ಕೆಎಸ್ಆರ್ಟಿಸಿಗೆ 200ನೇ ಪ್ರಶಸ್ತಿ ಗರಿ
Team Udayavani, Jul 22, 2017, 5:50 AM IST
ಬೆಂಗಳೂರು: ಅಲ್ಪಾವಧಿಯಲ್ಲಿ ಅತಿ ಹೆಚ್ಚು ಪ್ರಶಸ್ತಿಗಳನ್ನು ಪಡೆದು ಲಿಮ್ಕಾ ದಾಖಲೆಗೆ ಪಾತ್ರವಾಗಿದ್ದ ಕೆಎಸ್ಆರ್ಟಿಸಿಗೆ ಈಗ ಪ್ರಶಸ್ತಿ ಗಳಿಕೆಯಲ್ಲಿ ದ್ವಿಶತಕದ ಸಂಭ್ರಮ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್ಆರ್ಟಿಸಿ) ಶುಕ್ರವಾರ ‘ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ-2017’ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಈ ಮೂಲಕ 200ನೇ ಪ್ರಶಸ್ತಿ ಗಳಿಸಿದ್ದು, ಇಷ್ಟೊಂದು ಪ್ರಶಸ್ತಿಗಳನ್ನು ಗಳಿಸಿರುವ ದೇಶದ ಏಕೈಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಎಂಬ ಹೆಗ್ಗಳಿಕೆಗೂ ಕೆಎಸ್ಆರ್ಟಿಸಿ ಪಾತ್ರವಾಗಿದೆ.
ಮೈಸೂರಿನಲ್ಲಿ ಕೆಎಸ್ಆರ್ಟಿಸಿಯು ಮೈಸೂರು ಚತುರ ಸಾರಿಗೆ ವ್ಯವಸ್ಥೆ ಅಳವಡಿಸಿತ್ತು. ಈ ವ್ಯವಸ್ಥೆಯನ್ನು ಅಳವಡಿಸಿಕೊಂಡ ಮೊದಲ ಸಾರಿಗೆ ಸಂಸ್ಥೆ ಕೆಎಸ್ಆರ್ಟಿಸಿ. ಈ ಉಪಕ್ರಮಕ್ಕಾಗಿ 200ನೇ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನ ನಿಮ್ಹಾನ್ಸ್ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ರಾಜ್ ಕಲಾಡಿ ಕೆಎಸ್ಆರ್ಟಿಸಿಗೆ ಈ ಪ್ರಶಸ್ತಿ ಪ್ರದಾನ ಮಾಡಿದರು. ನಿಗಮದ ಪರವಾಗಿ ನಿರ್ದೇಶಕ (ಭದ್ರತೆ ಮತ್ತು ಜಾಗೃತಿ) ಬಿಎನ್ಎಸ್ ರೆಡ್ಡಿ ಪ್ರಶಸ್ತಿ ಸ್ವೀಕರಿಸಿದರು. ಕೆಎಸ್ಆರ್ಟಿಸಿ ಅಧಿಕಾರಿಗಳಾದ ಕೆ. ರಾಮಮೂರ್ತಿ, ಎಚ್. ಗುರುರಾಜ್ ಉಪಸ್ಥಿತರಿದ್ದರು. ಕೆಎಸ್ಆರ್ಟಿಸಿ ಕಳೆದ ಸುಮಾರು ಎರಡು ದಶಕಗಳಲ್ಲಿ 200 ಪ್ರಶಸ್ತಿಗಳನ್ನು ಗಳಿಸಿದ್ದು, ಇದರಲ್ಲಿ 1998ರಿಂದ 2008ರ ವರೆಗೆ 13 ಪ್ರಶಸ್ತಿಗಳು ಬಂದಿದ್ದವು. 2008ರಿಂದ 2013ರ ವರೆಗೆ 52 ಹಾಗೂ ಉಳಿದ ಪ್ರಶಸ್ತಿಗಳು 2013-2017ರ ಅವಧಿಯಲ್ಲಿ ಬಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು