Kidnapping: ಕಂಪ್ಯೂಟರ್‌ ಡೀಲರ್‌ ಕಿಡ್ನಾಪ್‌: ಮೂವರ ಬಂಧನ


Team Udayavani, Sep 11, 2023, 1:48 PM IST

Kidnapping: ಕಂಪ್ಯೂಟರ್‌ ಡೀಲರ್‌ ಕಿಡ್ನಾಪ್‌: ಮೂವರ ಬಂಧನ

ಬೆಂಗಳೂರು:  ಹಣಕಾಸಿನ ವಿಚಾರಕ್ಕೆ ಲ್ಯಾಪ್‌ಟಾಪ್‌-ಕಂಪ್ಯೂಟರ್‌ ಡೀಲರೊ ಬ್ಬರನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇರಿಸಿದ್ದ ರೌಡಿಶೀಟರ್‌ ಸೇರಿ ಮೂವರನ್ನು ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಲ್ಲಸಂದ್ರದ ಹನುಮಗಿರಿನಗರದ ಕಿರಣ್‌ ಕುಮಾರ್‌(35), ಸಾರ್ವಭೌಮ ನಗರದ ಸೋಮಶೇಖರ್‌(36), ತ್ಯಾಗರಾ ಜನಗರದ ರೌಡಿ ಅರುಣ್‌ ಕುಮಾರ್‌ ಅಲಿಯಾಸ್‌ ಸುನಾಮಿ(32) ಬಂಧಿತರು.

ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಕಾರು, ದೊಣ್ಣೆ, ಮೊಬೈಲ್‌ ಜಪ್ತಿ ಮಾಡಲಾಗಿದೆ. ಮತ್ತೂಬ್ಬ ಆರೋಪಿ ಅನಿಲ್‌ ಕುಮಾರ್‌ ಎಂಬಾತ ತಲೆಮರೆಸಿಕೊಂಡಿದ್ದಾನೆ.

ಆರೋಪಿಗಳು ಇಟ್ಟುಮಡು ನಿವಾಸಿ ಲ್ಯಾಪ್‌ಟಾಪ್‌, ಕಂಪ್ಯೂಟರ್‌ ಡೀಲರ್‌ ಸಂದೀಪ್‌ ಕುಮಾರ್‌(32) ಎಂಬಾತ ನನ್ನು ಆ.30ರಂದು ಅಪಹರಿಸಿ ತಮಿಳು ನಾಡಿಗೆ ಕರೆದೊಯ್ದು 50 ಲಕ್ಷ ರೂ.ಗೆ ಬೇಡಿಕೆ ಇರಿಸಿದ್ದರು. ಆರೋಪಿಗಳಿಂದ ತಪ್ಪಿಸಿಕೊಂಡು ಬಂದ ಸಂದೀಪ್‌ ಪೊಲೀಸರಿಗೆ ದೂರು ನೀಡಿದ್ದರು.

ಆ.30ರಂದು ಮುಂಜಾನೆ ಸ್ನೇಹಿತ ಅನಿಲ್‌ ಕುಮಾರ್‌, ಸಂದೀಪ್‌ಗೆ ಕರೆ ಮಾಡಿ ಮನೆಗೆ ಹೊರಗೆ ಬರುವಂತೆ ಕರೆದಿದ್ದ. ಸಂದೀಪ್‌ ಮನೆಯಿಂದ ಹೊರಗೆ ಬರುತ್ತಿದ್ದಂತೆ ಬಂಧಿತ ಮೂವರು ಆರೋಪಿಗಳು ಟೀ ಕುಡಿ ಯೋಣ ಬಾ ಎಂದು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ಹೋಗಿದ್ದಾರೆ. ಸ್ವಲ್ಪ ದೂರ ಹೋಗುತ್ತಿದ್ದಂತೆ ಸಂದೀಪ್‌ನ ಮೊಬೈಲ್‌ ಕಸಿದುಕೊಂಡು ಸಿಮ್‌ ತೆಗೆದು ಹೊರಕ್ಕೆ ಎಸೆದು 50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾರೆ. ಸಂದೀಪ್‌ ಹಣ ಇಲ್ಲ ಎಂದಾಗ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕೈಗಳಿಂದ ಹಲ್ಲೆ ಮಾಡಿದ್ದಾರೆ.

ಬಳಿಕ ಆರೋಪಿಗಳು ತಮಿಳುನಾಡಿನ ಡೆಂಕಣಿಕೋಟೆ ಕಡೆಗೆ ಕರೆದೊಯ್ದು ಫಾರ್ಮ್ ಹೌಸ್‌ನಲ್ಲಿ ಕೂಡಿ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅಷ್ಟೊಂದು ಹಣ ಇಲ್ಲ ಎಂದಾಗ ದೊಣ್ಣೆಯಿಂದ ಸಂದೀಪ್‌ಗೆ ಹಲ್ಲೆ ಮಾಡಿದ್ದಾರೆ. ಹಣ ಕೊಡದಿದ್ದರೆ ಪ್ರಾಣ ತೆಗೆಯುವುದಾಗಿ ಬೆದರಿಕೆ ಹಾಕಿ ದ್ದಾರೆ. ಸಂಜೆ 4.30ಕ್ಕೆ ಫಾರ್ಮ್ ಹೌಸ್‌ನಿಂದ ಬೇರೆ ಕಡೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಆರೋಪಿ ಅರುಣ್‌ ಮತ್ತು ಕಿರಣ್‌ ಊಟಕ್ಕೆ ಹೋಗಿದ್ದರು.

ಕಾರಿನ ಮುಂದಿನ ಆಸನದಲ್ಲಿದ್ದ ಸೋಮಶೇಖರ್‌ ಮತ್ತು ಅನಿಲ್‌ ನಿದ್ದೆಗೆ ಜಾರಿದ್ದಾರೆ. ಈ ಸಮಯ ಬಳಸಿಕೊಂಡು ಸಂದೀಪ್‌ ಕಾರಿನಿಂದ ಕೆಳಗೆ ಇಳಿದು ತಪ್ಪಿಸಿಕೊಂಡು ತಮಿಳುನಾಡಿನ ಅಚ್ಚಿತಾ ಪೊಲೀಸ್‌ ಠಾಣೆಗೆ ತೆರಳಿ ಘಟನೆ ಬಗ್ಗೆ ವಿವರಿಸಿದ್ದಾರೆ. ಬಳಿಕ ತಾಯಿಗೆ ಫೋನ್‌ ಮಾಡಿ ವಿಷಯ ತಿಳಿಸಿ ಬೆಂಗಳೂರಿಗೆ ಬಂದು ದೂರು ನೀಡಿದ್ದರು. ಈ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಹಣಕಾಸು ವ್ಯವಹಾರ ಸಂಬಂಧ ಕೃತ್ಯ:

ದೂರುದಾರ ಸಂದೀಪ್‌ ಕುಮಾರ್‌, ಕಿರಣ್‌, ಅನಿಲ್‌ಕುಮಾರ್‌ ಪರಸ್ಪರ ಪರಿಚಿತರು. ಬಂಧಿತ ಮೂವರ ಪೈಕಿ ಅರುಣ್‌ ರೌಡಿಶೀಟರ್‌ ಆಗಿದ್ದು, ನಗರದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಅಪರಾಧ ಪ್ರಕರಣಗಳು ದಾಖಲಾಗಿವೆ. ಸಂದೀಪ್‌, ಇತರೆ ಇಬ್ಬರು ಆರೋಪಿಗಳ ನಡುವೆ ಹಣಕಾಸು ವ್ಯವಹಾರ ಇತ್ತು. ಈ ವಿಚಾರವಾಗಿ ಆರೋಪಿಗಳು ಸಂದೀಪ್‌ನನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇರಿಸಿದ್ದರು ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.