9, 10ಕ್ಕೆ ಕೆಂಗಲ್ ಕಪ್ಟೆನಿಸ್ಬಾಲ್ ಕ್ರಿಕೆಟ್
Team Udayavani, Feb 7, 2019, 4:24 AM IST
ಬೆಂಗಳೂರು: ಕೆಂಗಲ್ ಹನುಮಂತಯ್ಯ ಸ್ಮಾರಕ ಟ್ರಸ್ಟ್ನಿಂದ ಫೆ.9 ಮತ್ತು 10ರಂದು ಕೆಂಗಲ್ ಕಪ್ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ.
ಕೆಂಗಲ್ ಹನುಮಂತಯ್ಯ ಸ್ಮಾರಕ ಟ್ರಸ್ಟ್ನ ಸಂಸ್ಥಾಪಕ ಅಧ್ಯಕ್ಷ ಕೆಂಗಲ್ ಶ್ರೀಪಾದ ರೇಣು ಬುಧವಾರ ಕೆಂಗಲ್ ಕಪ್ ಟೆನಿಸ್ ಪಂದ್ಯಾವಳಿಯ ಟೀ ಶರ್ಟ್ ಬಿಡುಗಡೆಗೊಳಿಸಿ ಮಾತನಾಡಿ, ಮಲ್ಲೇಶ್ವರದ ಆಟದ ಮೈದಾನದಲ್ಲಿ ನಡೆಯುವ ಕ್ರಿಕೆಟ್ ಪಂದ್ಯಾವಳಿಗೆ ಶನಿವಾರ ಬೆಳಗ್ಗೆ 8.30ಕ್ಕೆ ಶಾಸಕ ಅಶ್ವತ್ಥನಾರಾಯಣ ಚಾಲನೆ ನೀಡಲಿದ್ದಾರೆ ಎಂದರು. ಪಂದ್ಯಾವಳಿಯಲ್ಲಿ ವಿಜೇತವಾಗುವ ತಂಡಕ್ಕೆ ಒಂದು ಲಕ್ಷ ರೂ. ಹಾಗೂ ರನ್ನರ್ ಅಪ್ ತಂಡಕ್ಕೆ 50 ಸಾವಿರ ರೂ. ಬಹುಮಾನ ನೀಡಲಾಗುವುದು. ಮೂರನೇ ಮತ್ತು ನಾಲ್ಕನೇ ಸ್ಥಾನ ತಲುಪುವ ತಂಡಗಳಿಗೆ ತಲಾ 25 ಸಾವಿರ ರೂ. ಬಹುಮಾನ ನೀಡಿ ಪ್ರೋತ್ಸಾಹಿಸಲಾಗುವುದು ಎಂದು ತಿಳಿಸಿದರು.
ಈ ಪಂದ್ಯಾವಳಿಯಲ್ಲಿ ಭಾಗವಹಿಸಲು ಒಂದು ತಂಡಕ್ಕೆ 5 ಸಾವಿರ ರೂ. ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ. 8 ಓವರ್ಗಳ ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಲು 20 ತಂಡಗಳಿಗೆ ಅವಕಾಶ ನೀಡಲಾಗಿದೆ ಎಂದರು.
ಫೆ.10ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮಲ್ಲೇಶ್ವರದ ನಿವಾಸಿಗಳಾಗಿರುವ ವಿವಿಧ ಕ್ರೀಡೆಗಳಲ್ಲಿ ಸಾಧನೆಗೈದ ಕ್ರೀಡಾಪಟುಗಳನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ