ಕೊತ್ತನೂರು ಕೆರೆ ಅಭಿವೃದ್ಧಿಯ ಭರವಸೆ
Team Udayavani, Jun 18, 2018, 11:49 AM IST
ಬೆಂಗಳೂರು: ಕೊತ್ತನೂರು ಕೆರೆ ಅಭಿವೃದ್ಧಿಗೆ ಬಿಡಿಎ ಹಾಗೂ ಬಿಬಿಎಂಪಿ ವತಿಯಿಂದ 1 ಕೋಟಿ ರೂ. ಅನುದಾನ ದೊರಕಿಸಿಕೊಡುವ ಭರವಸೆಯನ್ನು ಕೇಂದ್ರ ಸಚಿವ ಅನಂತಕುಮಾರ್ ನೀಡಿದ್ದಾರೆ.
ಅದಮ್ಯ ಚೇತನ ಸಂಸ್ಥೆ ವತಿಯಿಂದ ಭಾನುವಾರ ಕೊತ್ತನೂರು ಕೆರೆಯ ಆವರಣದಲ್ಲಿ ಆಯೋಜಿಸಿದ್ದ 129ನೇ ಹಸಿರು ಭಾನುವಾರ-ಸಸ್ಯಾಗ್ರಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಗರದ ಪರಿಸರ ಸಮತೋಲನಕ್ಕೆ ಕೆರೆಗಳ ಕೊಡುಗೆ ಮಹತ್ವಪೂರ್ಣವಾಗಿದ್ದು, ಕೆರೆಗಳ ಸಂಕರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಕೆರೆಗಳ ಅಭಿವೃದ್ಧಿಗೆ ರೂಪಿಸಿರುವ ಯೋಜನೆಯಡಿಯಲ್ಲಿ ಕೆರೆಗಳು ಹಾಗೂ ನೀರಿನ ಮೂಲಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿದೆ. ಅದೇ ರೀತಿ ಕೊತ್ತನೂರು ಕೆರೆಯ ಅಭಿವೃದ್ಧಿಪಡಿಸುವ ಬಿಡಿಎ ಹಾಗೂ ಪಾಲಿಕೆಯ ಆಯುಕ್ತರೊಂದಿಗೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು. ನಂತರ ಅನಂತಕುಮಾರ್ ಅವರು ಕೊತ್ತನೂರು ದಿಣ್ಣೆಯ ಶಾಲೆಯೊಂದರ ಉದ್ಘಾಟನಾ ಕಾರ್ಯಕ್ರಮ ನೆರೆವೇರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ