ಕೆಂಪೇಗೌಡ ಜಯಂತಿ ಮುಂದೂಡಿಕೆ ಸಂಭವ
Team Udayavani, Jul 12, 2018, 11:31 AM IST
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಮಯಾವಕಾಶ ಲಭ್ಯವಾಗದ ಹಿನ್ನೆಲೆಯಲ್ಲಿ ಬಿಬಿ
ಎಂಪಿ ಯಿಂದ ಜು.18 ರಂದು ಆಚರಿಸಲು ಉದ್ದೇಶಿಸಿದ್ದ ಕೆಂಪೇಗೌಡ ಜಯಂತಿ ಮುಂದೂಡುವ ಚರ್ಚೆ ನಡೆಯುತ್ತಿದೆ.
ಪ್ರತಿ ವರ್ಷ ಬೆಂಗಳೂರು ಕರಗ ಮಹೋತ್ಸವದ ವೇಳೆ ನಾಡಪ್ರಭು ಕೆಂಪೇಗೌಡ ದಿನಾಚರಣೆಯನ್ನು ಪಾಲಿಕೆಯಿಂದ
ಆಚರಿಸಲಾಗುತ್ತದೆ. ಆದರೆ, ನೀತಿ ಸಂಹಿತೆ ಜಾರಿಯಿದ್ದ ಕಾರಣ ಜಯಂತಿ ಮುಂದೂಡಲಾಗಿತ್ತು. ನಂತರದಲ್ಲಿ ಜು.
18ರಂದು ದಿನ ನಿಗದಿಗೊಳಿಸಿ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಮಯ ಕೋರಲಾಗಿತ್ತು. ಅದಕ್ಕೆ
ಮುಖ್ಯಮಂತ್ರಿಗಳು ಅನುಮತಿ ಸಹ ನೀಡಿದ್ದರಿಂದ ಕಾರ್ಯಕ್ರಮ ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು.
ಇದೀಗ ಮುಖ್ಯಮಂತ್ರಿಗಳು ಜು. 18ರಂದು ದೆಹಲಿಯಲ್ಲಿ ಸಂಸದರ ಸಭೆಯಲ್ಲಿ ಭಾಗವಹಿಸಬೇಕಿರುವ ಕಾರಣ
ಕೆಂಪೇಗೌಡ ದಿನಾಚರಣೆಗೆ ಬರಲಾಗದು ಎಂದು ಬಿಬಿಎಂಪಿಗೆ ಮುಖ್ಯಮಂತ್ರಿಗಳ ಕಚೇರಿಯಿಂದ ಸೂಚನೆ ಬಂದಿದೆ.
ಹೀಗಾಗಿ ಚರ್ಚೆ ನಡೆಯುತ್ತಿದೆ.
ಕೆಂಪೇಗೌಡ ದಿನಾಚರಣೆಯಂದು ಸಂಜೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ಖುದ್ದು ಮುಖ್ಯಮಂತ್ರಿಗಳು ಹಾಜರಿದ್ದು, ಪ್ರಶಸ್ತಿ ಪ್ರದಾನ ಮಾಡುವುದು ಪ್ರತೀತಿಯಾಗಿದೆ. ಈ ಬಾರಿಯೂ ಅದನ್ನು ಮುಂದುವರಿಸುವ ಸಲುವಾಗಿ ಮುಖ್ಯಮಂತ್ರಿಗಳು ನೀಡುವ ದಿನದಂದು ಕಾರ್ಯಕ್ರಮ ಆಯೋಜನೆ ಕುರಿತು ನಿರ್ಧರಿಸಲಾಗುತ್ತದೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ