ಬಾಲಕನ ಅಪಹರಿಸಿ 15 ಲಕ್ಷ  ರೂ. ಸುಲಿಗೆ


Team Udayavani, Sep 28, 2022, 2:29 PM IST

ಬಾಲಕನ ಅಪಹರಿಸಿ 15 ಲಕ್ಷ  ರೂ. ಸುಲಿಗೆ

ಬೆಂಗಳೂರು: ಸಾಫ್ಟ್ವೇರ್‌ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರ ಪುತ್ರನನ್ನು ಅಪಹರಿಸಿ 15 ಲಕ್ಷ ರೂ. ಸುಲಿಗೆ ಮಾಡಿದ್ದ ಇಬ್ಬರು ಅಪಹರಣಕಾರರನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಸುನೀಲ್‌ ಕುಮಾರ್‌ ಅಲಿಯಾಸ್‌ ಸುನೀಲ್‌ ರಾಜ್‌ (23) ಹಾಗೂ ಮಂಡಿಕಲ್‌ ಹೋಬಳಿಯ ನಾಗೇಶ್‌ (22) ಬಂಧಿತರು. ಆರೋಪಿಗಳು ವಸೂಲಿ ಮಾಡಿದ್ದ 9.69 ಲಕ್ಷ ರೂ. ನಗದು ಸುಲಿಗೆ ಹಣದಲ್ಲಿ ಖರೀದಿಸಿದ್ದ 1.5 ಲಕ್ಷ ರೂ. ಮೌಲ್ಯದ ಕೆಟಿಎಂ ಬೈಕ್‌, 39 ಸಾವಿರ ರೂ. ಮೌಲ್ಯದ ಕ್ಯಾಮೆರಾ, ಒಂದು ಬೈಕ್‌, ಒಂದು ಕಾರು ವಶಕ್ಕೆ ಪಡೆಯಲಾಗಿದೆ.  ಆರೋಪಿಗಳು ಸೆ.2ರಂದು ಸಂಪಿಗೆಹಳ್ಳಿಯ ಮಾನ್ಯತಾ ಟೆಕ್‌ ಪಾರ್ಕ್‌ನ ಮಾನ್ಯತಾ ರೆಸಿಡೆನ್ಸಿ ಯಲ್ಲಿ 14 ವರ್ಷದ ಬಾಲಕನನ್ನು ಅಪಹರಿಸಿದ್ದರು ಎಂದು ಪೊಲೀಸರು ಹೇಳಿದರು.

ಬಾಲಕನ ತಂದೆ ಸಾಪ್ಟ್ವೇರ್‌ ಕಂಪನಿಯಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದು, ತಾಯಿ ಕೂಡ ಟೆಕ್ಕಿಯಾಗಿದ್ದಾರೆ. ಮಾನ್ಯತಾ ರೆಸಿಡೆನ್ಸಿಯ ಮೊದಲ ಮಹಡಿಯಲ್ಲಿ ಪುತ್ರನ ಜತೆ ವಾಸವಾಗಿದ್ದರು. ಸೆ.2ರಂದು ಮನೆಗೆ ಬಂದ ಆರೋಪಿಗಳು, ಮೊದಲ ಮಹಡಿಯಲ್ಲಿರುವ ಮನೆಯ ಬಾಗಿಲು ತೆರೆದಿರುವುದನ್ನು ಕಂಡು ಒಳ ನುಗ್ಗಿದ್ದಾರೆ. ಬಳಿಕ ಕೋಣೆಯಲ್ಲಿ ಮಲಗಿದ್ದ ಬಾಲಕನ ಬಾಯಿಗೆ ಪ್ಲಾಸ್ಟರ್‌ ಹಾಕಿ, ಮಾರಕಾಸ್ತ್ರ ತೋರಿಸಿ ಬೆದರಿಸಿದ್ದಾರೆ. ಬಳಿಕ ತಂದೆಯ ಕಾರಿನ ಕೀಯನ್ನು ಆತನಿಂದಲೇ ಪಡೆದುಕೊಂಡು ಅಪಹರಿಸಿದ್ದಾರೆ. ಈ ವೇಳೆ ಆತನ ಪೋಷಕರು ಎರಡನೇ ಮಹಡಿಯಲ್ಲಿರುವ ಕೋಣೆಯಲ್ಲಿ ಮಲಗಿದ್ದರು. ಮರು ದಿನ ಬೆಳಗ್ಗೆ ಪುತ್ರ ಕಾಣೆಯಾಗಿದ್ದರಿಂದ ಗಾಬರಿಗೊಂಡ ಪೋಷಕರು ಎಲ್ಲೆಡೆ ಹುಡುಕಾಟ ನಡೆಸಿದ್ದಾರೆ ಎಲ್ಲಿಯೂ ಪತ್ತೆಯಾಗಿಲ್ಲ. ಈ ಮಧ್ಯೆ ಆರೋಪಿಗಳು ದಾಬಸ್‌ಪೇಟೆ ಬಳಿಯಿಂದ ಬಾಲಕನ ತಂದೆಗೆ ಕರೆ ಮಾಡಿ, “15 ಲಕ್ಷ ರೂ. ಕೊಡಬೇಕು. ಇಲ್ಲವಾದರೆ ಪುತ್ರನನ್ನು ಹತ್ಯೆ ಮಾಡುತ್ತೇವೆ’ ಎಂದು ಬೆದರಿಕೆ ಹಾಕಿದ್ದಾರೆ. ಇದರಿಂದ ಹೆದರಿದ ಪೋಷಕರು ಕೂಡಲೇ 15 ಲಕ್ಷ ರೂ. ಅನ್ನು ಆರೋಪಿಗಳು ಹೇಳಿದ ಸ್ಥಳಕ್ಕೆ ಹೋಗಿ, ಕೊಟ್ಟು ಮಗನನ್ನು ಕರೆತಂದಿದ್ದಾರೆ.

ಬಳಿಕ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಕಾರ್ಯಾಚರಣೆ ನಡೆಸಿದ ಪೊಲೀಸರು, 20 ದಿನಗಳ ಕಾಲ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಈಶಾನ್ಯವಿಭಾಗ ಡಿಸಿಪಿ ಅನೂಪ್‌ ಶೆಟ್ಟಿ, ಎಸಿಪಿ ರಂಗಪ್ಪ ಮತ್ತು ಇನ್‌ಸ್ಪೆಕ್ಟರ್‌ ಕೆ.ಟಿ.ನಾಗರಾಜು ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಗಾರ್ಡನ್‌ ಕೆಲಸಕ್ಕೆ ಬಂದಾಗ ಸಂಚು: ಆರೋಪಿಗಳ ಪೈಕಿ ಸುನೀಲ್‌ ಕುಮಾರ್‌ 8 ತಿಂಗಳ ಹಿಂದೆ ಬಾಲಕನ ಮನೆಯ ಬಳಿಯ ಗಾರ್ಡನ್‌ ಕೆಲಸಕ್ಕೆ ಬಂದಿದ್ದ. ಈ ವೇಳೆ ಬಾಲಕನ ಪೋಷಕರ ಬಳಿ ಸಾಕಷ್ಟು ಹಣ ಇರುವ ಮಾಹಿತಿ ಸಿಕ್ಕಿತ್ತು. ಬಳಿಕ ತನ್ನ ಸ್ನೇಹಿತ ನಾಗೇಶ್‌ಗೆ ವಿಚಾರ ತಿಳಿಸಿ, ಸಂಚು ರೂಪಿಸಿ ಬಾಲಕನನ್ನು ಅಪಹರಣ ಮಾಡಿದ್ದರು ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.