ಖಾತಾ ಸಮಸ್ಯೆ ಇತ್ಯರ್ಥಕ್ಕೆ ಖಾತಾ ಅಭಿಯಾನ


Team Udayavani, Feb 25, 2023, 1:12 PM IST

TDY-6

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರಿಗೆ ಪಾವತಿ ಸೇರಿ ಇನ್ನಿತರ ಕಾರ್ಯಕ್ಕಾಗಿ ಅಗತ್ಯವಿರುವ ಆಸ್ತಿಗಳ ಖಾತೆ ಪಡೆಯುವುದಕ್ಕೆ ಸಾರ್ವಜನಿಕರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು, ಫೆ.27ರಿಂದ ಮಾ. 31ರವರೆಗೆ ಎಲ್ಲ 8 ವಲಯ ವ್ಯಾಪ್ತಿಯಲ್ಲಿ ಖಾತಾ ಆಂದೋಲನ ನಡೆಸಲಾಗುತ್ತಿದೆ.

ಈ ಕುರಿತು ಮಾಹಿತಿ ನೀಡಿದ ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಡಾ. ಆರ್‌.ಎಲ್‌.ದೀಪಕ್‌, ಆಸ್ತಿಯ ಮಾಲೀಕತ್ವ ದೃಢಪಡಿಸಲು ಪ್ರಮುಖವಾಗಿ ಖಾತೆ ಪ್ರಮಾಣಪತ್ರದ ಅವಶ್ಯಕತೆಯಿದೆ. ಅದರಲ್ಲೂ ಎ ಮತ್ತು ಬಿ ಖಾತಾಗೆ ಸಂಬಂಧಿಸಿದಂತೆ ಇರುವ ಗೊಂದಲ ನಿವಾರಿಸಲು ಖಾತಾ ನೋಂದಣಿ ಮಾಡಿಕೊಳ್ಳಬೇಕು. ಆದರೆ, ಖಾತೆ ಪಡೆಯುವ ಸಲುವಾಗಿ ಬಿಬಿಎಂಪಿಯ ಕಂದಾಯ ವಿಭಾಗದ ಕಚೇರಿಗಳಿಗೆ ಜನರು ಅಲೆಯಬೇಕಾಗುತ್ತದೆ. ಈ ತಾಪತ್ರಾಯವನ್ನು ತಪ್ಪಿಸಲು ಸಲುವಾಗಿ ಒಂದು ತಿಂಗಳ ಕಾಲ ಖಾತಾ ಆಂದೋಲನ ನಡೆಸಲಾಗುತ್ತಿದೆ. ಹೊಸ ಬಡಾವಣೆಯಲ್ಲಿ ನಿವೇಶನ ಖರೀದಿಸಿರುವವರು, ಅಪಾರ್ಟ್ ಮೆಂಟ್‌ಗಳಲ್ಲಿ ಫ್ಲಾಟ್‌ ಖರೀದಿಸಿರುವವರು, ಖಾತೆಯ ಹೆಸರು ಬದಲಿಸಿಕೊಳ್ಳುವವರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೇಳಿದರು. ‌

ಬಿಬಿಎಂಪಿಯ ಎಲ್ಲ 64 ಉಪವಿಭಾಗಗಳ ಸಹಾಯಕ ಕಂದಾಯ ಅಧಿಕಾರಿಗಳ ಬಳಿ ಖಾತೆಗೆ ಸಂಬಂಧಿಸಿದ ಕಾರ್ಯಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೀಗೆ ಖಾತೆಗೆ ಅರ್ಜಿ ಸಲ್ಲಿಸಿದ ದಿನದಂತೆ ಆ ಕಾರ್ಯ ಮಾಡಲಾಗು ತ್ತದೆಯೇ, ದಾಖಲೆಗಳು ಸಮರ್ಪಕವಾಗಿವೆಯೇ ಎಂಬ ಬಗ್ಗೆ ಅರ್ಜಿದಾರರಿಗೆ ತಿಳಿಸಬೇಕು ಎಂದು ಸಹಾಯಕ ಕಂದಾಯ ಅಧಿಕಾರಿಗಳಿಗೆ ತಿಳಿಸಲಾಗಿದೆ. ಅಲ್ಲದೆ, ಕಂದಾಯ ಅಧಿಕಾರಿಗಳು ಅನುಮೋದನೆ ನೀಡಬಹುದಾದ ಅರ್ಜಿಗಳನ್ನು 7 ದಿನಗಳಲ್ಲಿ ವಿಲೇವಾರಿ ಮಾಡಬೇಕು. ವಲಯ ಉಪ ಆಯುಕ್ತರು 10 ದಿನ ಹಾಗೂ ವಲಯ ಜಂಟಿ ಆಯುಕ್ತರು 15 ದಿನಗಳೊಳಗಾಗಿ ಅರ್ಜಿ ವಿಲೇವಾರಿ ಮಾಡುವಂತೆ ದಿನ ನಿಗದಿ ಮಾಡಲಾಗಿದೆ. ಹೀಗಾಗಿ ಯಾವುದೇ ಅರ್ಜಿಯಾದರೂ ಎ ಮತ್ತು ಬಿ ಖಾತೆ ನೀಡುವ ಸಂಬಂಧ 7ರಿಂದ 15 ದಿನಗಳೊಳಗಾಗಿ ವಿಲೇವಾರಿ ಮಾಡಲಾಗುವುದು ಎಂದು ತಿಳಿಸಿದರು.

ಅರ್ಜಿ ಸಲ್ಲಿಸಿ ಎ ಖಾತೆ ಪಡೆಯುವವರಿಗೆ ನೋಂದಣಿ ಶುಲ್ಕದ ಶೇ. 2ರಷ್ಟು ಅಥವಾ ಕನಿಷ್ಠ 500 ರೂ.ಗಳನ್ನು ಶುಲ್ಕದ ರೂಪದಲ್ಲಿ ವಸೂಲಿ ಮಾಡಲಾಗುವುದು. ಬಿ ಖಾತಾ ಪಡೆಯುವವರಿಗೆ ಯಾವುದೇ ಶುಲ್ಕ ವಿಧಿಸುವುದಿಲ್ಲ. ಒಟ್ಟಾರೆ ಒಂದು ತಿಂಗಳ ಆಂದೋಲನದಲ್ಲಿ ಬಿಬಿಎಂಪಿಗೆ 100 ಕೋಟಿ ರೂ. ಆದಾಯ ಬರುವ ನಿರೀಕ್ಷೆ ಹೊಂದಲಾಗಿದೆ. ಖಾತಾ ಆಂದೋಲದ ಮೇಲೆ ನಿಗಾವಹಿಸಲು ಹಾಗೂ ಅಧಿಕಾರಿಗಳ ನಡುವೆ ಸಮನ್ವಯ ಸಾಧಿಸಲು ಆಯಾ ವಲಯಗಳ ಉಪ ಆಯುಕ್ತರನ್ನು ನೋಡಲ್‌ ಅಧಿಕಾರಿಯನ್ನಾಗಿ ನೇಮಿಸಲಾಗುತ್ತಿದೆ ಎಂದು ಹೇಳಿದರು.

ನಕಲಿ ಎ ಖಾತೆಗಳ ಪರಿಶೀಲನೆ : ಬಿಬಿಎಂಪಿ ವ್ಯಾಪ್ತಿಯಲ್ಲಿ ಬಿ ಖಾತಾಗಳಿಗೆ ಅಕ್ರಮವಾಗಿ ಎ ಖಾತಾ ನೀಡಿರುವ ಕುರಿ ತಂತೆ ದೂರುಗಳು ಬಂದಿವೆ. ಆ ಹಿನ್ನೆಲೆಯಲ್ಲಿ ಅಕ್ರಮ ಎ ಖಾತಾಗಳ ಪತ್ತೆಗೆ ಮುಖ್ಯ ಆಯುಕ್ತರು ಸಮಿತಿ ರಚಿಸಿದ್ದಾರೆ. ಈಗಾಗಲೇ ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಯಾದ ಗ್ರಾಮ ಪಂಚಾಯಿತಿ, ನಗರಸಭೆ, ಪಟ್ಟಣ ಪಂಚಾಯಿತಿಗಳಿಂದ ನೀಡಲಾಗಿದ್ದ ಖಾತೆಗಳು, ನೋಂದಣಿಯಾಗಿದ್ದ ಸ್ವತ್ತುಗಳ ಡಿಜಿಟಲ್‌ ಮಾಹಿತಿಯನ್ನು ಪಡೆಯಲಾಗಿದೆ. ಅದನ್ನು ಅಧಿಕಾರಿಗಳ ಮೂಲಕ ಸ್ಥಳಕ್ಕೆ ಭೇಟಿ ನೀಡಿ ಅಥವಾ ದಾಖಲೆಗಳನ್ನು ಪಡೆದು ಪರಿಶೀಲನೆ ನಡೆಸಬೇಕಿದೆ ಎಂದು ಡಾ. ದೀಪಕ್‌ ಮಾಹಿತಿ ನೀಡಿದರು.

ಖಾತೆ ಮಾಡಿಕೊಳ್ಳಲು ಅಗತ್ಯವಿರುವ ದಾಖಲೆಗಳು :

ಕಂದಾಯ ಪ್ರದೇಶ: ಸತ್ತಿನ ಹಕ್ಕು ನಿರೂಪಿಸುವ ದಾಖಲೆ, ಭೂಪರಿವರ್ತನೆ ಆದೇಶ, ಸರ್ವೇ ನಕ್ಷೆ, ಸ್ವತ್ತಿನ ವಿಸ್ತೀರ್ಣ ಮತ್ತು ಪ್ರದೇಶವನ್ನು ಗುರುತಿಸುವ ಸ್ವಯಂ ದೃಢೀಕರಣ ನಕ್ಷೆ, ಸ್ವತ್ತಿನ ಋಣಭಾರವಿಲ್ಲದ ಪ್ರಮಾಣಪತ್ರ

ಗ್ರಾಮಠಾಣ: ಸ್ವತ್ತಿನ ಹಕ್ಕು ನಿರೂಪಿಸುವ ದಾಖಲೆ, ಹಿಂದಿನ ಸ್ಥಳೀಯ ಸಂಸ್ಥೆ ವಿತರಿಸಿರುವ ಅರ್ಜಿ ನಮೂನೆ 9, ತಹಶೀಲ್ದಾರ್‌ ಅಥವಾ ಭೂಮಾಪಕರು ನೀಡಿರುವ ಸರ್ವೇ ನಕ್ಷೆ, ಸ್ವತ್ತಿನ ವಿಸ್ತೀರ್ಣ ಮತ್ತು ಪ್ರದೇಶವನ್ನು ಗುರುತಿಸುವ ಸ್ವಯಂ ದೃಢೀಕರಣ ನಕ್ಷೆ, ಸ್ವತ್ತಿನ ಋಣಭಾರವಿಲ್ಲದ ಪ್ರಮಾಣಪತ್ರ

ಬಿಡಿಎ, ಕೆಎಚ್‌ಬಿ, ಇತರ ಪ್ರಾಧಿಕಾರದಿಂದ ಹಂಚಿಕೆಯಾದ ಸ್ವತ್ತುಗಳು: ಹಂಚಿಕೆ ಪತ್ರ, ಸಂಬಂಧಪಟ್ಟ ಪ್ರಾಧಿಕಾರದಿಂದ ಹಂಚಿಕೆ ಮಡಿರುವ ಸ್ವಾಧೀನ ಪತ್ರ, ಗುತ್ತಿಗೆ ಕರಾರು ಪತ್ರ ಅಥವಾ ಕ್ರಯಪತ್ರ, ಸ್ವತ್ತಿನ ಋಣಭಾರವಿಲ್ಲದ ಪ್ರಮಾಣಪತ್ರ

ಬಿಡಿಎ ಅನುಮೋದಿತ ಬಡಾವಣೆ: ಸ್ವತ್ತಿನ ಹಕ್ಕು ನಿರೂಪಿಸುವ ದಾಖಲೆಗಳು, ಅನುಮೋದಿತ ಬಡಾವಣೆ ನಕ್ಷೆ, ಬಿಡಿಎಯಿಂದ ಬಿಡುಗಡೆ ಆದೇಶ, ಸ್ವತ್ತಿನ ಋಣಭಾರವಿಲ್ಲದ ಪ್ರಮಾಣಪತ್ರ, ಸ್ವತ್ತಿನ ವಿಸ್ತೀರ್ಣ ಮತ್ತು ಪ್ರದೇಶವನ್ನು ಗುರುತಿಸುವ ಸ್ವಯಂ ದೃಢೀಕರಣ ನಕ್ಷೆ

ಬಿಡಿಎ ರಿಕನ್ವೆ ಪ್ರದೇಶ: ಸ್ವತ್ತಿನ ಹಕ್ಕು ವರ್ಗಾವಣೆ ದಾಖಲೆ, ಸ್ವತ್ತಿನ ಋಣಭಾರವಿಲ್ಲದ ಪ್ರಮಾಣಪತ್ರ, ಸುಧಾರಣಾ ವೆಚ್ಚ ಪಾವತಿಸಿರುವ ರಶೀದಿ, ಸ್ವತ್ತಿನ ವಿಸ್ತೀರ್ಣ ಮತ್ತು ಪ್ರದೇಶವನ್ನು ಗುರುತಿಸುವ ಸ್ವಯಂ ದೃಢೀಕರಣ ನಕ್ಷೆ

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.