಗಳಲ್ಲಿ ಪ್ಲಾಸ್ಟಿಕ್
ನಿಷೇಧದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳಬೇಕು.
ಶಿಶು ಪೋಷಣಾ ಕೇಂದ್ರದಲ್ಲಿ ಶೌಚಾಲಯ, ತೊಟ್ಟಿಲು, ಸಣ್ಣದಾದ ಹೀಟರ್, ಕುಳಿತುಕೊಳ್ಳಲು ಸೂಕ್ತ ಆಸನ ವ್ಯವಸ್ಥೆ ಕಲ್ಪಿಸುವಂತೆ ಇದೇ ವೇಳೆ ಆದೇಶಿಸಿದರು.
ಚಾಲಕ/ ನಿರ್ವಾಹಕ ವಿಶ್ರಾಂತಿ ಕೊಠಡಿಗಳಲ್ಲಿ ಬೆಡ್ಗಳ ಸಂಖ್ಯೆ ಹೆಚ್ಚಿಸಬೇಕು. ಬಸ್ ನಿಲ್ದಾಣಗಳಲ್ಲಿ ವಾಣಿಜ್ಯ ಮಳಿಗೆಗಳು ಖಾಲಿ ಇರದಂತೆ ಕ್ರಮವಹಿಸಬೇಕು. ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಶೌಚಾಲಯಗಳ ಸಂಖ್ಯೆ ಹೆಚ್ಚಿಸಬೇಕು. ಅಂಗವಿಕಲ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತಷ್ಟು ವೀಲ್ ಚೇರ್ ಮತ್ತು ಇಳಿಜಾರು ಮಾರ್ಗ ಕಲ್ಪಿಸಬೇಕು. ಜಿಪಿಎಸ್ ಆಧಾರಿತ ಸೂಚನಾ ಫಲಕಗಳನ್ನು ಅಳವಡಿಸಲು ಯೋಜನೆ ರೂಪಿಸುವಂತೆ ನಿರ್ದೇಶನ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ