ಹಣಕ್ಕಾಗಿ ಅಪಹರಣ: ಮೂವರ ಬಂಧನ


Team Udayavani, Dec 13, 2018, 12:00 PM IST

blore-2.jpg

ಬೆಂಗಳೂರು: ಚೈನ್‌ ಲಿಂಕ್‌ ಮಾರ್ಕೆಟಿಂಗ್‌ ಕಂಪನಿ ಯೊಂದರ ಉದ್ಯೋಗಿಯನ್ನು ಅಪಹರಿಸಿದ್ದ ಮೂವರು ಆರೋಪಿಗಳನ್ನು ಶಿವಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಧ್ರ ಮೂಲದ ಗೌಸ್‌ಫಿರ್‌, ಶೇಖ್‌ ಹಫಿಜ್‌, ಎಸ್‌.ಶೇಖ್‌ ಬಂಧಿತರು.

ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಡೈರೆಕ್ಟ್ಸೆ ಲ್ಲಿಂಗ್‌ ಕಂಪನಿಯ ಉದ್ಯೋಗಿ ಕಿರಣ್‌ ಎಂಬಾತನನ್ನು ಡಿ.9ರಂದು ರಾತ್ರಿ ಅಪಹರಿಸಿದ್ದ ಆರೋಪಿಗಳು, ಚಿತ್ತೂರಿನಲ್ಲಿ ಕೂಡಿ ಹಾಕಿದ್ದರು. ಬಳಿಕ ಕಂಪನಿಯ ಮತ್ತೂಬ್ಬ ಉದ್ಯೋಗಿ ಸಂಜೀವ್‌ ನಾಯ್ಕಗೆ ಕರೆ ಮಾಡಿ ಅಪಹರಣ ವಿಷಯ ತಿಳಿಸಿ ಹಣ ಕೊಡದೆ ಹೋದರೆ ಕಾರ್ತಿಕ್‌ನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು.

ಈ ಕುರಿತು ಸಂಜೀವ್‌ ನಾಯ್ಕ ನೀಡಿದ ದೂರಿನ ಅನ್ವಯ ಶಿವಾಜಿನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಇನ್ಸ್‌ಪೆಕ್ಟರ್‌ ತಬ್ರೇಜ್‌ ಹಾಗೂ ಪಿಎಸ್‌ಐ ಆರ್‌.ಶೀಲಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಮುಳಬಾಗಿಲು ಪಟ್ಟಣದಲ್ಲಿ ಸ್ನೇಹಿತನ ಮನೆಯಲ್ಲಿ ಹಫಿಜ್‌
ಇರುವುದು ಸಿಡಿಆರ್‌ ಮಾಹಿತಿಯಿಂದ ಗೊತ್ತಾಯಿತು.

ಹೀಗಾಗಿ ದೂರುದಾರ ಸಂಜೀವ್‌ ನಾಯ್ಕನಿಂದ ಕರೆ ಮಾಡಿಸಿ ಹಣ ತರುತ್ತಿರುವುದಾಗಿ ತಿಳಿಸಿ ಮಫ್ತಿಯಲ್ಲಿ ಅಲ್ಲಿಗೆ ತೆರಳಿದ ತಂಡ, ಹಫಿಜ್‌ ಹಾಗೂ ಗೌಸ್‌ ಫಿರ್‌ನನ್ನು ಬಂಧಿಸಿದೆ. ಬಳಿಕ ಅವರು ನೀಡಿದ ಮಾಹಿತಿ ಮೇರೆಗೆ ಚಿತ್ತೂರಿನಲ್ಲಿ ಕಾರ್ತಿಕ್‌ ನನ್ನು ರಕ್ಷಿಸಿ ಮತ್ತೂಬ್ಬ ಆರೋಪಿ ಶೇಖ್‌ನನ್ನು ಕೂಡ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಹಣ ವಾಪಸ್‌ ನೀಡದ್ದಕ್ಕೆ ಸಂಚು: ಒಬ್ಬರನ್ನು ಕಂಪನಿಯ ಸದಸ್ಯನನ್ನಾಗಿ ಸೇರಿಸಿದರೆ ಕಮಿಷನ್‌ ನೀಡುವ ಚೈನ್‌ ಲಿಂಕ್‌ ಮಾದರಿಯ ಮಾರ್ಕೆಟಿಂಗ್‌ ವ್ಯವಹಾರ ನಡೆಸುತ್ತಿದ್ದ ವಿಹಾನ್‌ ಡೈರೆಕ್ಟ್ ಸೆಲ್ಲಿಂಗ್‌ ಕಂಪನಿಯಲ್ಲಿ ಹಸೀನಾ ಎಂಬಾಕೆ ಕೆಲಸ ಮಾಡುತ್ತಿದ್ದಳು. ಆಕೆಯ ಮಾತು ಕೇಳಿದ್ದ ಶೇಖ್‌ ಹಫಿಜ್‌, ಶೇಖ್‌ ಮುಜಾಹೀದ್‌, ಆದಂ ಬಾಷಾ, ಪಿ.ಫ‌ಯಾಜ್‌, ಅಬ್ದುಲ್‌ ಖಯಾಮ್‌, ಕಿರಣ್‌ ಕುಮಾರ್‌ ಆಚಾರ್ಯ, ಐದು ಕಂತುಗಳಲ್ಲಿ ತಲಾ 2.5 ಲಕ್ಷ ಹಣ ತೊಡಗಿಸಿದ್ದರು.

ಬಂಧಿತ ಆರೋಪಿಗಳು ಕೆಲವರನ್ನು ಕಂಪನಿಗೆ ಸೇರಿಸಿದ್ದಕ್ಕೆ ಎರಡು ವಾರ ಕಮಿಷನ್‌ ಕೂಡ ಬಂದಿತ್ತು. ಆದರೆ ಹೊಸ ಸದಸ್ಯರು ನೋಂದಣಿ ಮಾಡದ ಕಾರಣ ಕಂಪನಿ ಕಮಿಷನ್‌ ನಿಲ್ಲಿಸಿತ್ತು. ಹೀಗಾಗಿ ಆರೋಪಿಗಳು ಕಂಪನಿಗೆ ತೆರಳಿ ವಿಚಾರಿಸಿದಾಗ ಇದೊಂದು ಚೈನ್‌ ಲಿಂಕ್‌ ವ್ಯವಹಾರ ಹಾಗೂ ಹಸೀನಾ ಕೆಲಸ ಬಿಟ್ಟಿರುವುದು ಗೊತ್ತಾಗಿತ್ತು. ಈ ವೇಳೆ ಹಸೀನಾ ನಮಗೆ ಸುಳ್ಳು ಹೇಳಿ ಹಣ ಕಟ್ಟಿಸಿಕೊಂಡು ವಂಚಿಸಿದ್ದಾರೆ. ಚೈನ್‌ ಲಿಂಕ್‌ ವ್ಯವಹಾರ ಎಂದು ನಮಗೆ ಗೊತ್ತಿರಲಿಲ್ಲ. ಹೀಗಾಗಿ ನಾವು ಕಟ್ಟಿರುವ ಹಣ ವಾಪಸ್‌ ಕೊಡಿ ಎಂದು ಕಂಪನಿಯ ಅಧಿಕಾರಿಗಳ ಬಳಿ ಹಫಿಸ್‌ ಹಾಗೂ ಇತರರು ಹೇಳಿದ್ದಾರೆ. ಆದರೆ, ಅಧಿಕಾರಿಗಳು ತಲೆಕೆಡಿಸಿಕೊಂಡಿರಲಿಲ್ಲ. ಹೀಗಾಗಿ, ಕಾರ್ತಿಕ್‌ನನ್ನು ಅಪಹರಿಸಿ ಹಣ ವಾಪಾಸ್‌ ಪಡೆದುಕೊಳ್ಳುವ ಸಂಚು ರೂಪಿಸಿದ್ದರು. ಅದರಂತೆ ಡಿ.9ರಂದು ಕ್ವೀನ್ಸ್‌ ರಸ್ತೆಯಲ್ಲಿ ನಡೆದ ಕಂಪನಿ ಗ್ರಾಹಕರ ಸಭೆಯಲ್ಲಿ ಪಾಲ್ಗೊಂಡು ಆ ಬಳಿಕ ಕಾರ್ತಿಕ್‌ನನ್ನು ಅಪಹರಿಸಿದ್ದರು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.