ನಗರದಲ್ಲಿ ಸಂಭ್ರಮ-ಸಡಗರದ ಕೆಂಪೇಗೌಡರ ದಿನಾಚರಣೆ


Team Udayavani, Apr 12, 2017, 12:35 PM IST

mayor-padma.jpg

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ನಗರದಲ್ಲಿ ಮಂಗಳವಾರ ಸಂಭ್ರಮ-ಸಡಗರದಿಂದ ಆಚರಿಸಲಾಯಿತು. ನಗರದ ನಾಲ್ಕು ಕಡೆಗಳಲ್ಲಿರುವ ಕೆಂಪೇಗೌಡರ ಗೋಪುರಗಳಿಂದ ಕೆಂಪೇಗೌಡರ ಜ್ಯೋತಿಯನ್ನು ಬಿಬಿಎಂಪಿ ಕೇಂದ್ರ ಕಚೇರಿಗೆ ತರಲಾಯಿತು. 

ಮಂಗಳವಾರ ಬೆಳಗ್ಗೆ 8 ಗಂಟೆಗೆ ಮೇಯರ್‌ ಜಿ.ಪದ್ಮಾವತಿ ಅವರು ಕೇಂದ್ರ ಕಚೇರಿಯ ಮುಂಭಾಗದಲ್ಲಿರುವ ಕೆಂಪೇಗೌಡ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕೆಂಪೇಗೌಡರ ಜಯಂತಿಗೆ ಚಾಲನೆ ನೀಡಿದರು. ಬಳಿಕ ಲಾಲ್‌ಬಾಗ್‌ನಲ್ಲಿರುವ ಗಡಿಗೋಪುರಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಆ ನಂತರ ಕೋರಮಂಗಲದಲ್ಲಿರುವ ಕೆಂಪೇಗೌಡರ ಸೊಸೆ ಲಕ್ಷ್ಮೀದೇವಿ ಅವರ ಸಮಾಧಿ ಸ್ಥಳಕ್ಕೆ ತೆರಳಿ ಪುಷ್ಟನಮನ ಸಲ್ಲಿಸಿದರು. 

ನಗರದ ನಾಲ್ಕು ದಿಕ್ಕುಗಳಲ್ಲಿರುವ ಕೇಂಪೆಗೌಡರ ಗೋಪುರನ್ನು ತಳಿರು, ತೋರಣ ಹಾಗೂ ಹೂವುಗಳಿಂದ ಅಲಂಕರಿಸಲಾಗಿತ್ತು. ಬೆಳಗ್ಗೆ ಲಾಲ್‌ಬಾಗ್‌, ಹಲಸೂರು, ಕೆಂಪಾಂಬುಧಿ ಕೆರೆ, ರಮಣಶ್ರೀ ಉದ್ಯಾನ (ಮೇಖೀÅ ವೃತ್ತ) ಗೋಪುರಗಳಿಂದ ಹೊರಟ ಕೆಂಪೇಗೌಡರ ಜ್ಯೋತಿಯನ್ನು 11.30ರ ಸುಮಾರಿಗೆ ಬಿಬಿಎಂಪಿ ಕೇಂದ್ರ ಕಚೇರಿಗೆ ಮೆರವಣಿಗೆಯ ಮೂಲಕ ತರಲಾಯಿತು. 

ನಾಡಪ್ರಭು ಕೆಂಪೇಗೌಡರ ಐಕ್ಯ ಸ್ಥಳವಾದ ಮಾಗಡಿ ತಾಲೂಕಿನ ಕೆಂಪಾಪುರ ಗ್ರಾಮದಿಂದಲೂ ಕೆಂಪೇಗೌಡರ ಜ್ಯೋತಿಯನ್ನು ವಿವಿಧ ಸಾಂಸ್ಕೃತಿಕ ಕಲಾ ತಂಡಗಳ ಸಮ್ಮುಖದಲ್ಲಿ ತೆರೆದ ವಾಹನದಲ್ಲಿ ಕೇಂದ್ರ ಕಚೇರಿಗೆ ತರಲಾಯಿತು.  ಎಲ್ಲ ಭಾಗಗಳಿಂದ ಬಂದ ಕೆಂಪೇಗೌಡರ ಜ್ಯೋತಿಗಳನ್ನು ಗೌರವದಿಂದ ಬರಮಾಡಿಕೊಂಡ ಮೇಯರ್‌ ಪದ್ಮಾವತಿ ಅವರು ನಂತರ ಅವುಗಳನ್ನು ಸ್ವೀಕರಿಸಿದರು.

ಅದಾದ ಬಳಿಕ ಪಾಲಿಕೆಯ ಆವರಣದಲ್ಲಿದ್ದ ಜ್ಯೋತಿಯನ್ನು ಬೆಳಗಿದ ಅವರು ಕೆಂಪೇಗೌಡ ಭಾವಚಿತ್ರಕ್ಕೆ ಪುಷ್ಟನಮನ ಸಲ್ಲಿಸಿದರು.  ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಬೆಂಗಳೂರು ಇತಿಹಾಸವನ್ನು ತಿಳಿಸುವ ಛಾಯಾಚಿತ್ರ ಪ್ರದರ್ಶನ ಆಯೋಜಿಸಲಾಗಿತ್ತು. ವೀಕ್ಷಕರಿಗೆ ಬೆಂಗಳೂರಿನ ಸಂಪೂರ್ಣ ಇತಿಹಾಸ ಒಮ್ಮೆ ಕಣ್ಣಮುಂದೆ ಹಾದುಹೋದ ಅನುಭವ ನೀಡಿತು. 

1537 ರಿಂದ 2017ರವರೆಗಿನ ಬೆಂಗಳೂರಿಗೆ ಸಂಬಂಧಿಸಿದ ಪ್ರಮುಖ ಘಟನೆಗಳ ಛಾಯಾಚಿತ್ರಗಳು ಪ್ರದರ್ಶನದಲ್ಲಿದ್ದವು. ಬೆಂಗಳೂರು ನಿರ್ಮಾಪಕರಾದ ಕೆಂಪೇಗೌಡರ ಹುಟ್ಟು, ಅವರು ನಡೆಸಿದ ಆಡಳಿತ ವೈಖರಿ, ಬೆಂಗಳೂರು ನಗರ ಕಟ್ಟಿದ ಬಗೆ ಮತ್ತು ಅವರ ಆಡಳಿತದ ಪ್ರಮುಖ ಮೈಲಿಗಲ್ಲುಗಳನ್ನು ನೆನಪಿಸುವ ಮಾಹಿತಿಯುಳ್ಳ ಛಾಯಾಚಿತ್ರಗಳು ಆಕರ್ಷಣೀಯವಾಗಿದ್ದವು. 

ಪ್ರದರ್ಶನದಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುಟ್ಟ ಕಟೌಟ್‌ ಕೂಡ ಪ್ರಮುಖ ಆಕರ್ಷಣೀಯವಾಗಿತ್ತು. ನಗರದ ಅಭಿವೃದ್ಧಿಗಾಗಿ ಅವರು ಕಳೆದ ನಾಲ್ಕು ವರ್ಷಗಳಲ್ಲಿ ಕೈಗೊಂಡ ಕಾರ್ಯಕ್ರಮಗಳು, ಮೇಲ್ಸೇತುವೆಗಳು, ಕೆಳ ಸೇತುವೆಗಳು, ಮೆಟ್ರೋ ಸೇರಿದಂತೆ ಮತ್ತಿತರ ಮಾಹಿತಿ ಗಳನ್ನು ಒಳಗೊಂಡ ಛಾಯಾಚಿತ್ರಗಳು ಪ್ರದರ್ಶನದಲ್ಲಿದ್ದವು. ಕೆಂಪೇಗೌಡರ ಜಯಂತಿ ಯೊಂದಿಗೆ ವಿಶ್ವವಿಖ್ಯಾತ ಕರಗ ಮಹೋತ್ಸವ ಹಿನ್ನೆಲೆಯಲ್ಲಿ ಬಿಬಿಎಂಪಿ ಸುತ್ತಮುತ್ತಲಿನ ಭಾಗಗಳಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.