ಸಾಹಿತ್ಯದಲ್ಲಿ ಕಿ.ರಂ ನೆನಪು ಶಾಶ್ವತ


Team Udayavani, Aug 8, 2018, 12:21 PM IST

sahitya.jpg

ಬೆಂಗಳೂರು: ಕನ್ನಡದಲ್ಲಿ ಕಾವ್ಯಗಳು ಇರುವ ತನಕ ಕಿ.ರಂ. ನೆನಪು ಶಾಶ್ವತ ಎಂದು ಕವಿ ಸಿದ್ದಲಿಂಗಯ್ಯ ತಿಳಿಸಿದ್ದಾರೆ. ಜನಸಂಸ್ಕೃತಿ, ಅವಿರತ ಪುಸ್ತಕ ಹಾಗೂ ಬೆಂಗಳೂರು ಆರ್ಟ್‌ ಫೌಂಡೇಷನ್‌ ಸಂಯುಕ್ತಾಶ್ರಯದಲ್ಲಿ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮಂಗಳವಾರ ನಡೆದ “ಕಾಡುವ ಕಿರಂ’ ಅಹೋರಾತ್ರಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕನ್ನಡ ಸಾಹಿತ್ಯ ಲೋಕವನ್ನು ಕಿರಂ ನಾಗರಾಜ್‌ರಷ್ಟು ಓದಿಕೊಂಡವರು ಮತ್ತೂಬ್ಬರಿಲ್ಲ. ಹಗಲು ರಾತ್ರಿಗಳೆನ್ನೆದೇ ಕಾವ್ಯಗಳ ಕುರಿತು ಚರ್ಚೆ ನಡೆಸುತ್ತಿದ್ದರು. ಸಾಹಿತ್ಯ ಕುರಿತು ಕೇವಲ ಬೋಧನೆ ಹಾಗೂ ಚರ್ಚೆಗೆ ಸೀಮಿತರಾಗದ ಅವರು ಪ್ರಾಣದ ಅಂಗು ತೊರೆದು ಕನ್ನಡ ಪರ ಹೋರಾಟಗಳಲ್ಲೂ ಭಾಗವಹಿಸುತ್ತಿದ್ದರು. ಹಾಗಾಗಿಯೇ ಅವರನ್ನು ಕನ್ನಡ ಸಾಹಿತ್ಯ ಲೋಕದ ಅರಿಸ್ಟಾಟಲ್‌ ಎಂದು ಕರೆಯುತ್ತಿದ್ದೆವು ಎಂದು ತಿಳಿಸಿದರು.

ಕಿರಂ ಮಾತು ಹಾಗೂ ವ್ಯಕ್ತಿತ್ವದಲ್ಲಿ ವ್ಯತ್ಯಾಸವಿರುತ್ತಿರಲಿಲ್ಲ. ಎಂದೂ ತೋರಿಕೆಯ, ಲೌಕಿಕ ಬದುಕನ್ನು ಮಾಡಿದವರಲ್ಲ. ಯಾವಾಗಲೂ ಹೊಸ ಪುಸ್ತಕ ಖರೀದಿಸ ಬೇಕು ಓದಬೇಕು ಎನ್ನುತ್ತಲೇ ಇದ್ದರು. ಸಣ್ಣ ವಿಚಾರಗಳ ಕುರಿತು ಸಾಕಷ್ಟು ಅಧ್ಯಯನ ಮಾಡುತ್ತಿದ್ದ ಅವರು ಚಿಕ್ಕವರು ದೊಡ್ಡವರು, ವಿದ್ಯಾವಂತರು ಅವಿದ್ಯಾವಂತರು ಎನ್ನುವ ಭೇದವಿಲ್ಲದೇ ಸದಾ ಚರ್ಚೆ ನಡೆಸುತ್ತಿದ್ದರು.

ಅವರ ಮುಂದೆ ಯಾರಾದರೂ ಕನ್ನಡ ಸಾಹಿತ್ಯ ಕುರಿತು ಅವಹೇಳನ ಮಾಡಿದರೆ ಅವರು ಜತೆ ನೇರವಾಗಿ ಜಗಳಕ್ಕೆ ಇಳಿಯುತ್ತಿದ್ದರು. ತನ್ನ ವಿದ್ಯಾರ್ಥಿ ಬಳಗವನ್ನು ಸದಾ ಗೆಳೆಯರಂತೆ ಕಂಡು ಅವರ ಏಳಿಗೆಗೆ ಬಯಸುತ್ತಿದ್ದರು. ಇಂತಹ ಮಹಾನ್‌ ವ್ಯಕ್ತಿತ್ವ ಮತ್ತೆ ಕನ್ನಡದಲ್ಲಿ ಹುಟ್ಟಿಬರಲು ಸಾಧ್ಯವಿಲ್ಲ ಎಂದರು. 

ಕವಯಿತ್ರಿ ಹೇಮಾ ಪಟ್ಟಣ ಶೆಟ್ಟಿ, ಕೆ.ಷರೀಪಾ, ಸಾಹಿತಿ ಹಾಡ್ಲಹಳ್ಳಿ ನಾಗರಾಜು, ಜಾನಪದ ಗಾಯಕ ಅಪ್ಪಗೆರೆ ತಿಮ್ಮರಾಜು ಅವರಿಗೆ ಕಿರಂ ಪುರಸ್ಕಾರ ನೀಡಿ ಗೌರವಿಸಲಾಯಿತು. “ಕಿರಂ ಹೊಸಕವಿತೆ’ ಎಂಬ ಪುಸ್ತಕ ಬಿಡುಗಡೆ ಹಾಗೂ ಕಿರಂ ಕುರಿತ ಕಿರುಚಿತ್ರ ಪ್ರದರ್ಶನ ಮಾಡಲಾಯಿತು. 

ಕಾರ್ಯಕ್ರಮದಲ್ಲಿ ಕರ್ನಾಟಕ ಲಲಿತಾ ಕಲಾ ಅಕಾಡೆಮಿ ಅಧ್ಯಕ್ಷ ಎಂ.ಎಸ್‌.ಮೂರ್ತಿ, ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಜೆ.ಲೋಕೇಶ್‌, ಪತ್ರಕರ್ತರಾದ ಪ್ರದೀಪ್‌ ಮಾಲ್ಗುಡಿ, ದಿಲಾವರ್‌ ರಾಮದುರ್ಗ ಉಪಸ್ಥಿತರಿದ್ದರು. 

ಮಾದರಿ ವ್ಯಕ್ತಿತ್ವ: ಅಧಿಕಾರಕ್ಕಿಂತ ವ್ಯಕ್ತಿತ್ವಕ್ಕೆ ಸಮಾಜದಲ್ಲಿ ಬೆಲೆ ಇದೆ. ಹಾಗಾಗಿಯೇ ಇಂದಿಗೂ ಸರಳತೆ ಜೀವನ ನಡೆಸಿದ ಅಂಬೇಡ್ಕರ್‌, ಲೋಹಿಯಾ, ಜಯಪ್ರಕಾಶ್‌ ನಾರಾಯಣ್‌, ಅಬ್ದುಲ್‌ ಕಲಾಂ ಅವರನ್ನು ಜನ ನೆನೆಯುತ್ತಿದ್ದಾರೆ. ಅಂತಹವರ ಸಾಲಿಗೆ ಸೇರುವ ವ್ಯಕ್ತಿತ್ವ ಕಿರಂ ನಾಗರಾಜ ಅವರದ್ದಾಗಿತ್ತು.

ಇನ್ನು ರಾಜ್ಯದ ಎಲ್ಲಾ ಭಾಗಗಳಲ್ಲೂ ಕಿರಂ ನಾಗರಾಜ ಕುರಿತಾದ ಕಾರ್ಯಕ್ರಮಗಳನ್ನು ನಡೆಸುವ ಯೋಜನೆ ಇದೆ. ಅವರು ಜನ್ಮದಿನ ಅಂಗವಾಗಿ ಡಿಸೆಂಬರ್‌ ತಿಂಗಳಲ್ಲಿ ಮೂರು ದಿನಗಳ ಕಾಲ ನಾಟಕೋತ್ಸವ ಹಮ್ಮಿಕೊಳ್ಳುವ ಕುರಿತು ಚರ್ಚೆ ನಡೆಸಲಾಗುತ್ತಿದೆ ಸಂಸ್ಕೃತಿ ಚಿಂತಕ ಕಾಳೇಗೌಡ ನಾಗವಾರ ಹೇಳಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.