ಪ್ರಜ್ವಲ್ ಹೇಳಿಕೆಗೆ ಕುಮಾರಸ್ವಾಮಿ ಗರಂ
Team Udayavani, Oct 13, 2017, 6:25 AM IST
ಬೆಂಗಳೂರು: ಜೆಡಿಎಸ್ನಲ್ಲಿರುವ “ಬಕೆಟ್ ಕಳ್ಳರು’ ನನ್ನ ವಿರುದ್ಧ ಷಡ್ಯಂತ್ರ ನಡೆಸಿದರು ಎಂಬ ಪ್ರಜ್ವಲ್ ರೇವಣ್ಣ ಹೇಳಿಕೆ ಪಕ್ಷದ ವಲಯದಲ್ಲಿ ಅಸಮಾಧಾನ ಮೂಡಿಸಿದೆ.
ಖುದ್ದು ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರೇ ಪ್ರಜ್ವಲ್ ರೇವಣ್ಣ ಹೇಳಿಕೆ ಬಗ್ಗೆ ಗರಂ ಆಗಿದ್ದು, ಪದೇಪದೆ ಇಂತಹ ಹೇಳಿಕೆ ಕೊಡುವ ಮೂಲಕ ಪಕ್ಷದ ಶಕ್ತಿ ಕುಗ್ಗಿಸುವ ಕೆಲಸ ಆಗುತ್ತಿದೆ ಎಂದು ಬೇಸರಗೊಂಡಿದ್ದಾರೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರ ಬಳಿ ಅತೃಪ್ತಿ ಹೊರ ಹಾಕಿರುವ ಕುಮಾರಸ್ವಾಮಿ, ಪ್ರಜ್ವಲ್ ಕರೆದು ತಾಕೀತು ಮಾಡುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.
ಹುಣಸೂರಿನ ಸಭೆಯೊಂದರಲ್ಲಿ ಸೂಟ್ಕೇಸ್ ಸಂಸ್ಕೃತಿ ಇದೆ ಎಂದು ಹೇಳಿದ್ದರು. ಇದೀಗ ಪಕ್ಷದಲ್ಲಿ ಬಕೆಟ್ ಕಳ್ಳರು ಇದ್ದಾರೆ ಎಂದು ಮಾತನಾಡಿದ್ದಾರೆ. ಜನರಲ್ಲಿ ಪಕ್ಷದ ಬಗ್ಗೆ ಯಾವ ಅಭಿಪ್ರಾಯ ಮೂಡುತ್ತದೆ. ಇಂತಹ ಹೇಳಿಕೆಗಳು ಕಾಂಗ್ರೆಸ್ ಮತ್ತು ಬಿಜೆಪಿಗೆ ಆಹಾರವಾಗುತ್ತಿದೆ. ಇದಕ್ಕೆ ಕಡಿವಾಣಹಾಕಬೇಕು ಎಂದು ಜೆಡಿಎಸ್ನ ಹಿರಿಯ ನಾಯಕರು ಎಚ್.ಡಿ.ದೇವೇಗೌಡರ ಬಳಿ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.
ಪ್ರಜ್ವಲ್ ಮಾತನಾಡಿರುವುದನ್ನು ಗಮನಿಸಿದ್ದೇನೆ. ರಾಜರಾಜೇಶ್ವರಿ ನಗರದಿಂದ ಪ್ರಜ್ವಲ್ ಟಿಕೆಟ್ ಕೇಳಿಲ್ಲ. ಆಕಾಂಕ್ಷಿಗಳ ಸಭೆಗೂ ಬರಲಿಲ್ಲ. ಆ ಕ್ಷೇತ್ರದಿಂದ ನಾಲ್ವರು ಆಕಾಂಕ್ಷಿಗಳಿದ್ದಾರೆ.
– ಎಚ್.ಡಿ.ದೇವೇಗೌಡ, ಮಾಜಿ ಪ್ರಧಾನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ