ಕುಪ್ಪಳಿ ಮನೆ ನಿರ್ಮಾಣಕ್ಕೆ ಗುಣಗಾನ
Team Udayavani, Aug 13, 2017, 11:21 AM IST
ಬೆಂಗಳೂರು: ಸಸ್ಯಕಾಶಿ ಲಾಲ್ಬಾಗ್ನಲ್ಲಿ ಅನಾವರಣಗೊಂಡಿರುವ ರಾಷ್ಟ್ರಕವಿ ಕುವೆಂಪು ಅವರ ಕುಪ್ಪಳಿ ನಿವಾಸದ ಹೂವಿನ ಪ್ರತಿಕೃತಿಯನ್ನು ಕಂಡ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ಅವರು ಕುವೆಂಪು ಪ್ರತಿಷ್ಠಾನ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳ ಪರಿಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕುವೆಂಪು ಸ್ಮರಣಾರ್ಥ ಭಾರತೀಯ ಅಂಚೆ ಇಲಾಖೆ ಹೊರತಂದಿರುವ ಕುವೆಂಪು ಅಂಚೆ ಚೀಟಿಯ ಬೃಹತ್ ಪ್ರತಿಯನ್ನು ಗಾಜಿನಮನೆ ಆವರಣದಲ್ಲಿ ಶನಿವಾರ ಬಿಡುಗಡೆಗೊಳಿಸಿ ಮಾತನಾಡಿದ ಸುಧಾ ಮೂರ್ತಿ ಅವರು, “ಕುಪ್ಪಳ್ಳಿಯ ಕುವೆಂಪು ಅವರ ನಿವಾಸದ ಪ್ರತಿಕೃತಿಯನ್ನು ಹೂವಿನಲ್ಲಿ ಮೂಡಿಸಿರುವುದು ಸೊಗಸಾಗಿದೆ. ಇಲಾಖೆ ಹಾಗೂ ಪ್ರತಿಷ್ಠಾನದ ಪರಿಶ್ರಮದಿಂದಾಗಿ ಸ್ವಾತಂತ್ರೊéàತ್ಸವ ಫಲಪುಷ್ಪ ಪ್ರದರ್ಶನಕ್ಕೆ ವಿಶೇಷ ಕಳೆ ಬಂದಿದೆ,’ ಎಂದು ಹೇಳಿದರು.
ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಡಾ.ಎಂ.ಜಗದೀಶ್, “ಅಂಚೆ ಇಲಾಖೆಯು ಮೂರು ತಿಂಗಳ ಹಿಂದೆ ಕುವೆಂಪು ಅವರ ಭಾವಚಿತ್ರವುಳ್ಳ ವಿಶೇಷ ಅಂಚೆಚೀಟಿ ಹೊರತಂದಿದ್ದು, ಅದರ ಮೆಗಾ ಪ್ರತಿಯನ್ನು ಲಾಲ್ಬಾಗ್ನ “ಕುವೆಂಪು ಫೋಟೊ ಗ್ಯಾಲರಿ’ಯಲ್ಲಿ ಪ್ರದರ್ಶಿಸಲಾಗಿದೆ ಎಂದು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನು ಬಳಿಗಾರ್, “ಮಹಾಕವಿ, ಯುಗದ ಕವಿ, ಜಗದ ಕವಿ ಕುವೆಂಪು ಅವರ ಸಾಹಿತ್ಯ ವಿಚಾರಧಾರೆಗಳು ಫಲಪುಷ್ಪ, ಭಿತ್ತಿಚಿತ್ರ, ಉಬ್ಬುಚಿತ್ರ, ಜಲವರ್ಣ, ಕಲಾಕೃತಿಗಳ ಮೂಲಕ ಅಭಿವ್ಯಕ್ತಗೊಂಡಿರುವುದು ನೋಡುಗರ ಕಣ್ಮನ ಸೆಳೆಯುವಂತಿವೆ,’ ಎಂದು ತಿಳಿಸಿದರು. ಸಾಹಿತಿ ಪ್ರೊ.ಹಂಪಾ ನಾಗರಾಜಯ್ಯ ಇತರರು ಉಪಸ್ಥಿತರಿದ್ದರು.
42 ಸಾವಿರ ಮಂದಿ ವೀಕ್ಷಣೆ
ಎರಡನೇ ಶನಿವಾರದ ಹಿನ್ನೆಲೆಯಲ್ಲಿ ಸರ್ಕಾರಿ ರಜೆಯಿದ್ದ ಕಾರಣ ಶನಿವಾರ ಲಾಲ್ಬಾಗ್ನ ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ದೊಡ್ಡ ಸಂಖ್ಯೆಯಲ್ಲಿ ಜನ ಭೇಟಿ ನೀಡಿದ್ದರು. ಒಟ್ಟು 42 ಸಾವಿರ ಮಂದಿ ಭೇಟಿ ನೀಡಿದ್ದು, ಇದರಲ್ಲಿ 37 ಸಾವಿರ ಮಂದಿ ವಯಸ್ಕರು, ಹಿರಿಯರು ಹಾಗೂ 5 ಸಾವಿರ ಮಕ್ಕಳು ಟಿಕೆಟ್ ಪಡೆದು ವೀಕ್ಷಿಸಿದ್ದಾರೆ. ಒಟ್ಟು 21.8 ಲಕ್ಷ ರೂ. ಸಂಗ್ರಹವಾಗಿದೆ. ಭಾನುವಾರದ ಪ್ರವೇಶ ಶುಲ್ಕ- ವಯಸ್ಕರಿಗೆ 60 ರೂ. ಮಕ್ಕಳಿಗೆ 20 ರೂ.
ಕವಿಗೋಷ್ಠಿ
ಭಾನುವಾರ ಸಂಜೆ 4ಕ್ಕೆ ಕವಿಗೋಷ್ಠಿ ನಡೆಯಲಿದ್ದು, ಕವಿ ಡಾ.ಸಿದ್ದಲಿಂಗಯ್ಯ ಸೇರಿದಂತೆ 15 ಮಂದಿ ಹಿರಿಯ ಸಾಹಿತಿಗಳು ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ ಹಿರಿಯ ಗಾಯಕ ಡಾ.ಶಿವಮೊಗ್ಗ ಸುಬ್ಬಣ್ಣ ಅವರು ಕುವೆಂಪು ವಿರಚಿತ “ಬಾರಿಸು ಕನ್ನಡ ಡಿಂಡಿಮವ’ ಗೀತೆಯನ್ನು ಪ್ರಸ್ತುತಪಡಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ