ಟೀಕೆಗೆ ಕುಮಾರಸ್ವಾಮಿ ಗರಂ
Team Udayavani, Jul 7, 2018, 6:00 AM IST
ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ತಾವು ಮಂಡಿಸಿದ ಬಜೆಟ್ ಬಗ್ಗೆ ಋಣಾತ್ಮಕ ಅಭಿಪ್ರಾಯಗಳು ಕೇಳುತ್ತಿರುವ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಕ್ರೋಶಗೊಂಡಿದ್ದಾರೆ.
ತಮ್ಮ ಆಪ್ತ ವಲಯದಲ್ಲಿ ಮಾತ್ರವಲ್ಲದೆ, ಮಾಧ್ಯಮಗಳ ಮುಂದೆಯೂ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಪೆಟ್ರೋಲ್, ಡೀಸೆಲ್, ವಿದ್ಯುತ್ ಬಳಕೆ ಮತ್ತು ಮದ್ಯದ ಮೇಲಿನ ಅಬಕಾರಿ ತೆರಿಗೆ ಹೆಚ್ಚಿಸಿದ ಬಗ್ಗೆ ಮತ್ತು ಉತ್ತರ ಕರ್ನಾಟಕ, ಕರಾವಳಿ ಮತ್ತು ಮಲೆನಾಡಿಗೆ ಬಜೆಟ್ನಲ್ಲಿ ಏನೂ ಕೊಡುಗೆ ಕೊಟ್ಟಿಲ್ಲ ಎಂಬ ಕಾರಣಕ್ಕೆ ಜನಸಮುದಾಯ ಮತ್ತು ಆ ಭಾಗದ ಜನಪ್ರತಿನಿಧಿಗಳಿಂದ ವ್ಯಾಪಕ ಟೀಕೆ ವ್ಯಕ್ತವಾಗುತ್ತಿರುವುದು ಮುಖ್ಯಮಂತ್ರಿಗಳ ಆಕ್ರೋಶಕ್ಕೆ ಕಾರಣ.
ರೈತರ ಸಾಲಮನ್ನಾ ಮಾಡಿದ್ದರೂ ತೆರಿಗೆ ಹೆಚ್ಚಳವನ್ನೇ ದೊಡ್ಡದು ಮಾಡಿ ಬಿಂಬಿಸಿರುವುದು ಮತ್ತು ಹಾಸನ, ಮಂಡ್ಯಕ್ಕೆ ಸೀಮಿತ ಬಜೆಟ್ ಎಂದು ಬಿಂಬಿಸುವ ಕೆಲಸವನ್ನು ಮಾಧ್ಯಮಗಳು ಮತ್ತು ಪ್ರತಿಪಕ್ಷಗಳು ಮಾಡುತ್ತಿವೆ. ಮಿತ್ರಪಕ್ಷ ಕಾಂಗ್ರೆಸ್ ನವರೇ ನನ್ನನ್ನು ಉತ್ತರ ಕರ್ನಾಟಕ ವಿರೋಧಿ ಎಂಬಂತೆ ಬಿಂಬಿಸಲು ಪ್ರಯತ್ನಿಸುತ್ತಿದ್ದು, ಇದು
ಸರಿಯಲ್ಲ ಎಂದು ತಮ್ಮ ಆಪ್ತ ವಲಯ ಮತ್ತು ಅಧಿಕಾರಿಗಳ ಸಮ್ಮುಖದಲ್ಲಿ ಬೇಸರ ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ, ಮಾಜಿ ಉಪರಾಷ್ಟ್ರಪತಿ ಡಾ.ಬಾಬು ಜಗ ಜೀವನ ರಾಂ ಅವರ 32ನೇ ಪುಣ್ಯಸ್ಮರಣೆ ಅಂಗವಾಗಿ ಶುಕ್ರವಾರ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಬಹಿರಂಗವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಆದರೆ, ಇದು ಸಮಗ್ರ ಕರ್ನಾಟಕವನ್ನು ದೃಷ್ಟಿಯಲ್ಲಿ ಟ್ಟು ಕೊಂಡು ಮಂಡಿಸಿರುವ ಬಜೆಟ್.
ಅದು ಅರ್ಥವಾಗದೇ ಇರುವವರಿಗೆ ಏನು ಹೇಳ್ಳೋಣ? ಯಾವ ಜಿಲ್ಲೆ, ಸಮುದಾಯಕ್ಕೆ ಅನ್ಯಾಯವಾಗಿದೆ ಎಂಬುದನ್ನು ಚರ್ಚೆ ಮಾಡಲಿ ಎಂದು ಆಕ್ರೋಶ ಹೊರಹಾಕಿದರು. ಅಲ್ಲದೆ, ಕೇಂದ್ರ ಸರ್ಕಾರ ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ ಮಾಡಿದಾಗ ಇವರಿಗೆ ಕಣ್ಣು ಕಾಣಲಿಲ್ಲವೇ ಎಂದೂ ಪ್ರಶ್ನಿಸಿದರು.
ಬಜೆಟ್ನಲ್ಲಿ ಕರಾವಳಿ ಜಿಲ್ಲೆಗಳನ್ನು ಕಡೆಗಣನೆ ಮಾಡಲಾಗಿದೆ ಎಂದು ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅರ್ಥವಾಗದೇ ಇದ್ದವರಿಗೆ ಏನು ಹೇಳಲು ಸಾಧ್ಯ?ಈ ಹಿಂದೆ ಸಿದ್ದರಾಮಯ್ಯ ಮಂಡಿಸಿದ ಬಜೆಟ್ನ ಮುಂದುವರಿದ ಭಾಗವಿದು. ಇದನ್ನು ಬಜೆಟ್ ಮಂಡಿಸುವಾಗಲೇ ಸ್ಪಷ್ಟಪಡಿಸಿದ್ದೇನೆ. ಕೆಲವೊಂದು ಕಾರ್ಯಕ್ರಮಗಳನ್ನಷ್ಟೇ ಹೊಸದಾಗಿ ಪ್ರಕಟಿಸಿದ್ದೇನೆ.ಹಿಂದಿನ ಬಜೆಟ್ನಲ್ಲಿದ್ದ ಕಾರ್ಯಕ್ರಮಗಳು ಸಂಪೂರ್ಣ ಅನುಷ್ಠಾನವಾಗಲಿದೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು