ತವರು ಜನರಿಗಾಗಿ ಕೇರಳಿಗರ ಓಣಂ ತ್ಯಾಗ


Team Udayavani, Aug 26, 2018, 12:26 PM IST

tavatu.jpg

ಬೆಂಗಳೂರು: ದೇವರನಾಡು ಕೇರಳದ ಐತಿಹಾಸಿಕ ಮತ್ತು ಪುರಾಣ ಪ್ರಸಿದ್ಧ ಓಣಂ ಹಬ್ಬದ ಸಂಭ್ರಮ ಈ ಬಾರಿ ರಾಜಧಾನಿ ಬೆಂಗಳೂರಿನಲ್ಲಿ ಕಳೆಗುಂದಿದೆ. ಭೀಕರ ಪ್ರವಾಹದ ಹಿನ್ನೆಲೆಯಲ್ಲಿ ತಮ್ಮ ತವರು ರಾಜ್ಯದ ಜನ ಸಂಕಷ್ಟ ಎದುರಿಸುತ್ತಿರುವಾಗ ತಾವು ಹಬ್ಬದ ಸಂಭ್ರಮ ಆಚರಿಸುವುದು ಮಾನವೀಯತೆ ಅಲ್ಲ ಎಂಬ ಕಾರಣಕ್ಕೆ ಬೆಂಗಳೂರಿನಲ್ಲಿ ವಾಸ ಮಾಡುತ್ತಿರುವ ಮಲೆಯಾಳಿ ಕುಟುಂಬಗಳು ಈ ಬಾರಿ ಓಣಂ ಹಬ್ಬ ಆಚರಿಸದಿರಲು ನಿರ್ಧರಿಸಿದ್ದಾರೆ.

ತವರು ರಾಜ್ಯ ಕೇರಳ ಮತ್ತು ತಾವು ವಾಸ ಮಾಡುತ್ತಿರುವ ಕರ್ನಾಟಕದ ಕೊಡಗು ಜಿಲ್ಲೆಯಲ್ಲಿ ಪ್ರವಾಹ ಸಂತ್ರಸ್ತರಿಗೆ ನೆರವು ನೀಡಿ, ಆವರ ಸಂಕಷ್ಟದಲ್ಲಿ ಭಾಗಿಯಾಗುವ ಮೂಲಕ ಹಬ್ಬವನ್ನು ಸಾಂಕೇತಿಕವಾಗಿ ಆಚರಿಸಲು ನಗರದ ವಿವಿಧ ಮಲೆಯಾಳಿ ಸಂಘ-ಸಂಸ್ಥೆಗಳು ತೀರ್ಮಾನಿಸಿವೆ.

ಕೇರಳದಲ್ಲಿ ಆಗಸ್ಟ್‌ ಕೊನೆ ವಾರದಲ್ಲಿ ಓಣಂ ಹಬ್ಬ ಆಚರಿಸಲಾಗುತ್ತದೆ. ಅಲ್ಲಿ ಹಬ್ಬ ಮುಗಿದ ಮೇಲೆ ಬೆಂಗಳೂರಿನ ಮಲೆಯಾಳಿ ಸಮುದಾಯವರು ಇಲ್ಲಿ ಹಬ್ಬ ಆಚರಿಸುತ್ತಾರೆ. ಅದರಂತೆ, ಈ ವರ್ಷ ಸೆ. 9 ಮತ್ತು 10ರಂದು ಓಣಂ ಹಬ್ಬ ಆಚರಣೆಗೆ ನಿರ್ಧರಿಸಲಾಗಿತ್ತು. ಅದಕ್ಕಾಗಿ ಕಳೆದ ಎರಡು ತಿಂಗಳಿಂದ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ, ಅವುಗಳೆಲ್ಲಾ ಈಗ ಸ್ಥಗಿತಗೊಂಡಿವೆ.

ನಾಲ್ಕು ದಶಕಗಳ ಇತಿಹಾಸ ಹೊಂದಿರುವ “ಕೇರಳ ಸಮಾಜಂ’ ಸಂಘ, ಸುವರ್ಣ ಕರ್ನಾಟಕ ಕೇರಳ ಸಮಾಜಂ ಸೇರಿದಂತೆ ಬೆಂಗಳೂರಿನಲ್ಲಿ 80ಕ್ಕೂ ಹೆಚ್ಚು ಮಲೆಯಾಳಿ ಸಮುದಾಯ ಸಾಂಸ್ಕೃತಿಕ, ಸಾಮಾಜಿಕ ಸಂಘಟನೆಗಳಿವೆ. ಒಂದೊಂದು ಸಂಘದಲ್ಲಿ 100ರಿಂದ ಸಾವಿರ ಕುಟುಂಬದವರೆಗೆ ಸದಸ್ಯರು ಇದ್ದಾರೆ.

ಪ್ರತಿ ವರ್ಷ ಎಲ್ಲ ಸಂಘಟನೆಗಳು ಓಣಂ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸುತ್ತವೆ. ಒಂದೊಂದು ಸಂಘದಲ್ಲಿ 10 ಲಕ್ಷದಿಂದ 50 ಲಕ್ಷ ರೂ.ವರೆಗೆ ಹಣ ಖರ್ಚಾಗುತ್ತದೆ. ಆದರೆ, ಈ ಬಾರಿ ಹಬ್ಬದ ಸಂಭ್ರಮ ಸ್ಥಗಿತಗೊಳಿಸಿ, ಹಬ್ಬಕ್ಕೆ ಖರ್ಚಾಗುತ್ತಿದ್ದ ಎಲ್ಲ ಹಣವನ್ನು ಕೇರಳ ರಾಜ್ಯದ ನೆರೆ ಸಂತ್ರಸ್ತರ ಪುನರ್ವಸತಿ ಮತ್ತು ಪರಿಹಾರಕ್ಕೆ ಕಳಿಸಿಕೊಡಲಾಗುತ್ತಿದೆ. 

ಸಂತ್ರಸ್ತರಿಗೆ ಓಣಂ ಅರ್ಪಣೆ: ನಮ್ಮ ತವರು ರಾಜ್ಯದಲ್ಲಿ ನೆರೆ ಉಂಟಾಗಿ ನಮ್ಮವನ್ನು ಕಷ್ಟದಲ್ಲಿರುವಾಗ ನಾವು ಇಲ್ಲಿ ಸಂಭ್ರಮಿಸುವುದು ಸರಿಯಲ್ಲ. ಹಾಗಾಗಿ, ಈ ಬಾರಿ ಓಣಂ ಆಚರಿಸದಿರಲು ತೀರ್ಮಾನಿಸಿದ್ದೇವೆ. ಹಬ್ಬಕ್ಕೆ ಕೂಡಿಟ್ಟ ಹಣವನ್ನು ಕೇರಳ ಮುಖ್ಯಮಂತ್ರಿ ಪರಿಹಾರ ನಿಧಿಗೆ ಕಳಿಸಿಕೊಡಲಾಗಿದೆ.

ಜತೆಗೆ ಎರಡು ಟ್ರಕ್‌ ಪರಿಹಾರ ಸಾಮಾಗ್ರಿಗಳನ್ನು ಕೇರಳಕ್ಕೆ ಮತ್ತು ಒಂದು ಟ್ರಕ್‌ ಪರಿಹಾರ ಸಾಮಾಗ್ರಿ ಕೊಡಗು ಜಿಲ್ಲೆಗೆ ಕಳಿಸಿಕೊಡಲಾಗಿದೆ. ಈ ನೆರವು ಹೀಗೇ ಮುಂದುವರಿಯಲಿದೆ ಎಂದು ಮಲೆಯಾಳೀಸ್‌ ಅಸೋಸಿಯೇಷನ್‌ ಆಫ್ ಎಚ್‌ಎಎಲ್‌ (ಮಹಲ್‌) ಸಾರ್ವಜನಿಕ ಸಂಪರ್ಕಾಧಿಕಾರಿ ಅಖೀಲ್‌ ಟಿ. ರಮಣ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

ಕೇರಳದಲ್ಲಿ ಪ್ರವಾಹ ಉಂಟಾಗಿ ನಮ್ಮವರು ಕಷ್ಟದಲ್ಲಿರುವ ಕಾರಣಕ್ಕೆ ಅವರ ನೋವಿಗೆ ಸ್ಪಂದಿಸಲು ಬೆಂಗಳೂರಿನ ಬಹುತೇಕ ಮಲೆಯಾಳಿ ಸಂಘಟನೆಗಳು ಈ ಬಾರಿ ಓಣಂ ಹಬ್ಬ ಆಚರಿಸದಿರಲು ತೀರ್ಮಾನಿಸಿದ್ದಾರೆ. ಅಲ್ಲದೇ ಆ ಹಣವನ್ನು ಮುಖ್ಯಮಂತ್ರಿ ಪರಿಹಾರ ನಿಧಿ ಮೂಲಕ ನೆರೆ ಸಂತ್ರಸ್ತರಿಗೆ ನೀಡಲು ತೀರ್ಮಾನಿಸಲಾಗಿದೆ
-ಎನ್‌. ಸತೀಶ್‌, ನನ್ಮಾ ಮಲೆಯಾಳಿ ಕಲ್ಚರರ್‌ ಅಸೋಸಿಯೇಷನ್‌

ಟಾಪ್ ನ್ಯೂಸ್

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.