ಗೃಹಪ್ರವೇಶಕ್ಕೆ ಕರೆದು ಕಿಡ್ನಾಪ್‌: ಬಂಧನ


Team Udayavani, Nov 6, 2019, 9:59 AM IST

bng-tdy-1

ಬೆಂಗಳೂರು: ಉದ್ಯಮಿಯೊಬ್ಬರನ್ನು ಗೃಹ ಪ್ರವೇಶದ ಆಮಂತ್ರಣ ನೆಪದಲ್ಲಿ ಕಿಡ್ನಾಪ್‌ ಮಾಡಿ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಪ್ರಕರಣವನ್ನು ಬಾಣಸವಾಡಿ ಪೊಲೀಸರು ಬೇಧಿಸಿದ್ದಾರೆ.

ಅ.11ರಂದು ಕಲ್ಯಾಣನಗರದ ಪೂಜಪ್ಪ ಲೇಔಟ್‌ ನಿವಾಸಿ ರಾಮಾನುಜಂ (55) ಎಂಬುವವರನ್ನು ಅಪಹರಿಸಿದ್ದ ದುಷ್ಕರ್ಮಿಗಳ ತಂಡ ಅವರನ್ನು ಮನೆಯೊಂದರಲ್ಲಿ ಕೂಡಿ ಹಾಕಿ ಚಿನ್ನಾಭರಣ ಸುಲಿಗೆ ಮಾಡಿದ್ದರು. ಈ ಕುರಿತು ರಾಮಾನುಜಂ ಅವರು ನೀಡಿದ ದೂರು ಆಧರಿಸಿ ತನಿಖೆ ಚುರುಕುಗೊಳಿಸಿದ ಬಾಣಸವಾಡಿ ಪೊಲೀಸರು, ಐವರು ಆರೋಪಿಗಳನ್ನು ಬಂಧಿಸಿದ್ದು ಸುಲಿಗೆ ಮಾಡಿದ್ದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ರಾಮಾನುಜಂ ಅವರ ಬಳಿ ನಗದು ಹಾಗೂ ಚಿನ್ನಾಭರಣ ಇರುವುದನ್ನು ತಿಳಿದುಕೊಂಡಿದ್ದ ಆರೋಪಿಯೊಬ್ಬ, ತನ್ನ ಸಹಚರರಿಗೆ ಮಾಹಿತಿ ನೀಡಿ ಇಡೀ ಕೃತ್ಯದ ನೇತೃತ್ವ ವಹಿಸಿಕೊಂಡಿದ್ದ ಎಂಬುದು ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಮೂಲಗಳು ತಿಳಿಸಿವೆ.

ಗೃಹಪ್ರವೇಶದ ಆಮಂತ್ರಣದಿಂದ ಆಪತ್ತು!: ರಾಮಾನುಜಂ ಅ.11 ರಂದು ಮನೆಯಿಂದ ಸಮೀಪವೇ ಇರುವ ಅಮ್ಮನ್‌ ಟೀ ಹೌಸ್‌ ಬಳಿ ಬಂದು ಕುಳಿತಿದ್ದರು. ಇದೇ ವೇಳೆ ಬೌನ್ಸ್‌ ಬೈಕ್‌ನಲ್ಲಿ ಯುವಕನೊಬ್ಬ ಅಲ್ಲಿಗೆ ಬಂದಿದ್ದು ಪರಿಚಯಸ್ಥನಂತೆ ಮಾತು ಆರಂಭಿಸಿದ್ದಾನೆ. ಬಳಿಕ ಹೆಣ್ಣೂರು ಮುಖ್ಯರಸ್ತೆಯಲ್ಲಿರುವ ಬಿಎಂಟಿಸಿ ಸಮೀಪದಲ್ಲಿ ಹೊಸ ಮನೆಯನ್ನು ಕಟ್ಟಿಸಿದ್ದೇನೆ. ಸದ್ಯದಲ್ಲಿಯೇ ಗೃಹಪ್ರವೇಶವಿದೆ ನೀವು ಬರಬೇಕು ಎಂದು ಹೇಳಿದ್ದಾನೆ.

ಆತನ ಮಾತನ್ನು ನಂಬಿದ ರಾಮಾನುಜಂ ಯುವಕ ಹೇಳಿದ ಸ್ಥಳಕ್ಕೆ ಹೋದಾಗ ಸಂಜೆ ಬನ್ನಿ ಎಂದಿದ್ದಾನೆ. ಹೀಗಾಗಿ ರಾಮಾನುಜಂ ಅವರು ಸಂಜೆ 6.30ರ ಸುಮಾರಿಗೆ ಪುನಃ ಬಿಎಂಟಿಸಿ ಡಿಪೋ ಹತ್ತಿರ ಹೋದಾಗ ಅವರನ್ನು ಬೈಕ್‌ನಲ್ಲಿ ಕುಳ್ಳಿರಿಸಿಕೊಂಡ ಆರೋಪಿ ಸೀದಾ ಬಾಗಲೂರು ರಸ್ತೆ ಕಡೆ ಬಂದಿದ್ದಾನೆ. ಬಳಿಕ ಆತನ ಜತೆ ನಾಲ್ವರು ದುಷ್ಕರ್ಮಿಗಳು ಸೇರಿಕೊಂಡಿದ್ದಾರೆ. ಬಾಗಲೂರಿನ ಸಮೀಪದ ರೂಂ ವೊಂದರಲ್ಲಿ ರಾಮಾನುಜಂ ಅವರನ್ನು ಕೂಡಿ ಹಾಕಿದ ದುಷ್ಕರ್ಮಿಗಳು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.

ಕೇಳಿದಷ್ಟು ಹಣ ಕೊಡದಿದ್ದರೆ ಕೊಲ್ಲುವುದಾಗಿ ಬೆದರಿಕೆ ಒಡ್ಡಿದ್ದಾರೆ. ದುಷ್ಕರ್ಮಿಗಳ ಈ ವ್ಯೂಹದಲ್ಲಿ ಸಿಲುಕಿಕೊಂಡ ರಾಮಾನುಜಂ ಅವರು ತನ್ನ ಬಳಿ ಹಣ ಇಲ್ಲ ಎಂದು ಬೇಡಿಕೊಂಡರೂ ದುಷ್ಕರ್ಮಿಗಳು ಕೇಳಲಿಲ್ಲ. ಕಡೆಗೆ ಪ್ರಾಣಭಯದಿಂದ ಮಗನಿಗೆ ದೂರವಾಣಿ ಕರೆ ಮಾಡಿ ಮನೆಯಲ್ಲಿದ್ದ ಚಿನ್ನಾಭರಣ ತರಿಸಿದ್ದಾರೆ. ಮಗನಿಂದ ಚಿನ್ನಾಭರಣ ಪಡೆದುಕೊಂಡ ದುಷ್ಕರ್ಮಿಗಳು ತಡರಾತ್ರಿ ರಾಮಾನುಜಂ ಅವರನ್ನು ಬಿಟ್ಟುಕಳುಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.