ಎನ್‌ಎಂಐಟಿಯಿಂದ ಕಿಟ್‌ ವಿತರಣೆ


Team Udayavani, May 8, 2020, 4:00 PM IST

ಎನ್‌ಎಂಐಟಿಯಿಂದ ಕಿಟ್‌ ವಿತರಣೆ

ಬೆಂಗಳೂರು: ಲಾಕ್‌ಡೌನ್‌ನಿಂದಾಗಿ ತಮ್ಮ ಬೆಳೆಗಳಿಗೆ ತಕ್ಕುದಾದ ಬೆಲೆ ಸಿಗದೆ ನಮ್ಮ ರೈತ ಬಾಂಧವರು ಕಂಗಾಲಾಗಿದ್ದಾರೆ. ಈ ಸಂದರ್ಭದಲ್ಲಿ ಕೃಷಿ ಚಟುವಟಿಕೆಗಳಿಗೆ ಆಧಾರ ವಾಗಿರುವ ಕೃಷಿಕಾರ್ಮಿಕರ ಯೋಗಕ್ಷೇಮ ಕಾಪಾಡುವುದು ನಾಗರಿಕ ಸಮಾಜದ ಹೊಣೆ ಎಂದು ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದ (ಎನ್‌ಎಂಐಟಿ) ಹಿರಿಯ ಸಲಹೆಗಾರ ಹಾಗೂ ಕರ್ನಾಟಕ ಕೇಂದ್ರೀಯ ವಿವಿ ಕುಲಾಧಿಪತಿ ಪ್ರೊ. ಎನ್‌.ಆರ್‌. ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.

ಯಲಹಂಕದ ಎನ್‌ಎಂಐಟಿ “ಉನ್ನತ ಭಾರತ ಅಭಿಯಾನ’ದ ಘಟಕ ಹಮ್ಮಿಕೊಂಡಿದ್ದ ಆಹಾರ ಪದಾರ್ಥ ಹಾಗೂ ಅಗತ್ಯ ವಸ್ತುಗಳ ಕಿಟ್‌ ವಿತರಣೆ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಬಡತನ, ಅಸಮಾನತೆ ಹಾಗೂ ನಿರುದ್ಯೋಗ ಸಂಪೂರ್ಣ ನಿವಾರಣೆಯಾಗಬೇಕು. ಆಗಲೇ ಅಭಿವೃದ್ಧಿ ಸಾಧ್ಯ ಎಂದರು. ಎನ್‌ಎಂಐಟಿ ಪ್ರಾಂಶುಪಾಲ ಡಾ. ಎಚ್‌.ಸಿ.ನಾಗರಾಜ್‌ ಮಾತನಾಡಿ, ಈ ಘಟಕ ನಮ್ಮ ಶಿಕ್ಷಣ ಸಂಸ್ಥೆಯ ನೆರೆಹೊರೆಯ ಬೆಟ್ಟಹಲಸೂರು, ದೊಡ್ಡಜಾಲ, ತರುಹುಣಿಸೆ, ತಳಗವಾರ ಹಾಗೂ ಮುತ್ತೂರು ಗ್ರಾಮಗಳಲ್ಲಿನ ಬಡ ಕೃಷಿಕಾರ್ಮಿಕ ಕುಟುಂಬಗಳಿಗೆ ಈ ತನಕ ಸುಮಾರು 5 ಸಾವಿರ ದಿನಸಿ ಹಾಗೂ ತರಕಾರಿ ಪ್ಯಾಕೆಟ್‌ಗಳನ್ನು ವಿತರಿಸಿದೆ ಎಂದು ತಿಳಿಸಿದರು.

ಉನ್ನತ ಭಾರತ ಅಭಿಯಾನ 2014ರಲ್ಲಿ ದೆಹಲಿಯ ಇಂಡಿಯನ್‌ ಇನ್ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ ಗ್ರಾಮೀಣಾಭಿವೃದ್ಧಿಗೆ ಆರಂಭಿಸಿದ ಆಂದೋಲನ. ಗ್ರಾಮೀಣ ಸಮಸ್ಯೆಗಳಿಗೆ ಸ್ಪಂದನೆ ಮಾತ್ರವಲ್ಲದೆ, ಹಳ್ಳಿಗರಿಗೆ ಪರಿಸರಸ್ನೇಹಿ ತಂತ್ರಜ್ಞಾನವನ್ನು ಪರಿಚಯಿಸುವುದೂ ಈ ಆಂದೋಲನದ ಗುರಿ ಎಂದು ಘಟಕದ ಶಿಕ್ಷಕ ಸಂಯೋಜಕ ಪ್ರೊ. ಎಂ.ಎನ್‌. ತಿಪ್ಪೇಸ್ವಾಮಿ ವಿವರಿಸಿದರು. ಸಹಾಯಕ ಪ್ರಾಧ್ಯಾಪಕ ಡಾ. ಟಿ.ಆರ್‌. ವಿನಯ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.