ಕೆಪಿಎಸ್ಸಿ ಅನರ್ಹರು ಔಟ್;ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಮುದ್ರೆ
Team Udayavani, Apr 12, 2018, 6:00 AM IST
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಮೂಲಕ 1998, 1999 ಮತ್ತು 2004ನೇ ಸಾಲಿನಲ್ಲಿ ನಡೆಸಿದ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಯ “ಅಕ್ರಮ ಫಲಾನುಭವಿ’ ಅಧಿಕಾರಿಗಳನ್ನು ಪತ್ತೆ ಹಚ್ಚಿ ಅರ್ಹರಿಗೆ ಅವಕಾಶ ನೀಡುವಂತೆ ಹೈಕೋರ್ಟ್ 2016ರಲ್ಲಿ ನೀಡಿದ್ದ ತೀರ್ಪನ್ನು ಸುಪ್ರೀಂಕೋರ್ಟ್ ಬುಧವಾರ ಎತ್ತಿ ಹಿಡಿದಿದೆ.
ಇದರಿಂದಾಗಿ ಈ ಮೂರು ವರ್ಷಗಳಲ್ಲಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಅಕ್ರಮವಾಗಿ ನೇಮಕಗೊಂಡ ಹಲವರು ಹುದ್ದೆ ಕಳೆದುಕೊಳ್ಳಬೇಕಿದ್ದು, ಕೆಲವರ ಸ್ಥಾನಪಲ್ಲಟವಾಗಲಿದೆ. ಅಲ್ಲದೇ, ಈ ಅವಧಿಯಲ್ಲಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗೆ ನೇಮಕಗೊಂಡು ನಂತರ ಐಎಎಸ್ಗೆ ಮತ್ತು ಹಿರಿಯ ಶ್ರೇಣಿಗೆ ಬಡ್ತಿ ಪಡೆದ ಕೆಲವು ಅಭ್ಯರ್ಥಿಗಳು ಹಿಂಬಡ್ತಿ ಪಡೆಯಲಿದ್ದಾರೆ.
ಹೈಕೋರ್ಟ್ ತೀರ್ಪನ್ನು ರಾಜ್ಯ ಸರ್ಕಾರ ಮತ್ತು ಕೆಪಿಎಸ್ಸಿ ಯಾವ ರೀತಿ ಜಾರಿಗೊಳಿಸುತ್ತದೆ ಎಂಬುದರ ಮೇಲೆ ಹುದ್ದೆ ಕಳೆದುಕೊಳ್ಳುವವರು ಮತ್ತು ಸ್ಥಾನಪಲ್ಲಟಗೊಳ್ಳುವ ಅಧಿಕಾರಿಗಳ ಸಂಖ್ಯೆ ನಿರ್ಧಾರವಾಗಲಿದೆ. ಮೂಲಗಳ ಪ್ರಕಾರ ಸುಮಾರು 50 ಮಂದಿ ಹುದ್ದೆ ಕಳೆದುಕೊಳ್ಳುವ ಅತಂಕಕ್ಕೆ ಸಿಲುಕಿದ್ದಾರೆ.
ಈ ಕುರಿತಂತೆ 2016ರ ಜೂನ್ ತಿಂಗಳಲ್ಲಿ ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಐಎಎಸ್ ಅಧಿಕಾರಿ ಗೋಪಾಲಕೃಷ್ಣ ಮತ್ತಿತರರು ಸಲ್ಲಿಸಿದ್ದ ವಿಶೇಷ ಮೇಲ್ಮನವಿ ( ಎಸ್ಎಲ್ಪಿ) ಅರ್ಜಿಗಳನ್ನು ವಜಾಗೊಳಿಸಿದ ನ್ಯಾಯಮೂರ್ತಿ ಆದರ್ಶ ಕುಮಾರ್ ಗೋಯಲ್ ಹಾಗೂ ನ್ಯಾಯಮೂರ್ತಿ ರೋಹrನ್ ಫಾಲಿ ನಾರಿಮನ್ ಅವರಿದ್ದ ಪೀಠ, ಹೈಕೋರ್ಟ್ ಆದೇಶವನ್ನು ಯತಾಸ್ಥಿತಿ ಪಾಲಿಸಬೇಕು ಎಂದು ನಿರ್ದೇಶಿಸಿದೆ. ಹೈಕೋರ್ಟ್ ಆದೇಶ ಮಾರ್ಪಾಡು ಮಾಡಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ಯಾವುದೇ ರಾಜಿಯೂ ಇಲ್ಲ ಎಂದು ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ