ಕೊಕ್ಕಡ ಯುವಕರ ಸಮಯೋಚಿತ ಕಾರ್ಯ


Team Udayavani, Apr 5, 2018, 12:22 PM IST

blore-5.jpg

ನೆಲ್ಯಾಡಿ: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬಸ್ಸಿನಲ್ಲಿ ಆಗಮಿಸಿ ಪ್ರಾಣ ಕಳೆದುಕೊಳ್ಳುವ ಯೋಚನೆಯಲ್ಲಿದ್ದ ಬೆಂಗಳೂರಿನ ಮಹಿಳೆ ಹಾಗೂ ಮಕ್ಕಳನ್ನು ಕೊಕ್ಕಡದ ಯುವಕರು ಸಾವಿನ ದವಡೆಯಿಂದ ಪಾರು ಮಾಡಿ ಮರಳಿ ಮನೆಗೆ ಸೇರುವಂತೆ ಮಾಡಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಕೊಕ್ಕಡದ ಯುವಕರ ಸಮಯೋಚಿತ ಕಾರ್ಯಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮೆಚ್ಚುಗೆ ಸೂಚಿಸಿದ್ದಾರೆ.

ಕೊಕ್ಕಡದ ರಫೀಕ್‌ ಬೋಳದಬೈಲು ಹಾಗೂ ಅಝೀಜ್‌ ಬೆಂಗಳೂರಿನಿಂದ ಬಸ್ಸಿನಲ್ಲಿ ಧರ್ಮಸ್ಥಳಕ್ಕೆ ವಾಪಸಾಗುತ್ತಿದ್ದ ವೇಳೆ ತಮ್ಮ ಪಕ್ಕದ ಸೀಟಿನಲ್ಲಿ ಕುಳಿತಿದ್ದ ಮಹಿಳೆ ಹಾಗೂ ಮಕ್ಕಳು ಅಳುತ್ತಾ ಇರುವುದನ್ನು ಸೂಕ್ಷ್ಮ ವಾಗಿ ಗಮನಿಸಿದ್ದರು. ಮಹಿಳೆ ಯಾರೊಂದಿಗೋ ಮೊಬೈಲ್‌ನಲ್ಲಿ ಅಳುತ್ತಾ ಮಾತನಾಡಿ, ತಾನು ಮಕ್ಕಳೊಂದಿಗೆ ಸಾಯಲು ಹೊರಟಿದ್ದಾಗಿ ಹೇಳುತ್ತಿದ್ದುದನ್ನು ಗಮನಿಸಿದ ರಫಿಕ್‌ ಹಾಗೂ ಅಝೀಜ್‌ ಮಹಿಳೆಯನ್ನು ಮಾತನಾಡಿಸಿದರು.

ಆಗ ಆಕೆ ತಾನು ರಾಮನಗರ ನಿವಾಸಿ ಚಂದ್ರಕಲಾ, ತನ್ನ ಮಕ್ಕಳಾದ ಭಾವನಾ ಹಾಗೂ ವಿದ್ಯಾಶ್ರೀ ಜತೆಗೆ ಗಂಡನ ಹೆತ್ತವರ ಕಿರುಕುಳ ತಡೆಯಲಾರದೆ ಯಾರಲ್ಲೂ ಹೇಳದೆ ಬಂದಿರುವುದಾಗಿ ತಿಳಿಸಿದರು. ಕೊಟ್ಟಿಗೆಹಾರ ಬಳಿ ಬಸ್ಸಿನಿಂದ ಇಳಿದ ಮಹಿಳೆಯನ್ನು ಹಿಂಬಾಲಿಸಿ ಗಮನಿಸುತ್ತಿದ್ದ ಈ ಯುವಕರಿಗೆ ಮಹಿಳೆಯಲ್ಲಿ ಉಳಿದಿರುವ ಹಣ ಕೇವಲ 20 ರೂ. ಎಂದು ತಿಳಿದಾಗ ಉಪಾಹಾರ ಹಾಗೂ ನೀರು ತೆಗೆದುಕೊಟ್ಟಿದ್ದಾರೆ. ಬಳಿಕ ಮಹಿಳೆಯ ಪತಿಯ ಮೊಬೈಲ್‌ ಸಂಖ್ಯೆ ಪಡೆದುಕೊಂಡು ಕರೆ ಮಾಡಿದರು. ಮಹಿಳೆಯ ಪತಿ ಕೂಡಲೇ ಬೆಂಗಳೂರಿನಿಂದ ಹೊರಟು ಬರುವುದಾಗಿ ತಿಳಿಸಿದ್ದು, ಆ ತನಕ ಪತ್ನಿ ಮತ್ತು ಮಕ್ಕಳನ್ನು ರಕ್ಷಿಸಲು ಮನವಿ ಮಾಡಿಕೊಂಡಿದ್ದರು.

ಮಾಧ್ಯಮ ಸಂಪರ್ಕ: ಬೆಳ್ತಂಗಡಿ ತಾಲೂಕು ಕೋಮು ಸೂಕ್ಷ್ಮ ಪ್ರದೇಶವಾದ್ದರಿಂದ ಯುವಕರು ಮಹಿಳೆ ಮತ್ತು ಮಕ್ಕಳೊಂದಿಗೆ ಧರ್ಮಸ್ಥಳಕ್ಕೆ ತೆರಳಿದರು. ತಪ್ಪು ತಿಳುವಳಿಕೆಯಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗಬಾರದು ಎನ್ನುವ ಮುಂಜಾಗ್ರತೆಯಿಂದ ಕೊಕ್ಕಡದ ಮಾಧ್ಯಮ ವರದಿಗಾರರನ್ನು ಸಂಪರ್ಕಿಸಿದರು.

ಮಾಧ್ಯಮ ವರದಿಗಾರರು ಮಂಗಳೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರಿಗೆ ಮಾಹಿತಿ ನೀಡಿದರು. ಮಹಿಳೆ ಮತ್ತು ಮಕ್ಕಳೊಂ ದಿಗೆ ಯುವಕರು ಬಸ್ಸಿನಿಂದ ಇಳಿಯುವ ಹೊತ್ತಿಗೆ ಪೊಲೀಸ್‌ ವಾಹನ ಸಿದ್ಧವಾಗಿದ್ದು, ಅವರನ್ನು ಪೊಲೀಸ್‌ ಸುಪರ್ದಿಗೆ ಒಪ್ಪಿಸಲಾಯಿತು. 

ಬುಧವಾರ ಬೆಳಗ್ಗೆ ಬೆಂಗಳೂರಿನಿಂದ ಬಂದ ಪತಿಯ ಜತೆಯಲ್ಲಿ ಮಹಿಳೆ ಹಾಗೂ ಮಕ್ಕಳನ್ನು ಕಳುಹಿಸಿಕೊಡಲಾಗಿದೆ. ಮಕ್ಕಳೊಂದಿಗೆ ಸಾಯಲು ಹೋಗುತ್ತಿದ್ದೇನೆ ಅನ್ನುವ ಮಹಿಳೆಯ ಮಾತುಗಳನ್ನು ಕೇಳಿಸಿಕೊಂಡು ಸಮಯೋಚಿತವಾಗಿ ವರ್ತಿಸಿ ಮೂರು
ಜೀವಗಳನ್ನು ಉಳಿಸಿದ ಯುವಕರ ಕಾರ್ಯಕ್ಕೆ ಎಸ್‌ಪಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

ಮನೆಯಲ್ಲಿ ಹಿಂದಿನ ರಾತ್ರಿ ನಡೆದ ಘಟನೆಯಿಂದ ನನ್ನ ಹೆಂಡತಿ, ಮಕ್ಕಳನ್ನು ಕರೆದುಕೊಂಡು ಹೋಗಿದ್ದು, ಎಲ್ಲಿ ಹೋಗಿದ್ದಾರೆ ಅನ್ನುವ ಮಾಹಿತಿಯೇ ನಮಗೆ ಇರಲಿಲ್ಲ. ಕೊಕ್ಕಡದ ಯುವಕರ ಸಾಂತ್ವನದಿಂದ ಹೆಂಡತಿ ಮಕ್ಕಳನ್ನು ಮರಳಿ ಪಡೆಯುವಂತಾಯಿತು. ರಕ್ಷಿಸಿದ ಯುವಕರಿಗೆ ಒಳಿತಾಗಲಿ. 
ಶಿವಾಜಿ ರಾವ್‌, ಮಹಿಳೆಯ ಪತಿ

ಗುರುಮೂರ್ತಿ ಎಸ್‌. ಕೊಕ್ಕಡ

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.