ಕೆಪಿಸಿಸಿ – ಹೈಕಮಾಂಡ್‌ ಜತೆಗಿನ ಕೊಂಡಿ


Team Udayavani, Nov 26, 2018, 12:29 PM IST

kpcc.jpg

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ರಾಜಕೀಯ ಆರಂಭದ ದಿನಗಳಿಂದಲೂ ಕೇಂದ್ರದ ನಾಯಕರೊಂದಿಗೆ ನೇರ ಸಂಪರ್ಕ ಹೊಂದಿದ ರಾಜಕಾರಣಿ ಜಾಫ‌ರ್‌ ಷರೀಫ್. ಆರು ದಶಕಗಳ ಕಾಲ ರಾಜ್ಯ ಕಾಂಗ್ರೆಸ್‌ ಹಾಗೂ ಹೈ ಕಮಾಂಡ್‌ ನಾಯಕರ ನಡುವೆ ಕೊಂಡಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.

ಮೂಲತಃ ಚಿತ್ರದುರ್ಗ ಜಿಲ್ಲೆಯವರೇ ಆಗಿದ್ದ ಎಸ್‌.ನಿಜಲಿಂಗಪ್ಪ ಅವರು ಎಐಸಿಸಿ ಅಧ್ಯಕ್ಷರಾಗಿದ್ದರಿಂದ ಅವರ ಮೂಲಕ ನೇರವಾಗಿ ರಾಷ್ಟ್ರೀಯ ನಾಯಕರ ಜೊತೆ ಗುರುತಿಸಿಕೊಳ್ಳುವಲ್ಲಿ ಜಾಫ‌ರ್‌ ಷರೀಫ್ ಯಶಸ್ವಿಯಾಗಿದ್ದರು. ಕಾಂಗ್ರೆಸ್‌ ಇಬ್ಭಾಗವಾದಾಗ ಇಂದಿರಾ ಕಾಂಗ್ರೆಸ್‌ ಜೊತೆ ಗುರುತಿಸಿಕೊಂಡಿದ್ದರಿಂದ ನೆಹರು ಮನೆತನಕ್ಕೂ ಬಹುಬೇಗ ಹತ್ತಿರದವರಾದರು.

ಇದು ರಾಜ್ಯ ಕಾಂಗ್ರೆಸ್‌ನಲ್ಲಿ ಹೈ ಕಮಾಂಡ್‌ ಜೊತೆಗೆ ನೇರ ಸಂಪರ್ಕ ಹೊಂದುವ ಕೊಂಡಿಯಾಗಿ ಕೆಲಸ ಮಾಡಲು ಅವರಿಗೆ ಹೆಚ್ಚು ಅನುಕೂಲವಾಯಿತು. ಜಾಫ‌ರ್‌ ಷರೀಫ್ ಕೂಡ ಇದನ್ನು ಅಷ್ಟೇ ಜಾಣ ನಡೆಯಿಂದ ಉಳಿಸಿಕೊಂಡಿದ್ದರು. ದೇವರಾಜ ಅರಸು ಅವರಿಂದ ಹಿಡಿದು ಸಿದ್ದರಾಮಯ್ಯನವರವರೆಗೂ ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಯಾರೇ ಮುಖ್ಯಮಂತ್ರಿಯಾದರೂ, ಅವರಿಗೆ ನೇರವಾಗಿ ಸಲಹೆ ಸೂಚನೆ ನೀಡುವ ಶಕ್ತಿಯನ್ನು ಜಾಫ‌ರ್‌ ಷರಿಫ್ ಬೆಳೆಸಿಕೊಂಡಿದ್ದರು.

ಬಂಡಾಯದ ನಾಯಕ: ಜಾಫ‌ರ್‌ ಷರೀಫ್ ನೇರ ನುಡಿಯಿಂದಲೇ ಹೆಸರು ವಾಸಿಯಾದವರು. ರಾಜ್ಯದಲ್ಲಿ ಕಾಂಗ್ರೆಸ್‌ನ ಯಾರೇ ಮುಖ್ಯಮಂತ್ರಿಯಾದರೂ, ಅವರ ಕಾರ್ಯ ವೈಖರಿಯ ಬಗ್ಗೆ ನೇರವಾಗಿಯೇ ಆರೋಪ ಮಾಡುವ ಛಾತಿಯುಳ್ಳವರಾಗಿದ್ದರು. ವೀರೇಂದ್ರ ಪಾಟೀಲ್‌, ಎಸ್‌.ಬಂಗಾರಪ್ಪ, ವೀರಪ್ಪ ಮೊಯಿಲಿ, ಎಸ್‌.ಎಂ. ಕೃಷ್ಣ ಹಾಗೂ ಸಿದ್ದರಾಮಯ್ಯ ಸೇರಿದಂತೆ ಯಾರೇ ಅಧಿಕಾರದಲ್ಲಿದ್ದರೂ, ಅವರ ಆಡಳಿತದಲ್ಲಿ ವ್ಯತ್ಯಾಸಗಳು ಕಂಡು ಬಂದಾಗ ಬಹಿರಂಗವಾಗಿಯೇ ಟೀಕೆ ಮಾಡುವ ವ್ಯಕ್ತಿತ್ವ ಬೆಳೆಸಿಕೊಂಡಿದ್ದರು.

ಜಾಫ‌ರ್‌ ಷರೀಫ್ ಅವರು ನಮ್ಮನ್ನು ಅಗಲಿದ ಸುದ್ದಿ ಕೇಳಿ ಆಘಾತವಾಗಿದೆ. ಭಾರತೀಯ ರೈಲ್ವೆಗೆ ಆಧುನಿಕ ಸ್ಪರ್ಶ ನೀಡುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರು, ಕರ್ನಾಟಕಕ್ಕೆ ಅನೇಕ ಹೊಸ ರೈಲು ಯೋಜನೆಗಳನ್ನು ತಂದಿದ್ದರು.
-ಡಾ.ಜಿ.ಪರಮೇಶ್ವರ್‌, ಉಪ ಮುಖ್ಯಮಂತ್ರಿ

ರಾಷ್ಟ್ರದ ಅತ್ಯಂತ ಹಿರಿಯ ಕಾಂಗ್ರೆಸ್‌ ನಾಯಕ ಸಿ.ಕೆ. ಜಾಫ‌ರ್‌ ಷರೀಫ್ ಕನ್ನಡಾಂಬೆಯ ಮಗನಾಗಿದ್ದರು. ರಾಷ್ಟ್ರ ಕಂಡ ಅತ್ಯಂತ ಯಶಸ್ವಿ ರೈಲ್ವೆ ಸಚಿವರಾಗಿ ರಾಜ್ಯ ಹಾಗೂ ರಾಷ್ಟ್ರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ರಾಷ್ಟ್ರ ಮಟ್ಟದಲ್ಲಿ ಜಾತ್ಯಾತೀತ ನಾಯಕರಾಗಿದ್ದರು.
-ದಿನೇಶ್‌ ಗುಂಡೂರಾವ್‌, ಕೆಪಿಸಿಸಿ ಅಧ್ಯಕ್ಷ

ಅಂಬರೀಶ್‌ ನಿಧನರಾದ ದುಃಖದಿಂದ ಹೊರ ಬರುವ ಮೊದಲೇ, ಜಾಫ‌ರ್‌ ಷರೀಫ್ ನಿಧನದ ಸುದ್ದಿ ಅತೀವ ದುಃಖ ಉಂಟು ಮಾಡಿದೆ. ಅವರ ಅಗಲಿಕೆ ರಾಜ್ಯಕ್ಕೆ, ಕಾಂಗ್ರೆಸ್‌ಗೆ ತುಂಬಲಾರದ ನಷ್ಟ. ಎಲ್ಲ ಸಮುದಾಯದವರ ಜತೆ ಬಾಂಧವ್ಯ ಹೊಂದಿದ್ದ ಜಾತ್ಯಾತೀತ ನಾಯಕರಾಗಿದ್ದರು.
-ಈಶ್ವರ್‌ ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.