ಚುನಾವಣಾಧಿಕಾರಿಗಳಿಂದ ಕೆಪಿಸಿಸಿ ಕಚೇರಿ ಪರಿಶೀಲನೆ
Team Udayavani, Apr 3, 2019, 3:00 AM IST
ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಭದ್ರತೆಯ ದೃಷ್ಟಿಯಲ್ಲಿ ಚುನಾವಣಾಧಿಕಾರಿಗಳು ಕೆಪಿಸಿಸಿ ಕಚೇರಿಯನ್ನು ತಪಾಸಣೆ ಮಾಡಿ ತೆರಳಿದರು.
ಚುನಾವಣಾಧಿಕಾರಿಗಳು ಪೊಲೀಸ್ ಸಿಬ್ಬಂದಿಯೊಂದಿಗೆ ತೆರಳಿ ಪಕ್ಷದ ಕಚೇರಿಯ ಪ್ರವೇಶ ದ್ವಾರದಲ್ಲಿ ಅಳವಡಿಸಿರುವ ಮೆಟಲ್ ಡಿಕೆಕ್ಟರ್, ಸಿಸಿ ಕ್ಯಾಮರಾಗಳು ಸರಿಯಾಗಿ ಕೆಲಸ ಮಾಡುತ್ತಿರುವ ಬಗ್ಗೆ ಪರಿಶೀಲನೆ ನಡೆಸಿದರು.
ಈ ಕುರಿತು ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಠೊಡ್ ಮಾತನಾಡಿ, ಚುನಾವಣೆ ವೇಳೆ ಚುನಾವಣಾಧಿಕಾರಿಗಳು ಹಾಗೂ ಗುಪ್ತಚರ ಇಲಾಖೆಯ ಅಧಿಕಾರಿಗಳು ರಾಜಕೀಯ ಪಕ್ಷಗಳ ಕಚೇರಿಗಳನ್ನು ಪರಿಶೀಲನೆ ನಡೆಸುವುದು ಸಾಮಾನ್ಯ.
ಕಾಂಗ್ರೆಸ್ ಕಚೇರಿ ಪರಿಶೀಲನೆ ನಡೆಸಿದಂತೆ ಜೆಡಿಎಸ್ ಹಾಗೂ ಬಿಜೆಪಿ ಕಚೇರಿಗಳನ್ನೂ ಪರಿಶೀಲನೆ ನಡೆಸುತ್ತಾರೆ. ಚುನಾವಣೆ ವೇಳೆ ಪಕ್ಷದ ಕಚೇರಿಗಳಲ್ಲಿ ರಾಜಕೀಯ ಚಟುವಟಿಕೆ ಹಾಗೂ ಗಣ್ಯವ್ಯಕ್ತಿಗಳ ಆಗಮನ ಸಂದರ್ಭ ಇರುವುದರಿಂದ ಭದ್ರತೆ ದೃಷ್ಟಿಯಿಂದ ಈ ರೀತಿಯ ಪರಿಶೀಲನೆ ನಡೆಸಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ