ಎಸ್‌.ಎಂ.ಕೃಷ್ಣ ಪರಿವಾರಕ್ಕೆ ಗಣ್ಯರ ಸಾಂತ್ವನ


Team Udayavani, Jul 31, 2019, 3:10 AM IST

sm-krishna

ಬೆಂಗಳೂರು: ಕೆಫೆ ಕಾಫಿ ಡೇ ಮುಖ್ಯಸ್ಥ, ಉದ್ಯಮಿ ವಿ.ಜಿ.ಸಿದ್ಧಾರ್ಥ ನಿಗೂಢವಾಗಿ ನಾಪತ್ತೆಯಾದ ಹಿನ್ನೆಲೆಯಲ್ಲಿ ಸದಾಶಿವನಗರದಲ್ಲಿರುವ ಅವರ ಮಾವ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ನಿವಾಸಕ್ಕೆ ಗಣ್ಯರು ಆಗಮಿಸಿ ಧೈರ್ಯ ತುಂಬಿದರು.

ಸಿಎಂ ಯಡಿಯೂರಪ್ಪ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಚ್‌.ಡಿ.ಕುಮಾರಸ್ವಾಮಿ, ಜಗದೀಶ್‌ ಶೆಟ್ಟರ್‌, ಮಾಜಿ ಸ್ವೀಕರ್‌ ರಮೇಶ್‌ ಕುಮಾರ್‌, ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ, ಎಂ.ವೀರಪ್ಪ ಮೊಯ್ಲಿ, ಮಾಜಿ ಉಪಮುಖ್ಯಮಂತ್ರಿ ಡಾ ಜಿ.ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗೂಂಡೂರಾವ್‌, ಮಾಜಿ ಶಾಸಕ ಕೆ.ಬಿ.ಕೋಳಿವಾಡ ಆಗಮಿಸಿ ಕುಟುಂಬ ಸದಸ್ಯರಿಗೆ ಸಮಾಧಾನ ಹೇಳಿದರು.

ಮಾಜಿ ಸಚಿವರಾದ ಕೆ.ಜೆ.ಜಾರ್ಜ್‌, ಕೃಷ್ಣಭೈರೇಗೌಡ, ಜಮೀರ್‌ ಅಹ್ಮದ್‌, ಡಿ.ಕೆ.ಶಿವಕುಮಾರ್‌, ಎಚ್‌.ಕೆ.ಪಾಟೀಲ್‌, ಎಂ.ಬಿ.ಪಾಟೀಲ್‌, ಪ್ರಿಯಾಂಕ ಖರ್ಗೆ, ಸಿ.ಎಸ್‌.ಪುಟ್ಟರಾಜು, ಆರ್‌.ರೋಷನ್‌ ಬೇಗ್‌, ಕಾಂಗ್ರೆಸ್‌ ಮುಖಂಡರಾದ ಬಿ.ಎಲ್‌.ಶಂಕರ್‌, ಬಿಜೆಪಿಯ ಮಾಜಿ ಸಚಿವ ರಾಮಚಂದ್ರೇಗೌಡ, ವಿಧಾನಪರಿಷತ್‌ ಸದಸ್ಯ ಕೋಟಾ ಶ್ರೀನಿವಾಸ್‌ ಪೂಜಾರಿ, ಮಾಜಿ ಸದಸ್ಯೆ ತಾರಾ, ಶಾಸಕ ಕುಮಾರ್‌ ಬಂಗಾರಪ್ಪ, ಶ್ರೀರಾಮುಲು, ಆರಗ ಜ್ಞಾನೇಂದ್ರ,

ಮಾಜಿ ಶಾಸಕ ಜೀವರಾಜ್‌, ಅನರ್ಹ ಶಾಸಕರಾದ ಎಸ್‌.ಟಿ.ಸೋಮಶೇಖರ್‌, ಶಿವರಾಮ್‌ ಹೆಬ್ಬಾರ್‌, ಭೈರತಿ ಬಸವರಾಜು, ಎಂಟಿಬಿ ನಾಗರಾಜ್‌, ನಟರಾದ ರಾಘವೇಂದ್ರ ರಾಜ್‌ ಕುಮಾರ್‌, ಶಿವರಾಜ್‌ ಕುಮಾರ್‌, ಪುನೀತ್‌ ರಾಜ್‌ ಕುಮಾರ್‌, ಶ್ರೀನಾಥ್‌ ಸೇರಿ ಇತರ ಚಿತ್ರರಂಗದ ಗಣ್ಯರು ಹಾಗೂ ಲೋಕಾಯುಕ್ತ ವಿಶ್ವನಾಥ್‌ ಶೆಟ್ಟಿ, ರಾಜ್ಯ ಗುಪ್ತಚರ ಇಲಾಖೆ ಐಜಿಪಿ ದಯಾನಂದ, ಕೆಎಸ್‌ಆರ್‌ಪಿ ಎಡಿಜಿಪಿ ಭಾಸ್ಕರ್‌ರಾವ್‌ ಆಗಮಿಸಿ ಕುಟುಂಬ ಸದಸ್ಯರಿಗೆ ಸಮಾಧಾನಪಡಿಸಿ ಧೈರ್ಯ ಹೇಳಿದರು.

ಪೊಲೀಸ್‌ ಬಿಗಿ ಭದ್ರತೆ: ನೂರಾರು ಮಂದಿ ಸಂಬಂಧಿಕರು, ಸ್ನೇಹಿತರು, ಆಪ್ತರು, ಅಭಿಮಾನಿಗಳು ಆಗಮಿಸುತ್ತಿದ್ದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಎಸ್‌.ಎಂ.ಕೃಷ್ಣ ಅವರ ಮನೆ ಬಳಿ ಪೊಲೀಸ್‌ ಬಿಗಿ ಭದ್ರತೆ ಒದಗಿಸಲಾಯಿತು. ಕೃಷ್ಣ ಅವರ ಮನೆ ರಸ್ತೆಯ ಎರಡು ಕಡೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲಾಗಿತ್ತು. ಅಲ್ಲದೆ, ಸದಾಶಿವನಗರದ ಆರನೇ ಕ್ರಾಸ್‌ನಲ್ಲಿರುವ ಸಿದ್ಧಾರ್ಥ ಅವರ ಮನೆಗೂ ಪೊಲೀಸ್‌ ಸಿಬ್ಬಂದಿ ನಿಯೋಜಿಸಲಾಗಿದೆ.

ಸರಳ ವ್ಯಕ್ತಿತ್ವದ ಸಿದ್ಧಾರ್ಥ: “ಕೆಫೆ ಕಾಫಿ ಡೇ ಹಾಗೂ ಇತರ ಉದ್ಯಮಗಳಲ್ಲಿ ಗುರುತಿಸಿಕೊಂಡಿದ್ದ ಸಿದ್ಧಾರ್ಥ ಅವರದ್ದು ಸರಳ ವ್ಯಕ್ತಿತ್ವ. ಐವತ್ತು ಸಾವಿರ ಮಂದಿಗೆ ಉದ್ಯೋಗ ನೀಡಿದ್ದ ಉದ್ಯಮಿ ಈ ರೀತಿ ನಿಗೂಢವಾಗಿ ನಾಪತ್ತೆಯಾಗಿರುವುದು ದುರಾದೃಷ್ಟಕರ’ ಎಂದು ಸ್ನೇಹಿತರು ಹಾಗೂ ಸಂಬಂಧಿಕರು ಬೇಸರ ವ್ಯಕ್ತಪಡಿಸಿದರು. ಡ್ರೆಸ್‌ ಕೋಡ್‌ ಬಗ್ಗೆ ಕಾಳಜಿ ಹೊಂದಿದ್ದ ಸಿದ್ಧಾರ್ಥ, ಫಾರ್ಮಲ್‌ ಶರ್ಟ್‌, ಪ್ಯಾಂಟ್‌ ಹಾಗೂ ಕೋಟ್‌ ಧರಿಸುತ್ತಿದ್ದರು. ಯಾರಿಗೂ ಏಕವಚನದಲ್ಲಿ ಕರೆಯುತ್ತಿರಲಿಲ್ಲ. ಸದಾ ಹಸನ್ಮುಖೀಯಾಗಿದ್ದ ಅವರು ಸಿಬ್ಬಂದಿ ಹಾಗೂ ಉದ್ಯಮಿಗಳ ಜತೆ ಉತ್ತಮ ಸಂಬಂಧ ಹೊಂದಿದ್ದರು.

ಪ್ರಮುಖವಾಗಿ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಸೇರಿ ಮಲೆನಾಡು ಭಾಗದ ಯುವಕರ ಮೇಲೆ ವಿಶೇಷ ಪ್ರೀತಿ ಹೊಂದಿದ್ದ ಅವರು, ತಮ್ಮ ಕಾಫಿ ಡೇ ಹಾಗೂ ಇತರ ಕಚೇರಿಗಳಲ್ಲಿ ಅವರಿಗೆ ಕೆಲಸ ಕೊಟ್ಟಿದ್ದರು. ಅವರೊಂದಿಗೆ ಕೆಲಸ ಮಾಡಿದ ನೂರಾರು ಮಂದಿ ಯಶಸ್ವಿಯಾಗಿ ಸ್ವಂತ ಉದ್ಯೋಗ ಸೃಷ್ಟಿಸಿಕೊಂಡಿದ್ದಾರೆ. ಇನ್ನು ಕೆಲವರು ಅವರಿಂದ ಲಾಭ ಪಡೆದು ನಾಪತ್ತೆಯಾದವರು ಇದ್ದಾರೆ ಎನ್ನುತ್ತಾರೆ ಅವರ ದೂರದ ಸಂಬಂಧಿ ಸುಕೇಶ್‌. ಆದರೆ, ಇತ್ತೀಚೆಗೆ ಅವರು ಕೋಟ್‌ ಧರಿಸದೆ ಫಾರ್ಮಲ್‌ ಶರ್ಟ್‌ ಮತ್ತು ಪ್ಯಾಂಟ್‌ ಧರಿಸುತ್ತಿದ್ದರು. ಅವರ ದಿಢೀರ್‌ ವರ್ತನೆ ಸಿಬ್ಬಂದಿ ಹಾಗೂ ಸ್ನೇಹಿತರಲ್ಲಿ ಅನುಮಾನ ಮೂಡಿತ್ತು ಎಂದು ಹೇಳಿದರು.

ನಿಗಾ ವಹಿಸಲು ಗುರೂಜಿ ಸಲಹೆ?: ಕೆಲ ದಿನಗಳ ಹಿಂದಷ್ಟೇ ಚಿಕ್ಕಮಗಳೂರು ಜಿಲ್ಲೆಯ ಗುರೂಜಿಯೊಬ್ಬರನ್ನು ಸಿದ್ಧಾರ್ಥ ಕುಟುಂಬ ಸದಸ್ಯರು ಭೇಟಿಯಾಗಿದ್ದರು. ಈ ವೇಳೆ ಆ ಗುರೂಜಿ, ಸಿದ್ಧಾರ್ಥ ಒತ್ತಡದಲ್ಲಿದ್ದು, ಅವರ ಮೇಲೆ ಸ್ವಲ್ಪ ನಿಗಾ ವಹಿಸುವಂತೆ ಕುಟುಂಬ ಸದಸ್ಯರಿಗೆ ಎಚ್ಚರಿಸಿದ್ದರು.

ಪುತ್ರನಿಗೆ ಉದ್ಯಮ ವಹಿಸಲು ಚಿಂತನೆ: ವಿದೇಶದಲ್ಲಿ ವ್ಯಾಸಂಗ ಮಾಡಿದ್ದ ತಮ್ಮ ಪುತ್ರ ಅಮರ್ಥ್ಯ ಒಂದೂವರೆ ವರ್ಷಗಳ ಹಿಂದಷ್ಟೇ ಬೆಂಗಳೂರಿಗೆ ಬಂದಿದ್ದರು. ಹೀಗಾಗಿ ತಮ್ಮ ಸಂಪೂರ್ಣ ವ್ಯವಹಾರದ ಬಗ್ಗೆ ಅವರಿಗೆ ಮಾಹಿತಿ ನೀಡುವ ಸಲುವಾಗಿ ಕಳೆದೊಂದು ವರ್ಷದಿಂದ ತಮ್ಮ ಉದ್ಯಮ ಹಾಗೂ ಇತರ ವ್ಯವಹಾರಗಳ ಸಭೆಗಳಿಗೆ ಪುತ್ರನನ್ನು ಕರೆದೊಯ್ಯುತ್ತಿದ್ದರು. ಸಹ ಉದ್ಯಮಿಗಳಿಗೆ ಪರಿಚಯಿಸುತ್ತಿದ್ದರು ಎಂದು ಸಂಬಂಧಿಕರು ಹೇಳಿದರು.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.