KR Circle ಘಟನೆ: ಮುಳುಗುತ್ತಿದ್ದವರ ರಕ್ಷಣೆಗೆ ಉಟ್ಟ ಸೀರೆಯನ್ನು ಬಿಚ್ಚಿಕೊಟ್ಟ ಮಹಾತಾಯಿ!


Team Udayavani, May 23, 2023, 1:19 PM IST

KR Circle ಘಟನೆ: ಮುಳುಗುತ್ತಿದ್ದವರ ರಕ್ಷಣೆಗೆ ಉಟ್ಟ ಸೀರೆಯನ್ನು ಬಿಚ್ಚಿಕೊಟ್ಟ ಮಹಾತಾಯಿ!

ಬೆಂಗಳೂರು:ಕೆ.ಆರ್‌.ಸರ್ಕಲ್‌ನಲ್ಲಿ ಭಾನುವಾರ ನಡೆದ ಘಟನೆ ಹೃದಯ ವಿದ್ರಾವಕ ಕ್ಷಣಕ್ಕೆ ಸಾಕ್ಷಿ ಆಗಿದೆ. ದಾರಿಯಲ್ಲಿ ಹೋಗುತ್ತಿದ್ದ ಮಹಾ ತಾಯಿ ಒಂದು ಕ್ಷಣ ಯೋಚಿಸದೆ ತನ್ನ ಸೀರೆಯನ್ನು ಬಿಚ್ಚಿಕೊಟ್ಟು ಹಲವರ ಪ್ರಾಣ ಉಳಿಸಿದ್ದಾಳೆ.

ರಾಜಧಾನಿಯ ಅತ್ಯಂತ ಜನದಟ್ಟಣೆ ಪ್ರದೇಶಗಳಲ್ಲಿ ಕೆ.ಆರ್‌. ವೃತ್ತವು ಒಂದು. ಭಾನುವಾರ ಮಧಾಹ್ನ ಸುರಿದ ಮಳೆಗೆ ಈ ವೃತ್ತದ ಅಂಡರ್‌ಪಾಸ್‌ನಲ್ಲಿ ಐದಾರು ಅಡಿ ನೀರು ತುಂಬಿದ್ದು, ಏಕಾಏಕಿ ಬಂದ ಕಾರು ಸಿಕ್ಕಿಕೊಂಡಿತ್ತು. ಕಾರಿನಲ್ಲಿದ್ದ ಕುಟುಂಬದವರು ಸಹಾಯಕ್ಕಾಗಿ ಅರಚಾಡುತ್ತಿದ್ದರು. ಈ ವೇಳೆ ಲೋಕಾಯುಕ್ತ ಕಚೇರಿಯ ಬಳಿ ಇದ್ದ ಪಬ್ಲಿಕ್‌ ಟೀವಿ ವರದಿಗಾರ ನಾಗೇಶ್‌ ಎಂಬುವವರು ಅರಚಾಟ ಕೇಳಿ ಸ್ಥಳಕ್ಕೆ ಬಂದಿದ್ದಾರೆ.

ಅವರ ಜತೆಗಿದ್ದ ಅದೇ ವಾಹಿನಿಯ ಕ್ಯಾಬ್‌ ಚಾಲಕ ವಿಜಯ್‌ ಈಜು ಬರುತ್ತಿದ್ದ ಕಾರಣ ಯೋಚನೆ ಮಾಡದೇ ನೀರಿನೊಳಗೆ ಜಿಗಿದು ಅಲ್ಲಿದ್ದವರ ರಕ್ಷಣೆಗೆ ಮುಂದಾಗಿದ್ದಾರೆ. ಆದರೆ, ಮಳೆ ನೀರಿನಲ್ಲಿ ಸಿಲುಕಿದ್ದವರನ್ನು ಎಳೆದು ತರಲು ಹಗ್ಗ ಅಥವಾ ಇತರೆ ಯಾವುದೇ ಸಲಕರಣೆಗಳು ಇಲ್ಲದೆ ಪರದಾಟ ನಡೆಸಿದ್ದಾರೆ. ಇತ್ತ ನಾಗೇಶ್‌ ಅವರು ರಸ್ತೆಯಲ್ಲಿ ಹೋಗುತ್ತಿದ್ದ ಜನರ ನೆರವು ಕೇಳುತ್ತಿದ್ದಾರೆ. ದೇವರಂತೆ ಬಂದ ಮಹಾತಾಯಿ ಬಂದು ಕಾರಿನಲ್ಲಿ ಸಿಲುಕಿ ಅರಚಾಡುತ್ತಿದ್ದವರನ್ನು ಕಂಡು ಮರುಗಿದ್ದಾರೆ.

ಅವರ ರಕ್ಷಣೆಗೆ ತಾನು ಉಟ್ಟಿದ್ದ ಸೀರೆಯನ್ನು ಏಕಾಏಕಿ ಬಿಚ್ಚಿ ಕೊಟ್ಟಿದ್ದಾರೆ. ಸೀರೆಕೊಟ್ಟ ಮಹಿಳೆಯ ನೆರವಿಗೆ ಬಂದ ಜನರು ನೀರಿನಲ್ಲಿ ಮುಳುಗುತ್ತಿದ್ದವರ ರಕ್ಷಣೆಗೆ ಸೀರೆ ಬಿಚ್ಚಿಕೊಟ್ಟ ಮಹಿಳೆಯನ್ನು ನೋಡಿ ಅಲ್ಲೆ ಇದ್ದ ಮಹಿಳೆಯೊಬ್ಬರು ತಮ್ಮ ದುಪ್ಪಟ್ಟಾವನ್ನು ಕೊಟ್ಟಿದ್ದಾರೆ. ಪಕ್ಕದಲ್ಲಿಯೇ ನಿಂತ ವ್ಯಕ್ತಿಯೊರ್ವ ತನ್ನ ಶರ್ಟ್‌ ಬಿಚ್ಚಿ ಕೊಟ್ಟು ಆಕೆಯನ್ನು ಆಟೋದಲ್ಲಿ ಕೂರಿಸಿ ಮನೆಗೆ ಕಳುಹಿಸಿದ್ದಾರೆ.

ಕಾರಲ್ಲಿದ್ದವರನ್ನು ರಕ್ಷಿಸಿದ ವಿಜಯ್‌: ಕ್ಯಾಬ್‌ ಚಾಲಕ ವಿಜಯ್‌ ಕಾರಿನೊಳಗೆ ಇದ್ದವರನ್ನು ಹೇಗೋ ಕಾರಿನ ಮೇಲೆ ಕೂರಿಸಿ ಜೀವವನ್ನು ಉಳಿಸಿದ್ದಾರೆ. ಇನ್ನೋರ್ವ ಯುವತಿ ಸೀಟಿನ ಮಧ್ಯ ಭಾಗಕ್ಕೆ ಸಿಕ್ಕಿ ಹಾಕಿಕೊಂಡಿದ್ದರಿಂದ ಆಕೆಯ ರಕ್ಷಣೆಗೆ ತುಂಬಾ ಹೊತ್ತು ಒದ್ದಾಡಿ ಕಷ್ಟ ಪಟ್ಟು ಆಕೆಯನ್ನು ಮೇಲೆತ್ತಿ ರಕ್ಷಣಾ ತಂಡಕ್ಕೆ ಒಪ್ಪಿಸಿದ್ದಾರೆ. ಮಾನವೀಯತೆಗೆ ಸಾಕ್ಷಿಯಾದ ಸೀರೆ ಅಂಡರ್‌ಪಾಸ್‌ ಬಳಿಯೇ ಉಂಟು ರಕ್ಷಣೆಗೆಂದು ಆ ಅಪರಿಚಿತ ಮಹಿಳೆ ಬಿಚ್ಚಿಕೊಟ್ಟ ಕೇಸರಿ ಬಣ್ಣದ ಸೀರೆ ಇಂದಿಗೂ ಅಂಡರ್‌ಪಾಸ್‌ ಬಳಿಯೇ ಇದೆ. ಮಧ್ಯರಸ್ತೆಯಲ್ಲಿ ಒಂದು ಕ್ಷಣವೂ ಯೋಚಿಸದೇ ಸೀರೆ ಬಿಚ್ಚಿಕೊಟ್ಟ ಮಹಿಳೆಯ ಮಾನವೀಯತೆಗೆ ಆ ಸೀರೆ ಸಾಕ್ಷಿಯಾದಂತಿದೆ.

ಪಬ್ಲಿಕ್‌ ಟಿವಿಯ ವರದಿಗಾರ ನಾಗೇಶ್‌ ಹಾಗೂ ಕ್ಯಾಬ್‌ ಚಾಲಕ ವಿಜಯ್‌ ಕಣ್ಣಲ್ಲಿ ಹಲವರ ಜೀವ ಉಳಿಸಿದ ಸಂಭ್ರಮಕ್ಕಿಂತ ಆ ಯುವತಿಯ ಪ್ರಾಣ ಉಳಿಸಿಕೊಳ್ಳಲು ಆಗಿಲಿಲ್ಲವಲ್ಲ ಅನ್ನೋ ನೋವು ಹೆಚ್ಚಿತ್ತು. ತನ್ನ ಜೀವ ಪಣಕ್ಕಿಟ್ಟು ಬೇರೆಯವರ ಜೀವನ ಉಳಿಸಲು ವಿಜಯ್‌ ಅವರ ಸಾಹಸ, ಸಾರ್ವಜನಿಕ ಸ್ಥಳದಲ್ಲಿ ಉಟ್ಟ ಸೀರೆಯನ್ನೇ ಬಿಚ್ಚಿಕೊಟ್ಟ ಮಹಾತಾಯಿಯ ಕಾರ್ಯ ನಮ್ಮ ನಡುವೆ ಮಾನವೀಯತೆ ಜೀವಂತವಿದೆ ಎಂಬುದಕ್ಕೆ ಸಾಕ್ಷಿ. ಇವರ ಈ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.