ಮನೆ ಆರೈಕೆ ನೆರವಿಗೆ ಕುಶಲ ಆ್ಯಪ್‌

ಹೋಂ ಐಸೋಲೇಷನ್‌ ಸಂಖ್ಯೆ ಹೆಚ್ಚಳ: ಪಾಲಿಕೆಯಿಂದ ನಿಗಾ | ಮಾಹಿತಿ ಕಲೆ ಹಾಕಲು ಆ್ಯಪ್‌ ಬಳಕೆ

Team Udayavani, Sep 1, 2020, 12:34 PM IST

ಮನೆ ಆರೈಕೆ ನೆರವಿಗೆ ಕುಶಲ ಆ್ಯಪ್‌

ಬೆಂಗಳೂರು: ಕೋವಿಡ್ ಸೋಂಕು ದೃಢಪಟ್ಟು, ಹೋಂ ಐಸೋಲೇಷನ್‌ಗೆ ಒಳಗಾಗುವವರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇವರಿಗೆ ಸಹಾಯ ಮಾಡಲು ಸ್ವಸ್ಥ್ ಎಂಬ ಸಂಸ್ಥೆಯು ಕುಶಲ ಎಂಬ ಆ್ಯಪ್‌ ಪರಿಚಯ ಮಾಡಿದೆ ಎಂದು ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ತಿಳಿಸಿದರು.

ಈ ಕುರಿತು ಸುದ್ದಿಗಾರರ ಜತೆ ಮಾತನಾಡಿ, ಹೋಂ ಐಸೋಲೇಷನ್‌ಗೆ ಒಳಗಾಗುವವರ ಮನೆ ವ್ಯವಸ್ಥೆಯನ್ನು ಪಾಲಿಕೆಯ ಅಧಿಕಾರಿಗಳು ಭೇಟಿ ನೀಡಿ ಹೋಂ ಐಸೋಲೇಷನ್‌ಗೆ ಒಳಗಾಗಲು ಸಮರ್ಪಕವಾಗಿದ್ದರೆ ಅನುವು ಮಾಡಿಕೊಡಲಿದ್ದಾರೆ. ಈ ರೀತಿ ಹೋಂಐಸೋಲೇಷನ್‌ ಆಗುವವರ ಆರೋಗ್ಯ ಪರೀಕ್ಷೆ ಮಾಡಲು ಸಹಕಾರ ನೀಡಲು ಸ್ವಸ್ಥ್ ಎಂಬ ಸಂಸ್ಥೆ ಮುಂದೆ ಬಂದಿದ್ದು, ಕುಶಲ ಎಂಬ ಆ್ಯಪ್‌ ಅನ್ನು ಪರಿಚಯಿಸಿದೆ ಎಂದರು.

ಈ ಆ್ಯಪ್‌ನ ಮೂಲಕ ವೈದ್ಯರು ಪ್ರತಿದಿನ ಮೂರು ಬಾರಿ ಫೋನ್‌ ಮಾಡಿ ರೋಗಿಗಳ ಆರೋಗ್ಯ ವಿಚಾರಿಸಿಕೊಳ್ಳುತ್ತಾರೆ. ಹೋಂ ಐಸೋಲೇಷನ್‌ನಲ್ಲಿರುವವರು ತೊಂದರೆಗೆ ಒಳಗಾದರೆ ಕೂಡಲೇ ಪಾಲಿಕೆಗೆ ಮಾಹಿತಿ ಲಭ್ಯವಾಗಲಿದೆ. ಇದರ ಆಧಾರದ ಮೇಲೆ ತೊಂದರೆಗೆ ಒಳಗಾಗುವವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡುತ್ತೇವೆ ಎಂದರು. ಹೋಂ ಐಸೋಲೇಷನ್‌ನಲ್ಲಿದ್ದು, ಆಕ್ಸಿಮೀಟರ್‌ ಹಾಗೂ ಔಷಧಿ ಅಗತ್ಯ ಇರುವವರಿಗೆ ಇದನ್ನು ಪೂರೈಸಲು ಕ್ರಮ ವಹಿಸಲಾಗುವುದು. ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಸ್ವಸ್‌§ ಸಂಸ್ಥೆಯೂ ಸಹಕಾರ ನೀಡುತ್ತಿದೆ ಎಂದರು.

ಇನ್ನು ಸೋಂಕು ದೃಢಪಟ್ಟು, ಪಾಲಿಕೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾದರೆ, ಸೋಂಕಿತರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. ಪಾಲಿಕೆಯಿಂದಾಗಲೀ ಅಥವಾ ಆಸ್ಪತ್ರೆಯಿಂದಾಗಲಿ ಯಾರು ಈ ಸೇವೆಗೆ ಹಣ ಕೇಳುವಂತಿಲ್ಲ. ಹಣ ಕೇಳುವ ಆರೋಪ ಸಾಬೀತಾದರೆ ಸಂಬಂಧ ಪಟ್ಟ ಅಧಿಕಾರಿಯ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪಾಲಿಕೆ ನಡೆಸುತ್ತಿರುವ ಸೋಂಕು ಪರೀಕ್ಷೆ, ಕೋವಿಡ್‌ ಆರೈಕೆ ಕೇಂದ್ರ ಸೇರಿಸಲು ಹಾಗೂ ಖಾಸಗಿ ಆಸ್ಪತ್ರೆಗೆ ಸೇರಿಸಲು ಯಾವುದೇ ಶುಲ್ಕಯಿಲ್ಲ ಎಂದು ಆಯುಕ್ತರು ಸ್ಪಷ್ಟಪಡಿಸಿದರು.

……………………………………………………………………………………………………………………………………………………

90 ಸಾವಿರ ದಾಟಿದ ಬಿಡುಗಡೆ ಪಮಾಣ : ಬೆಂಗಳೂರು: ನಗರದಲ್ಲಿ ಕಳೆದ ಕೆಲವು ದಿನಗಳಿಂದ ಏರುಗತಿಯಲ್ಲೇ ಇದ್ದ ಕೋವಿಡ್ ಸೋಂಕಿತ ಸಂಖ್ಯೆ ಪ್ರಮಾಣ ಇಳಿಕೆಯಾಗಿದೆ. ಸೋಮವಾರ 1,862 ಸೋಂಕಿತ ಪ್ರಕರಣಗಳು ಕಂಡುಬಂದಿದ್ದು ಒಟ್ಟಾರೆ ಸೋಂಕಿತರ ಸಂಖ್ಯೆ 1,27,336 ಕ್ಕೆ ಏರಿಕೆಯಾಗಿದೆ. ಹೊಸದಾಗಿ 2,422 ಮಂದಿ ಬಿಡುಗಡೆಯಾಗಿದ್ದು ಒಟ್ಟು ಬಿಡುಗಡೆ ಪ್ರಮಾಣ 90,043ಕ್ಕೆ ಏರಿದೆ. ನಗರದಲ್ಲಿ 37,116 ಸಕ್ರಿಯ ಪ್ರಕರಣಗಳಿದ್ದು, 284 ಮಂದಿ ತೀವ್ರ ನಿಗಾಘಟಕದಲ್ಲಿದ್ದಾರೆ.

ಸೋಮವಾರ 27 ಮಂದಿ ಕೋವಿಡ್‌ಗೆ ಬಲಿಯಾಗಿದ್ದು ಒಟ್ಟಾರೆ ಈ ಸಂಖ್ಯೆ 1,966ಕ್ಕೆ ಏರಿಕೆಯಾಗಿದೆ. ಸಾವಿನ ಪ್ರಮಾಣ ಶೇ. 1.52 ರಷ್ಟಿದೆ. ನಗರದಲ್ಲಿ ಈವರೆಗೂ ಚೇತರಿಕೆ ಪ್ರಮಾಣ ಶೇ.69,73ರಷ್ಟಿದೆ.

8,55,534 ಮಂದಿಗೆ ಪರೀಕ್ಷೆ : ನಗರದಲ್ಲೀಗ ಒಟ್ಟು ಪಾಸಿಟಿವ್‌ ರೇಟ್‌ ಶೇ.15.19 ರಷ್ಟಿದ್ದು, ಆಕ್ಟೀವ್‌ ರೇಟ್‌ ಶೇ.28.74 ರಷ್ಟಿದೆ. ಅಲ್ಲದೆ ನಿನ್ನೆ 13,157 ಜನರನ್ನು ಪರೀಕ್ಷೆ ಗೆ ಒಳಪಡಿಸಲಾಗಿದ್ದು ಇದುವರೆಗೂ 8,55,434 ಮಂದಿಯನ್ನು ತಪಾಸಣೆ ಮಾಡಲಾಗಿದೆ. ಹಾಗೆಯೇ ಒಟ್ಟು 40,563 ಕಂಟೈನ್ಮೆಂಟ್‌ ವಲಯವಿದ್ದು ಇದರಲ್ಲಿ 15,723 ಸಕ್ರಿಯ ಕಂಟೈನ್ಮೆಂಟ್‌ ವಲಯಗಳಿವೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.