ಮದುವೆಗಾಗಿ ಕಿಡ್ನ್ಯಾಪ್‌ ನಾಟಕ ಆಡಿದ ಯುವತಿ


Team Udayavani, Apr 11, 2017, 12:18 PM IST

kidnap-drama.jpg

ಬೆಂಗಳೂರು: ಪ್ರೀತಿಸಿದ ಯುವಕನ ಜತೆ ವಿವಾಹವಾಗುವ ಸಲುವಾಗಿ ಯುವತಿಯೊಬ್ಬಳು ತನ್ನ ಸಹೋದರನ ಜತೆ ಸೇರಿ ಅಪಹರಣದ ಕಥೆ ಕಟ್ಟಿದ ಪ್ರಕರಣ ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಯುವತಿಯ ಸಹೋದರ ನೀಡಿದ ದೂರಿನ ಮೇರೆಗೆ ಹುಡುಕಾಟ ನಡೆಸಿದ ಪೊಲೀಸರ ಕೈಗೆ ಯುವತಿ ಸಿಕ್ಕಾಗ ಅಪಹರಣ ನಾಟಕ ಆಡಿರುವುದು ಬಯಲಾಗಿದೆ. ಶಾಂತಿನಗರದ ಅಕ್ಕಿತಮ್ಮನಹಳ್ಳಿಯ ನಿವಾಸಿ ಪಾರ್ವತಿ (21) ನಾಟಕದ ಸೂತ್ರಧಾರಿ. ಈಕೆಯ ತಮ್ಮ ಅಮೃತ್‌ ಅಪಹರಣದ ಪಾತ್ರಧಾರಿ. ಪ್ರೀತಿಯ ವಿಚಾರ ಮನೆಯವರಿಗೆ ತಿಳಿಸಿದರೆ ವಿರೋಧಿಸುತ್ತಾರೆ ಎಂಬ ಭಯದಲ್ಲಿ ಈ ರೀತಿ ಮಾಡಿರುವುದಾಗಿ ಯುವತಿ ತಪ್ಪೊಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ಏನು?: ನಗರದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ಯುವತಿ ಅರ್ಧಕ್ಕೆ ವಿದ್ಯಾಭ್ಯಾಸ ಮೊಟಕುಗೊಳಿಸಿದ್ದು, ಮನೆ ಸಮೀಪದ ನಿವಾಸಿ ಶಂಭು ಎಂಬಾತನನ್ನು ಪ್ರೀತಿಸುತ್ತಿದ್ದಳು. ಇದೇ ವೇಳೆ ಯುವತಿಯ ಮನೆಯಲ್ಲಿ ಮದುವೆಗೆ ಸಿದ್ಧತೆ ನಡೆಸುತ್ತಿದ್ದರು. ಇದರಿಂದ ಆತಂಕಗೊಂಡ ಯುವತಿ, ಕಿರಿಯ ಸಹೋದರ ಅಮೃತ್‌ಗೆ ತನ್ನ ಹಾಗೂ ಶಂಭುವಿನ ಪ್ರೀತಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಒಪ್ಪಿದ ಅಮೃತ್‌, ಅಕ್ಕನ ಜತೆ ಸೇರಿ ಅಪಹರಣದ ಸಂಚು ರೂಪಿಸಿದ್ದಾನೆ.

ಅದರಂತೆ ಮಾ.31ರಂದು ಮಧ್ಯಾಹ್ನ 3 ಗಂಟೆಗೆ ಪಾರ್ವತಿ ಹತ್ತಿರದ ಬೇಕರಿಗೆ ಹೋಗುತ್ತಾರೆ. ಅದೇ ವೇಳೆ ಬೇಕರಿ ಬಳಿ ಕಾರಿನಲ್ಲಿ ಬಂದ ಇಬ್ಬರು ಯುವಕರ ಜತೆ ಆಕೆ ಹೋಗುತ್ತಾರೆ. ಕೆಲ ಹೊತ್ತಿನ ಬಳಿಕ ಅಮೃತ್‌ ಅಶೋಕ್‌ನಗರ ಠಾಣೆಗೆ ಹೋಗಿ ನನ್ನ ಅಕ್ಕನ್ನು ಅಪರಿಚಿತ ವ್ಯಕ್ತಿಗಳು ಕೆಎ 01, ಎಂಇ 7279 ನಂಬರಿನ ಕಾರಿನಲ್ಲಿ ಅಪಹರಿಸಿದ್ದಾರೆ ಎಂದು ದೂರು ನೀಡಿದ. “ನಾನು ಮತ್ತು ಅಕ್ಕ ಮಧ್ಯಾಹ್ನ ಬೇಕರಿಗೆ ಹೋಗಿ ಪಪ್ಸ್‌ ತಿಂದು, ಕೂಲ… ಡ್ರಿಂಕ್ಸ್‌ ಕುಡಿದು ಮನೆಗೆ ಹೋಗುವಾಗ ಇಬ್ಬರು ಕಾರಿನಲ್ಲಿ ಬಂದು, ಆಕೆಯನ್ನು ಅಪಹರಿಸಿದರು ಎಂದು ಮಾಹಿತಿ ನೀಡಿ, ಸ್ಥಳವನ್ನು ತೋರಿಸುತ್ತಾನೆ.

10 ಗಂಟೆ ಕಾರ್ಯಾಚರಣೆ
ಯುವತಿ ಪತ್ತೆಗಾಗಿ ಅಶೋಕನಗರ ಠಾಣೆ ಪೊಲೀಸರು ಸತತ 10 ಗಂಟೆಗಳ ಕಾರ್ಯಾಚರಣೆ ನಡೆಸಿದರು. ನಂತರ, ಕೆಂಗೇರಿ ಬಳಿಯ ದೇವಸ್ಥಾನವೊಂದರ ಬಳಿ ಕಾರು ನಿಂತಿರುವುದಾಗಿ ಮಾಹಿತಿ ರವಾನೆಯಾಗುತ್ತದೆ. ಕಾರಿನ ಸುಳಿವು ಪಡೆದ ಪೊಲೀಸರು ಕೂಡಲೇ ಆರೋಪಿಗಳನ್ನು ಪತ್ತೆ ಮಾಡಿದ್ದಾರೆ. ಅಷ್ಟರಲ್ಲಿ ಯುವತಿ ಪ್ರಿಯತಮ ಶಂಭು ಜತೆ ಇಲ್ಲಿನ ದೇವಸ್ಥಾನದಲ್ಲಿ ವಿವಾಹ ಮಾಡಿಕೊಂಡಿದ್ದರು. ಕೊನೆಗೆ ಇಬ್ಬರ ಪೋಷಕರನ್ನು ಠಾಣೆಗೆ ಕರೆಸಿ ಸಂಧಾನ ನಡೆಸಿ, ಶಂಭು ಹಾಗೂ ಯುವತಿಗೆ ಬುದ್ಧಿ ಹೇಳಿ ಕಳುಹಿಸಿಕೊಡಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.