ಕೆ.ಆರ್‌.ಪುರ ಆಸ್ಪತ್ರೆಗೆ ಬೇಕು ತುರ್ತು ಚಿಕಿತ್ಸೆ


Team Udayavani, May 10, 2019, 11:46 AM IST

blore-9

ಕೆ.ಆರ್‌.ಪುರ: ನುರಿತ ವೈದ್ಯರ ಅಭಾವ, ಮೂಲ ಸೌಲಭ್ಯಗಳು ಇಲ್ಲದಿರುವುದು, ಮೇಲ್ದರ್ಜೆಗೇರುವ ಭರವಸೆ ಈಡೇರದಿರುವುದೂ ಸೇರಿದಂತೆ ಹಲವು ಸಮಸ್ಯೆಗಳನ್ನು ಹೊದ್ದು ಮಲಗಿರುವ ಕೆ.ಆರ್‌.ಪುರದ ಸಾರ್ವಜನಿಕ ಆಸ್ಪತ್ರೆಗೆ ತುರ್ತು ಚಿಕಿತ್ಸೆ ಅಗತ್ಯವಿದೆ.

14 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಬೆಂಗಳೂರಿನ ಪೂರ್ವ ತಾಲೂಕಿನ ಅತಿ ದೊಡ್ಡ ಆಸ್ಪತ್ರೆ ಇದಾಗಿದ್ದು, ಪ್ರತಿ ದಿನ 500ರಿಂದ 600 ರೋಗಿಗಳು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರೆ. ಆದರೆ, ಕಣ್ಣು, ಕಿವಿ, ಚರ್ಮ ರೋಗ, ಮೂಳೆ, ದಂತ ಚಿಕಿತ್ಸೆ ಸೇರಿ ಯಾವುದೇ ವಿಭಾಗದಲ್ಲೂ ತಜ್ಞ ವೈದ್ಯರಿಲ್ಲ. ಹೀಗಾಗಿ, ವಿಭಾಗೀಯ ವೈದ್ಯರ ಮೇಲೆ ಒತ್ತಡ ಹೆಚ್ಚಾಗಿದ್ದು, ತುರ್ತು ಚಿಕಿತ್ಸೆ ಅಗತ್ಯವಿರುವ ರೋಗಿಗಳಿಗೆ, ಬೇರೆ ಆಸ್ಪತ್ರೆಗೆ ತೆರಳಲು ಶಿಫಾರಸು ಮಾಡುವ ಸ್ಥಿತಿಯಿದೆ.

ಮೊದಲೇ ಈ ಭಾಗದಲ್ಲಿ ಸಂಚಾರದಟ್ಟಣೆ ಹೆಚ್ಚು. ಹೀಗಾಗಿ ತುರ್ತು ಚಿಕಿತ್ಸೆ ಅಗತ್ಯವಿರುವ ರೋಗಿಗಳು, ಆಸ್ಪತ್ರೆಗೆ ಕರೆದೊಯ್ಯುವಾಗ ಟ್ರಾಫಿಕ್‌ನಲ್ಲಿ ಸಿಲುಕಿ ಯಾತನೆ ಅನುಭವಿಸುತ್ತಾರೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಹಲವರು ಮಾರ್ಗ ಮಧ್ಯೆಯೇ ಮೃತಪಟ್ಟ ನಿದರ್ಶನಗಳೂ ಇವೆ. ಕೆ.ಆರ್‌.ಪುರ ಆಸ್ಪತ್ರೆಯಲ್ಲೇ ತಜ್ಞ ವೈದ್ಯರು, ಸೌಲಭ್ಯ ಕಲ್ಪಿಸಿದರೆ ಈ ಸಮಸ್ಯೆ ಇರುವುದಿಲ್ಲ.

ರಜಾ ದಿನ ಚಿಕಿತ್ಸೆಯಿಲ್ಲ: ಸರ್ಕಾರಿ ರಜೆ ದಿನಗಳಂದು ಎಲ್ಲಾ ಸರ್ಕಾರಿ ವೈದ್ಯರು ಅರ್ಧ ದಿನ ಕಾರ್ಯನಿರ್ವಹಿಸಬೇಕು ಎಂಬ ಕಡ್ಡಾಯ ನಿಯಮವಿದೆ. ಆದರೆ, ಇಲ್ಲಿ ರಜೆ ದಿನ ವೈದ್ಯರು ಆಸ್ಪತ್ರೆಯತ್ತ ನೋಡುವುದೂ ಇಲ್ಲ. ಗರ್ಭಿಣಿಯರ ಹೆರಿಗೆ ಸಮಯದಲ್ಲಿ ಒಬ್ಬ ವೈದ್ಯೆ, ನರ್ಸ್‌ ಇರಲೇಬೇಕೆಂಬ ನಿಯಮ ಕೂಡ ಪಾಲನೆಯಾ ಗುತ್ತಿಲ್ಲ. ಇನ್ನೊಂದೆಡೆ ಆಸ್ಪತ್ರೆ ಆವರಣ ಖಾಸಗಿ ವಾಹನಗಳ ನಿಲ್ದಾಣವಾಗಿ ಮಾರ್ಪಟ್ಟಿದೆ.

ವಿದ್ಯುತ್‌ ತಂತಿಗಳು 15 ವರ್ಷ ಹಳೆಯದಾಗಿರುವ ಕಾರಣ, ಶಸ್ತ್ರಚಿಕಿತ್ಸೆ, ಡಯಾಲಿಸಿಸ್‌, ಸ್ಕ್ಯಾನಿಂಗ್‌ ಸಂದರ್ಭದಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡು ರೋಗಿಗಳು ಪರದಾಡುತ್ತಾರೆ. ಇದರೊಂದಿಗೆ ಶೌಚಾಲಯಗಳ ಕೊಳಕಾಗಿದ್ದು, ರೋಗ ಹರಡುವ ಕೇಂದ್ರಗಳಾಗಿವೆ. ಒಂದು ವರ್ಷದಿಂದ ನಿರ್ವಹಣೆ ಇಲ್ಲದೆ ನಿಂತಿರುವ ಆ್ಯಂಬುಲೆನ್ಸ್‌ ತುಕ್ಕುಹಿಡಿಯುತ್ತಿದೆ.

ಆಸ್ಪತ್ರೆಯಲ್ಲಿನ ಸಮಸ್ಯೆಗಳನ್ನು ಪರಿಹರಿಸುವಂತೆ ಶಾಸಕರ ಗಮನಕ್ಕೆ ತಂದಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಜನಸಂಖ್ಯೆಗೆ ಅನುಗುಣವಾಗಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಅಗತ್ಯವಿದೆ ಎಂದು ಆಸ್ಪತ್ರೆ ಉಸ್ತುವಾರಿ ಸಮಿತಿ ಅಧ್ಯಕ್ಷ ವಿ.ಸಿ.ರೆಡ್ಡಿ ತಿಳಿಸಿದ್ದಾರೆ. ಕೆ.ಆರ್‌.ಪುರ ಆಸ್ಪತ್ರೆಯನ್ನು 250 ಹಾಸಿಗೆ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಮತ್ತು ಸಾಮಾನ್ಯ ರೋಗಿಗಳ ಚಿಕಿತ್ಸೆಗಾಗಿ 4 ನುರಿತ ತಜ್ಞ ವೈದ್ಯರನ್ನು ನೇಮಿಸುವಂತೆ ಹಿರಿಯ ಅಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ. ಚಂದ್ರಶೇಖರ್‌ ತಿಳಿಸಿದ್ದಾರೆ.

ಕೆ.ಆರ್‌.ಗಿರೀಶ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.