ಬೇಲ್‌ ಸಿಗದಿದ್ದರೆ ಕುಮಾರಸ್ವಾಮಿ ಜೈಲ್‌ನಲ್ಲಿರಬೇಕಿತ್ತು: ಬಿಜೆಪಿ 


Team Udayavani, Sep 21, 2018, 6:00 AM IST

bjpsymbol.jpg

ಬೆಂಗಳೂರು: ಜಂತಕಲ್‌ ಮೈನಿಂಗ್‌ ಪ್ರಕರಣ ಹಾಗೂ ಥಣಿಸಂದ್ರದ ಡಿನೋಟಿμಕೇಷನ್‌ ಪ್ರಕರಣದಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ  ಅವರು ಬೇಲ್‌ ಪಡೆಯದಿದ್ದರೆ ಜೈಲ್‌ನಲ್ಲಿರಬೇಕಾಗುತ್ತಿತ್ತು ಎಂದು ಮಾಜಿ ಸಚಿವ ಬಿ. ಜೆ.ಪುಟ್ಟಸ್ವಾಮಿ ತಿರುಗೇಟು ನೀಡಿದ್ದಾರೆ.

ಪಕ್ಷದ ಕಚೇರಿಯಲ್ಲಿ ಆರ್‌.ಅಶೋಕ್‌,ಗೋವಿಂದ ಕಾರಜೋಳ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿದ ಅವರು, ಮುಖ್ಯಮಂತ್ರಿಗಳು ಯಡಿಯೂರಪ್ಪ ಅವರಿಗೆ ಬೆದರಿಕೆ ಒಡ್ಡುವ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಯಡಿಯೂರಪ್ಪ ವಿರುದಟಛಿದ ಪ್ರಕರಣಗಳು ಈಗಾಗಲೇ ನ್ಯಾಯಾಲಯದಲ್ಲಿ ತೀರ್ಮಾನವಾಗಿದ್ದು, ನಿರಪರಾಧಿ ಎಂದು ತಿಳಿಸಿದೆ. 

ಕುಮಾರಸ್ವಾಮಿಯವರ ಒಂದೊಂದೇ ಹಗರಣಗಳು ಬಯಲಿಗೆ ಬರುತ್ತಿವೆ ಎಂದು ಹೇಳಿದರು.ಸರ್ಕಾರಿ ಭೂಕಬಳಿಕೆಯಲ್ಲಿ ಎಚ್‌.ಡಿ.ದೇವೇಗೌಡ ಮತ್ತು ಮಕ್ಕಳಿಗೆ ಪಿಎಚ್‌ಡಿ ನೀಡಬೇಕು.ಹಾಸನದ ಪಡುವಲಹಳ್ಳಿ, ಹೊಳೆನರಸೀಪುರದಲ್ಲಿ 82 ಎಕರೆ ಗೋಮಾಳ ಜಾಗವನ್ನು ಕಬಳಿಸಿದ್ದಾರೆ.ಮತ್ತೂಂದು ಪ್ರಕರಣದಲ್ಲಿ ದೇವೇಗೌಡರು ಹಾಗೂ ಅವರ ಪತ್ನಿ ಚೆನ್ನಮ್ಮ ಭೂರಹಿತರೆಂದು ಹೇಳಿಕೊಂಡು ತಲಾ 10 ಎಕರೆ ಭೂಮಿ ಪಡೆದು ಬಳಿಕ ಅದನ್ನು ಮೊಮ್ಮಗ ಪ್ರಜ್ವಲ್‌ ರೇವಣ್ಣ ಹೆಸರಿಗೆ ನೋಂದಣಿ ಮಾಡಿಸಿದ್ದಾರೆ. ಈ ಬಗ್ಗೆ ವಿಭಾಗಾಧಿಕಾರಿಯಾಗಿದ್ದ ಶಾಂತಕುಮಾರಿ ಎಂಬುವರು ತನಿಖೆ ನಡೆಸಿ ಹಗಲು ದರೋಡೆ ನಡೆದಿದೆ ಎಂಬುದಾಗಿ ವರದಿ ನೀಡಿದ್ದಾರೆಂದು ಹೇಳಿದರು.

ಚಿತ್ರದುರ್ಗದ ಹೊಳಲ್ಕೆರೆ ತಾಲೂಕು ತಂಗೇನಳ್ಳಿ, ಹಿರೇಕೆಂಡವಾಡಿ ಗ್ರಾಮದಲ್ಲಿ 80.94 ಹೆಕ್ಟೇರ್‌ ಪ್ರದೇಶದಲ್ಲಿ ಗಣಿ ಪರವಾನಗಿ ಜಂತಕಲ್‌ ಮೈನಿಂಗ್‌ ಸಂಸ್ಥೆಗೆ ಮಾಡಿಕೊಟ್ಟಿರುವ ಪ್ರಕರಣ ಇಂದಿಗೂ ಸುಪ್ರೀಂಕೋರ್ಟ್‌ನಲ್ಲಿ ಇದೆ ಎಂಬುದು ನೆನಪಿರಲಿ. ಪ್ರಕರಣದಲ್ಲಿ ಬೇಲ್‌ ಸಿಗದಿದ್ದರೆ ಕುಮಾರಸ್ವಾಮಿ ಜೈಲಿನಲ್ಲಿರಬೇಕಿತ್ತು. 1985ರಲ್ಲಿ ಗಣಿ ಪರವಾನಗಿ ರದ್ದಾಗಿತ್ತು. ನಕಲಿ ದಾಖಲೆ ಎಂಬ ಕಾರಣಕ್ಕೆ ಧರ್ಮಸಿಂಗ್‌ ಸೇರಿ ಇತರೆ ಮುಖ್ಯ ಮಂತ್ರಿಗಳು ಪರವಾನಗಿ ನವೀಕರಿಸಿರಲಿಲ್ಲ. ಆದರೆ ಕುಮಾರಸ್ವಾಮಿ 1985ರಲ್ಲಿ ಪರವಾನಗಿ ರದ್ದಾಗಿ ದ್ದರೂ 1985ರಿಂದ ಪೂರ್ವಾನ್ವಯವಾಗುವಂತೆ 2025ರವರೆಗೆ ಪರವಾನಗಿ ನವೀಕರಿಸಿ ಅನುಮೋದಿಸಿದ್ದರು. ಐಎಎಸ್‌ ಅಧಿಕಾರಿ ಗಂಗಾರಾಮ್‌ ಬಡೇರಿಯಾ ಅವರ ಮೇಲೆ ಒತ್ತಡ ಹೇರಿ ಗಣಿ ಪರವಾನಗಿ ನವೀಕರಿಸಿದ್ದಾರೆ ಎಂದು ಆರೋಪಿಸಿದರು.

ಮಾಜಿ ಡಿಸಿಎಂ ಆರ್‌.ಅಶೋಕ್‌ ಮಾತನಾಡಿ, ಜನ ದಂಗೆ ಏಳುವಂತೆ ಕರೆ ನೀಡಬೇಕಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿಗಳು ಹೇಳಿಕೆ ನೀಡಿರುವುದು ಐಪಿಸಿ ಸೆಕ್ಷನ್‌ 124 (ಎ) ಅನ್ವಯ ರಾಜದ್ರೋಹದ ಅಪರಾಧ. ನಕ್ಸಲರು ಮಾತ್ರ ರಾಜ್ಯ, ದೇಶದ ವಿರುದಟಛಿ ದಂಗೆ ಏಳುವಂತೆ ಕರೆ ನೀಡುತ್ತಾರೆ. ಕರ್ನಾಟಕ ಜಂಗಲ್‌ ರಾಜ್ಯವಾಗುತ್ತಿದ್ದು, ಜನರ ಅರಣ್ಯ ರೋಧನ ಕೇಳುವವರಿಲ್ಲದಂತಾಗಿದೆ ಎಂದು ಹೇಳಿದರು.

ವಿಧಾನಸಭೆ ಪ್ರತಿಪಕ್ಷ ಉಪನಾಯಕ ಗೋವಿಂದ ಕಾರಜೋಳ ಮಾತನಾಡಿ, ಮುಖ್ಯಮಂತ್ರಿಯಾದವರು ತಮ್ಮ ಸ್ಥಾನದ ಘನತೆ, ಗೌರವಕ್ಕೆ ಧಕ್ಕೆ ಯಾಗದಂತೆ ಮಾತನಾಡಬೇಕೆ ಹೊರತು ಗೂಂಡಾಗಳಂತೆ ಮಾತನಾಡಬಾರದು. ಆ ಹೇಳಿಕೆ ಅವರ ಸ್ಥಾನಕ್ಕೆ ಘನತೆ ತರುವುದೇ ಎಂಬುದನ್ನು ಆತ್ಮಾವ ಲೋಕನ ಮಾಡಿಕೊಳ್ಳಬೇಕೆಂದು ಹೇಳಿದರು.

ವಿಧಾನ ಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ಮಾತನಾಡಿ, 1962ರಲ್ಲಿ ಎಚ್‌.ಡಿ.ದೇವೇಗೌಡರ ಬಳಿ ಇದ್ದುದು 2.38 ಎಕರೆ ಭೂಮಿ ಮಾತ್ರ.ನಂತರ ದೇವೇಗೌಡರು, ಎಚ್‌.ಡಿ.ಕುಮಾರಸ್ವಾಮಿ ಹಾಗೂ ಎಚ್‌.ಡಿ.ರೇವಣ್ಣನವರು ಕೆಲವೇ ದಶಕಗಳಲ್ಲಿ ಭಾರಿ ಶ್ರೀಮಂತರಾಗಿದ್ದು, ಕರ್ನಾಟಕದ ಒಡೆಯರಾಗಿದ್ದಾರೆ. ಇಷ್ಟು ಸಂಪತ್ತು ಹೇಗೆಗಳಿಸಲಾಗಿದೆ ಎಂಬುದನ್ನು ರೈತರಿಗೆ ತಿಳಿಸಿದರೂ ಸಂಕಷ್ಟದಿಂದ ಹೊರಬರಬಹುದು ಎಂದರು.

ಕಾಂಗ್ರೆಸ್‌ ಕಾರ್ಯಕರ್ತರು ಯಡಿಯೂರಪ್ಪ ನಿವಾಸದ ಮುಂದೆ ಪ್ರತಿಭಟನೆ ನಡೆಸಲು ಸಿಎಂ ಕುಮಾರಸ್ವಾಮಿಯವರೇ ಕಾರಣ. ದಂಗೆ ಏಳಿ ಅಂದಾಕ್ಷಣ ಕಾಂಗ್ರೆಸ್‌ ಕಾರ್ಯಕರ್ತರು ಯಡಿಯೂರಪ್ಪ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಪ್ರತಿಪಕ್ಷ ನಾಯಕರ ಮನೆಗೆ ಭದ್ರತೆ ಇಲ್ಲ ಎಂದರೆ ರಾಜ್ಯದ ಕಾನೂನು ಸುವ್ಯವಸ್ಥೆ ಗತಿ ಏನು?
– ಶೋಭಾ ಕರಂದ್ಲಾಜೆ, ಸಂಸದೆ

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.