ಚುನಾವಣೆ ಸೇವೆಗೆ ಕೆಎಸ್‌ಆರ್‌ಪಿ ಸಿದ್ಧ


Team Udayavani, Apr 9, 2019, 3:00 AM IST

chunava-seve

ಬೆಂಗಳೂರು: ದೇಶದಲ್ಲಿ ಲೋಕಸಭೆ ಚುನಾವಣೆ ಆಖಾಡ ರಂಗೇರಿದ್ದು, ಚುನಾವಣಾ ಪ್ರಕ್ರಿಯೆ ಯಶಸ್ಸಿನಲ್ಲಿ ಆಯಾ ರಾಜ್ಯದ ಪೊಲೀಸ್‌ ಸೇವೆ ಅತ್ಯಂತ ಪ್ರಮುಖವಾಗಿದ್ದು, ಇದರಲ್ಲಿ ಆಯಾ ರಾಜ್ಯಗಳ ಮೀಸಲು ಪೊಲೀಸ್‌ ಪಡೆಗಳು ಶ್ರಮಿಸುತ್ತವೆ.

ದೇಶದ ಉತ್ತಮ ಮೀಸಲು ಪೊಲೀಸ್‌ ಪಡೆಗಳಲ್ಲಿ ಒಂದಾಗಿರುವ ರಾಜ್ಯ ಸಶಸ್ತ್ರ ಮೀಸಲು ಪೊಲೀಸ್‌ ಪಡೆ (ಕೆಎಸ್‌ಆರ್‌ಪಿ) ಕೂಡ 17ನೇ ಲೋಕಸಭೆ ಚುನಾವಣೆ ಸೇವೆಗೆ ಸಜ್ಜಾಗಿದೆ. ಮೊದಲ ಹಂತದಲ್ಲಿ ಆಂಧ್ರಪ್ರದೇಶ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗೆ ಏಕಕಾಲದಲ್ಲಿ ಚುನಾವಣೆ ನಡೆಯುತ್ತಿದ್ದು, ಚುನಾವಣಾ ಯಶಸ್ಸಿಗೆ ರಾಜ್ಯ ಕೆಎಸ್‌ಆರ್‌ಪಿ ಸಿಬ್ಬಂದಿ ಸೇವೆ ಸಲ್ಲಿಸುತ್ತಿದ್ದಾರೆ.

ದೇಶದ ಉತ್ತಮ ಸಶಸ್ತ್ರ ಮೀಸಲು ಪೊಲೀಸ್‌ ಪಡೆಗಳಲ್ಲಿ ಒಂದು ಎಂಬ ಹೆಗ್ಗಳಿಕೆ ಹೊಂದಿರುವ ಕೆಎಸ್‌ಆರ್‌ಪಿಯ 900ಕ್ಕೂ ಅಧಿಕ ಸಿಬ್ಬಂದಿ ಆಂಧ್ರ ಚುನಾವಣಾ ಸೇವೆಗೆ ನಿಯೊಜನೆಗೊಂಡಿದ್ದಾರೆ. ಕರೂ°ಲು ಹಾಗೂ ಕಡಪ ಜಿಲ್ಲೆಗಳಲ್ಲಿ ಕೆಎಸ್‌ಆರ್‌ಪಿಯ 9 ಕಂಪನಿ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದು, ಏ.11ರ ಮತದಾನದ ಬಳಿಕ ವಾಪಸಾಗಲಿದ್ದಾರೆ. ನಂತರ ಆಯೋಗದ ಸೂಚನೆ ಮೇರೆಗೆ ಬೇರೆಡೆ ಕರ್ತವ್ಯಕ್ಕೆ ತೆರಳಲಿದ್ದಾರೆ.

ಕೆಎಸ್‌ಆರ್‌ಪಿಯ 14 ಬೆಟಾಲಿಯನ್‌ಗಳನ್ನು ಚುನಾವಣೆ ಆಯೋಗ ಈಗಾಗಲೇ ಸೇವೆಗೆ ಪಡೆದುಕೊಂಡಿದ್ದು, ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಲೋಕಸಭೆ ಚುನಾವಣೆ ಪೂರ್ಣಗೊಳ್ಳುವವರೆಗೆ ಆಯೋಗದ ಸೂಚನೆ ಮೇರೆಗೆ ನೆರೆರಾಜ್ಯಗಳು ಸೇರಿದಂತೆ ಇತರೆ ರಾಜ್ಯಗಳಲ್ಲಿ ಕಾರ್ಯನಿರ್ವಹಿಸಲಿವೆ.

“ಚುನಾವಣೆ ಪೂರ್ಣಗೊಳ್ಳುವವರೆಗೆ ಬಹುತೇಕ ವಿಶ್ರಾಂತಿ ಎಂಬುದಿಲ್ಲ. ಕುಟುಂಬ ಸದಸ್ಯರಿಂದ ದೂರವೇ ಉಳಿದಿರುತ್ತೇವೆ. ಆದರೆ, ಪ್ರಜಾಪ್ರಭುತ್ವದ ಪ್ರಮುಖ ಭಾಗವಾಗಿರುವ ಚುನವಣಾ ಪ್ರಕ್ರಿಯೆ ಯಶಸ್ವಿಗೊಳಿಸಲು ಸೇವೆ ಸಲ್ಲಿಸುವುದು ನಮ್ಮ ಪಾಲಿಗೆ ಹೆಮ್ಮೆಯ ಸಂಗತಿ’ ಎಂದು ಕೆಎಸ್‌ಆರ್‌ಪಿ ಸಿಬ್ಬಂದಿ ಹೇಳುತ್ತಾರೆ.

ಕೆಎಸ್‌ಆರ್‌ಪಿ ಸಂಖ್ಯಾಬಲ
-ಸಿಬ್ಬಂದಿ ಸುಮಾರು 14 ಸಾವಿರ
-ಬೆಟಾಲಿಯನ್‌ಗಳು 12
-ಸ್ಪೆಷಲ್‌ ಆ್ಯಕ್ಷನ್‌ ಪೋರ್ಸ್‌ 1 ಬೆಟಾಲಿಯನ್‌
-ಇಂಡಿಯನ್‌ ರಿಸರ್ವ್‌ ಬೆಟಾಲಿಯನ್‌ 2

ವೀರಪ್ಪನ್‌ ಹಿಡಿಯುವಲ್ಲಿ ನಿರ್ಣಾಯಕ ಪಾತ್ರ: ದಿನದ 24 ಗಂಟೆ ಸೇವೆಗೆ ಕಟಿಬದ್ಧವಾಗಿರುವ ಕೆಎಸ್‌ಆರ್‌ಪಿ ಪಡೆಗಳು, ತುರ್ತು ಸಂಧರ್ಭಗಳಲ್ಲಿ ಪರಿಸ್ಥಿತಿ ನಿಯಂತ್ರಿಸುವ ಕರ್ತವ್ಯ, ವಿಶೇಷ ಕಾರ್ಯಕ್ರಮಗಳು, ಚುನಾವಣೆ ಕರ್ತವ್ಯ, ಸಮಾವೇಶಗಳ ವೇಳೆ ಭದ್ರತಾ ಕಾರ್ಯ ನಿರ್ವಹಿಸುತ್ತವೆ.

ಮುಖ್ಯವಾಗಿ ಕಾಡುಗಳ್ಳ ವೀರಪ್ಪನ್‌ ವಿರುದ್ಧದ ಕಾರ್ಯಾಚರಣೆಯಲ್ಲಿ ನಿರ್ಣಾಯಕ ಪಾತ್ರ ನಿರ್ವಹಿಸಿದ ಹೆಗ್ಗಳಿಕೆ ಕೆಎಸ್‌ಆರ್‌ಪಿಗೆ ಇದೆ. ಜತೆಗೆ, ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹತ್ಯೆ ಪ್ರಕರಣದ ಆರೋಪಿಗಳನ್ನು ಕೋಣನಕುಂಟೆಯಲ್ಲಿ ಬಂಧಿಸಿದಾಗ ಬಂದೋಬಸ್ತ್ ಹಾಗೂ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು. ನಕ್ಸಲ್‌ ನಿಗ್ರಹ ಪಡೆ (ಎಎನ್‌ಎಫ್)ಗಳಲ್ಲಿ ನಕ್ಸಲ್‌ ಚಟುವಟಿಕೆಗಳ ಮೇಲೆ ನಿಗಾ, ಕೂಂಬಿಂಗ್‌ ಕಾರ್ಯಾಚರಣೆಯಲ್ಲೂ ಪಡೆಗಳ ಸೇವೆಯಿದೆ.

ಉದಯವಾಣಿ-ಕೆಎಸ್‌ಆರ್‌ಪಿ ಮತದಾನ ಜಾಗೃತಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಜಾಗೃತಿಗಾಗಿ “ಉದಯವಾಣಿ’ ಹಾಗೂ ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ (ಕೆಎಸ್‌ಆರ್‌ಪಿ) ಸಹಯೋಗದಲ್ಲಿ ಏ.10ರಂದು ಮತದಾನ ಜಾಗೃತಿಗಾಗಿ ಸೈಕಲ್‌ ಜಾಥಾ ಹಮ್ಮಿಕೊಳ್ಳಲಾಗಿದೆ. ಮಡಿವಾಳದ ಕೆಎಸ್‌ಆರ್‌ಪಿ ಮೈದಾನದಲ್ಲಿ ಏ.10ರಂದು ಬೆಳಗ್ಗೆ 7 ಗಂಟೆಗೆ ಸೈಕಲ್‌ ಜಾಥಾಗೆ ಕೆಎಸ್‌ಆರ್‌ಪಿ ಎಡಿಜಿಪಿ ಭಾಸ್ಕರ್‌ರಾವ್‌, ಡಿಐಜಿ ಸತೀಶ್‌ ಕುಮಾರ್‌ ಚಾಲನೆ ನೀಡಲಿದ್ದಾರೆ.

ಕೆಎಸ್‌ಆರ್‌ಪಿ ಮಹಿಳಾ ಸೈಕ್ಲಿಸ್ಟ್‌ ತಂಡ ಹಾಗೂ “ಉದಯವಾಣಿ’ ಸಿಬ್ಬಂದಿ ಸೈಕಲ್‌ ಜಾಥಾದಲ್ಲಿ ಭಾಗವಹಿಸಲಿದ್ದು, ಕೆಎಸ್‌ಆರ್‌ಪಿ 3ನೇ ಹಾಗೂ 4ನೇ ಬೆಟಾಲಿಯನ್‌ ವಸತಿ ಪ್ರದೇಶ, ಎಚ್‌ಎಸ್‌ಆರ್‌ ಲೇಔಟ್‌, ಮಡಿವಾಳ ಸುತ್ತಮುತ್ತಲ ಪ್ರದೇಶಗಳಲ್ಲಿ ಜಾಥಾ ನಡೆಯಲಿದೆ.

ಕೇಂದ್ರ ಚುನಾವಣಾ ಆಯೋಗದ ಸೂಚನೆಯಂತೆ 9 ಕೆಎಸ್‌ಆರ್‌ಪಿ ಕಂಪೆನಿಗಳು ಆಂಧ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿವೆ. ಚುನಾವಣೆ ಮುಗಿಯುವವರೆಗೆ ನಿಯುಕ್ತಿಗೊಂಡ ಸ್ಥಳಗಳಲ್ಲಿ ಕೆಎಸ್‌ಆರ್‌ಪಿ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ.
-ಸತೀಶ್‌ಕುಮಾರ್‌, ಕೆಎಸ್‌ಆರ್‌ಪಿ ಡಿಐಜಿ

* ಮಂಜುನಾಥ್‌ ಲಘುಮೇನಹಳ್ಳಿ

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.