ಕೆ.ಆರ್‌.ಪುರ-ಹೆಬ್ಟಾಳಕ್ಕೆ ಮೆಟ್ರೋ?


Team Udayavani, Aug 9, 2017, 11:45 AM IST

Namma-Metro.jpg

ಬೆಂಗಳೂರು: ಈಗಾಗಲೇ ಮೊದಲ ಹಂತದ ಯೋಜನೆಯನ್ನು ಪೂರ್ಣಗೊಳಿಸಿ ನಗರವನ್ನು ವ್ಯಾಪಿಸುತ್ತಿರುವ “ನಮ್ಮ ಮೆಟ್ರೋ’ ಈಗ ಮತ್ತೂಂದು ಹೊಸ ಮಾರ್ಗ ಸೇರ್ಪಡೆಯಾಗುವ ಸಾಧ್ಯತೆಗಳಿವೆ. ಕೆ.ಆರ್‌. ಪುರದಿಂದ ಹೆಬ್ಟಾಳಕ್ಕೆ ಮೆಟ್ರೋ ರೈಲು ಸಂಪರ್ಕ ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದೆ. 

ಸೆಂಟ್ರಲ್‌ ಸಿಲ್ಕ್ ಬೋರ್ಡ್‌ನಿಂದ ಕೆ.ಆರ್‌. ಪುರ ನಡುವೆ ನಿರ್ಮಿಸಲಾಗುವ ಮೆಟ್ರೋ ಮಾರ್ಗವನ್ನು ಮುಂದಿನ ದಿನಗಳಲ್ಲಿ ಹೆಬ್ಟಾಳದವರೆಗೆ ವಿಸ್ತರಿಸಲು ಸರ್ಕಾರ ಉದ್ದೇಶಿಸಿದೆ. ಈ ಸಂಬಂಧದ ಸಮಗ್ರ ಯೋಜನಾ ವರದಿ (ಡಿಪಿಆರ್‌)ಯನ್ನು ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಎಂಆರ್‌ಸಿಗೆ ಸೂಚನೆ ನೀಡಿದ್ದಾರೆ. 

ಈಚೆಗೆ ಬೆಂಗಳೂರು ನಗರಾಭಿವೃದ್ಧಿಯ ಮೂಲಸೌಕರ್ಯಗಳಿಗೆ ಸಂಬಂಧಿಸಿದ ಸಭೆಯಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿ) ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್‌ಸಿಂಗ್‌ ಖರೋಲಾ ಅವರಿಗೆ ಈ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.  

ನಗರದಲ್ಲಿ ಸಂಚಾರದಟ್ಟಣೆ ತಗ್ಗಿಸುವ ಸಲುವಾಗಿ ಭವಿಷ್ಯದಲ್ಲಿ ಮೆಟ್ರೋ ಯೋಜನೆಯನ್ನು ವಿಸ್ತರಿಸಲು ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಈಗಿನಿಂದಲೇ ರೂಪುರೇಷೆ ಸಿದ್ಧಪಡಿಸುವ ಅಗತ್ಯವಿದೆ. ನಗರದ ಎಲ್ಲ ದಿಕ್ಕುಗಳಿಗೂ ಮೆಟ್ರೋ ಸಂಪರ್ಕ ಕಲ್ಪಿಸುವ ಅವಶ್ಯಕತೆ ಇದೆ.

ಈ ನಿಟ್ಟಿನಲ್ಲಿ ಸಿಲ್ಕ್ ಬೋರ್ಡ್‌ನಿಂದ ಕೆ.ಆರ್‌. ಪುರ ಕ್ಕೆ ಬರುವ ಮೆಟ್ರೋ ರೈಲನ್ನು ಹೆಬ್ಟಾಳದವರೆಗೆ ಕೊಂಡೊಯ್ಯುವ ಪ್ರಸ್ತಾವ ಸಭೆಯಲ್ಲಿ ಬಂದಿತು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಸಂಬಂಧದ ಸಮಗ್ರ ಯೋಜನಾ ವರದಿ ಸಿದ್ಧಪಡಿಸುವಂತೆ ಸೂಚಿಸಿದರು ಎಂದು ಬಿಎಂಆರ್‌ಸಿ ಮೂಲಗಳು ತಿಳಿಸಿವೆ. 

ವರ್ತುಲ ರಸ್ತೆಗೆ ಸಂಪರ್ಕ
ಒಂದು ವೇಳೆ ಕೆ.ಆರ್‌. ಪುರ-ಹೆಬ್ಟಾಳ ನಡುವೆ ಮೆಟ್ರೋ ಸಂಪರ್ಕ ಸಾಧ್ಯವಾದರೆ, ನಗರದ ಬಹುತೇಕ ಹೊರವರ್ತುಲ ರಸ್ತೆಗಳಿಗೆ ಮೆಟ್ರೋ ಸಂಪರ್ಕ ಕಲ್ಪಿಸಿದಂತಾಗಲಿದೆ. ಆಗ, ಹೊರಗಡೆಯಿಂದ ಬೆಂಗಳೂರಿಗೆ ಬರುವವರು ವರ್ತುಲ ರಸ್ತೆಗಳಲ್ಲೇ ಇಳಿದು, ಮೆಟ್ರೋದಲ್ಲಿ ನಗರ ಪ್ರವೇಶಿಸಬಹುದು.

ಉದಾಹರಣೆಗೆ ಮೈಸೂರು ರಸ್ತೆಯಿಂದ ನಗರಕ್ಕೆ ಬರಬೇಕಾದ ಜನ,  ನಾಯಂಡಹಳ್ಳಿ ಬಳಿ ಇರುವ ಮೆಟ್ರೋ ನಿಲ್ದಾಣದಲ್ಲಿ ವಾಹನ ನಿಲುಗಡೆ ಮಾಡಿ ಅಥವಾ ಬಸ್‌ನಲ್ಲಿ ಇಳಿದು ರೈಲಿನಲ್ಲಿ ಬರುತ್ತಿದ್ದಾರೆ. ಈಗಾಗಲೇ 4,200 ಕೋಟಿ ರೂ. ವೆಚ್ಚದಲ್ಲಿ 18 ಕಿ.ಮೀ. ಉದ್ದದ ಮೆಟ್ರೋ ಮಾರ್ಗವನ್ನು ಸಿಲ್ಕ್ಬೋರ್ಡ್‌- ಕೆ.ಆರ್‌. ಪುರ ನಡುವೆ ನಿರ್ಮಿಸಲು ನಿರ್ಧರಿಸಲಾಗಿದೆ. ಇಲ್ಲಿಂದ ಮಾನ್ಯತಾ ಟೆಕ್‌ಪಾರ್ಕ್‌, ನಾಗವಾರ ಮೂಲಕ ಹೆಬ್ಟಾಳಕ್ಕೆ ವಿಸ್ತರಿಸಲು ಉದ್ದೇಶಿಸಲಾಗಿದೆ.

ಇದರ ಉದ್ದ ಸುಮಾರು 5-7 ಕಿ.ಮೀ. ಆಗಲಿದೆ. ಈ ಮಧ್ಯೆ ನಾಗವಾರದಿಂದ ಥಣಿಸಂದ್ರ ಮೂಲಕ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೆಟ್ರೋ ಸಂಪರ್ಕ ಕಲ್ಪಿಸಲಾಗುತ್ತಿದೆ. ಹಾಗಾಗಿ, ಅಲ್ಲೊಂದು ಇಂಟರ್‌ಚೇಂಜ್‌ ನಿರ್ಮಿಸುವ ಬಗ್ಗೆಯೂ ಆಲೋಚನೆ ಇದೆ. ಆದರೆ, ಇದು ಇನ್ನೂ ಚಿಂತನೆ ಹಂತದಲ್ಲಿದೆ ಅಷ್ಟೇ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಎಲ್ಲೆಲ್ಲಿದೆ ವರ್ತುಲ ರಸ್ತೆ?
ನಗರದಲ್ಲಿ ಒಟ್ಟಾರೆ ಸುಮಾರು 50 ಕಿ.ಮೀ. ವರ್ತುಲ ರಸ್ತೆ ಇದೆ. ಇದು ಭಾಗಶಃ ನಗರವನ್ನು ಸುತ್ತುವರಿದಿದೆ. ಕೆ.ಆರ್‌. ಪುರ-ಹೆಣ್ಣೂರು-ಹೆಬ್ಟಾಳ-ಬಿಎಚ್‌ಇಎಲ್‌-ಜಾಲಹಳ್ಳಿ-ಗೊರಗುಂಟೆ ಪಾಳ್ಯ ಹಾಗೂ ಕೆಂಗೇರಿ-ಸಾರಕ್ಕಿ-ಕದಿರೇನಹಳ್ಳಿ ಕ್ರಾಸ್‌-ಬನಶಂಕರಿ-ಜೆ.ಪಿ. ನಗರ-ಸೆಂಟ್ರಲ್‌ ಸಿಲ್ಕ್ ಬೋರ್ಡ್‌-ಕೆ.ಆರ್‌. ಪುರ ನಡುವೆ ವರ್ತುಲ ರಸ್ತೆ ಇದೆ.

ಈ ಪೈಕಿ ಈಗಾಗಲೇ ಮೈಸೂರು ರಸ್ತೆ (ಕೆಂಗೇರಿ ಮಾರ್ಗ), ಗೊರಗುಂಟೆ ಪಾಳ್ಯ, ಜೆ.ಪಿ. ನಗರದಲ್ಲಿ ಮೆಟ್ರೋ ಸಂಪರ್ಕ ಕಲ್ಪಿಸಲಾಗಿದೆ. ಸೆಂಟ್ರಲ್‌ ಸಿಲ್ಕ್ ಬೋರ್ಡ್‌, ಕೆ.ಆರ್‌.ಪುರ ನಡುವೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಈಗ ಹೆಬ್ಟಾಳಕ್ಕೆ ಅದನ್ನು ವಿಸ್ತರಿಸಲು ಉದ್ದೇಶಿಸಲಾಗಿದೆ. 

ಆಗಸ್ಟ್‌ ಅಂತ್ಯದೊಳಗೆ ಟೆಂಡರ್‌? 
ಸಿಲ್ಕ್ ಬೋರ್ಡ್‌- ಕೆ.ಆರ್‌. ಪುರ ನಡುವೆ ಮೆಟ್ರೋ ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ತಿಂಗಳಾಂತ್ಯದ ಒಳಗೆ ಟೆಂಡರ್‌ ಕರೆಯುವಂತೆ ಮುಖ್ಯಮಂತ್ರಿಗಳು ಬಿಎಂಆರ್‌ಸಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. 

ಸೆಪ್ಟೆಂಬರ್‌ ಅಂತ್ಯದೊಳಗೆ ಉದ್ದೇಶಿತ ಯೋಜನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಟೆಂಡರ್‌ ಕರೆಯಲು ಬಿಎಂಆರ್‌ಸಿ ಸಿದ್ಧತೆ ನಡೆಸಿದೆ. ಆದರೆ, ಟೆಂಡರ್‌ ಪ್ರಕ್ರಿಯೆಗಳನ್ನು ಚುರುಕುಗೊಳಿಸಿ ಆಗಸ್ಟ್‌ ಅಂತ್ಯದೊಳಗೇ ಟೆಂಡರ್‌ ಕರೆಯಲು ಮುಖ್ಯಮಂತ್ರಿ ನಿರ್ದೇಶಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಮೆಟ್ರೋ ನಿಲ್ದಾಣ ದತ್ತು
“ನಮ್ಮ ಮೆಟ್ರೋ’ ನಿಲ್ದಾಣಗಳ ನಿರ್ಮಾಣ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಇನ್ಫೋಸಿಸ್‌, ಎಂಬಸ್ಸಿ ಗ್ರೂಪ್‌, ಬಯೋಕಾನ್‌ ಕಂಪೆನಿಗಳು ನಿಲ್ದಾಣಗಳನ್ನು ದತ್ತು ಪಡೆಯಲು ಮುಂದೆಬಂದಿವೆ. ಇದಲ್ಲದೆ, ಇನ್ನೂ ಹಲವು ಕಂಪೆನಿಗಳು ಈ ನಿಟ್ಟಿನಲ್ಲಿ ಆಸಕ್ತಿ ತೋರಿವೆ. ಈಗಾಗಲೇ ಕೆಲವು ಸಂಸ್ಥೆಗಳು ಒಡಂಬಡಿಕೆ ಮಾಡಿಕೊಂಡಿವೆ. ಇನ್ನು ಕೆಲವು ಮಾತುಕತೆ ಹಂತದಲ್ಲಿವೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ. 

* ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.