ಕುವೆಂಪು ಸಮಗ್ರ ಸಾಹಿತ್ಯ ಸಂಪುಟ ಬಿಡುಗಡೆಗೆ ಸಿದ್ಧ


Team Udayavani, Jul 8, 2017, 3:55 AM IST

kuvempu-hd.jpg

ಬೆಂಗಳೂರು: ಯುಗದ ಕವಿ ಕುವೆಂಪು ಅವರ ಸಮಗ್ರ ಸಾಹಿತ್ಯವನ್ನೊಳಗೊಂಡ 11 ಸಂಪುಟಗಳು ಮರು ಮುದ್ರಣಗೊಂಡಿದ್ದು, ಬಿಡುಗಡೆಗೆ ಸಿದ್ಧವಾಗಿದೆ. ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಕುವೆಂಪು ಅವರ ಸಾಹಿತ್ಯದ ಸುಮಾರು 10 ಸಾವಿರಕ್ಕೂ ಹೆಚ್ಚು ಪುಟಗಳನ್ನು ಒಳಗೊಂಡಿರುವ 11 ಸಂಪುಟಗಳನ್ನು ಹೊರತರುತ್ತಿದ್ದು, ಅದಕ್ಕಾಗಿ ಅಂದಾಜು 30 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ. 

ಸರ್ವೋದಯವೆಂಬ ಯುಗದ ಮಂತ್ರದ ಆಶಯವನ್ನು ಕುವೆಂಪು ಅವರು ತಮ್ಮ ಕಾವ್ಯದಲ್ಲಿ ಮಾತ್ರವಲ್ಲದೆ ಹೆಚ್ಚು ಸ್ಪುಟವಾಗಿ, ವಿಚಾರಪೂರ್ಣವಾಗಿ ತಮ್ಮ ಗದ್ಯ ಸಾಹಿತ್ಯದಲ್ಲೂ ಮಂಡಿಸಿದ್ದಾರೆ. ಅವರು ಬರೆದ ನಾಟಕಗಳು-ಕಾದಂಬರಿಗಳು-ಚಿಂತನೆಯ ಬರಹಗಳೆಲ್ಲವೂ ಎಚ್ಚರಗೊಳ್ಳುತ್ತಿದ್ದ ಶ್ರೀಸಾಮಾನ್ಯನ ಪ್ರಜ್ಞೆಗೆ ಸಾಣೆ ಹಿಡಿದಿವೆ. ಸಾಂಸ್ಕೃತಿಕವಾಗಿ, ಸಾಹಿತ್ಯಿಕವಾಗಿ ಶೂದ್ರ ಪ್ರಜ್ಞೆಯನ್ನು, ಕನ್ನಡ ಸಾಹಿತ್ಯ ಲೋಕದ ಮುಂಚೂಣಿಗೆ ತಂದು ನಿಲ್ಲಿಸಿದ್ದ ಕುವೆಂಪು ಅವರ ಗದ್ಯ ಬರಹಗಳ ಪಾತ್ರ ಬಹಳ ದೊಡ್ಡದು. ಇದೆಲ್ಲವನ್ನು ಕುವೆಂಪು ಸಮಗ್ರ ಸಾಹಿತ್ಯ ಸಂಪುಟ ಒಳಗೊಂಡಿದೆ.

11 ಸಂಪುಟಗಳು: 
ಕುವೆಂಪು ಅವರ ಆತ್ಮಚರಿತ್ರೆ-ನೆನಪಿನದೋಣಿಯಲ್ಲಿ(ಒಂದು ಸಂಪುಟ), ಜೀವನ ಚರಿತ್ರೆ: ಸ್ವಾಮಿ ವಿವೇಕಾನಂದ, ರಾಮಕೃಷ್ಣ ಪರಮಹಂಸ (ಒಂದು ಸಂಪುಟ), ನಾಟಕಗಳು: ಯಮನ ಸೋಲು, ಜಲಗಾರ, ಬಿರುಗಾಳಿ, ಸ್ಮಶಾನ ಕುರುಕ್ಷೇತ್ರಂ, ರಕ್ತಾಕ್ಷಿ, ಬೆರಳ್‌ಗೆ ಕೊರಳ್‌, ಬಲಿದಾನ, ಚಂದ್ರಹಾಸ, ಮಹಾರಾತ್ರಿ, ಶೂದ್ರ ತಪಸ್ವಿ, ಕಾನೀನ, ವಾಲ್ಮೀಕಿಯ ಭಾಗ್ಯ ಸೇರಿ 12 ನಾಟಕಗಳು (ಒಂದು ಸಂಪುಟ), ಕಾದಂಬರಿ: ಮಲೆಗಳಲ್ಲಿ ಮದುಮಗಳು, ಕಾನೂರು ಹೆಗ್ಗಡತಿ (ಎರಡು ಸಂಪುಟ), ರಾಮಾಯಣ ದರ್ಶನಂ (ಒಂದು ಸಂಪುಟ), 23 ಕವನ ಸಂಕಲನಗಳನ್ನು ಒಳಗೊಂಡ ಕಾವ್ಯ ಸಂಪುಟ (ಎರಡು ಸಂಪುಟ), ಗದ್ಯ (ಎರಡು ಸಂಪುಟ ), ಸಣ್ಣ ಕತೆಗಳು (ಒಂದು ಸಂಪುಟ) ಹೀಗೆ ಒಟ್ಟು 11 ಸಂಪುಟಗಳನ್ನು ಮರು ಮುದ್ರಣ ಮಾಡಲಾಗಿದೆ. 

30 ಲಕ್ಷ ರೂ.ವೆಚ್ಚ:
2013-14ರಲ್ಲಿ ಕುವೆಂಪು ಸಮಗ್ರ ಸಾಹಿತ್ಯ ಸಂಪುಟಗಳನ್ನು ಮುದ್ರಿಸಲಾಗಿತ್ತು. ಅಂದು ಕೇವಲ ಮೂರು ಸಾವಿರಕ್ಕೆ ಎಲ್ಲ ಸಂಪುಟಗಳನ್ನು ಒಂದು ಕಿಟ್‌ನಲ್ಲಿ ಮಾರಾಟ ಮಾಡಲಾಗಿತ್ತು. ಸಂಪುಟಗಳ ಮುದ್ರಣಕ್ಕೆ ಸರ್ಕಾರ ಅನುದಾನ ನೀಡಿತ್ತು. ಆದರೆ, 2ನೇ ಮುದ್ರಣಕ್ಕೆ ಸರ್ಕಾರದ ನೆರವನ್ನು ಪ್ರತಿಷ್ಠಾನ ಪಡೆದಿಲ್ಲ. ಬದಲಿಗೆ ಈ ಹಿಂದೆ ಮುದ್ರಣಗೊಂಡು ಮಾರಾಟವಾದ ಸಂಪುಟಗಳಿಂದ ಬಂದ ಹಣವನ್ನೇ ತೆಗೆದಿಟ್ಟು, ಎರಡನೇ ಮುದ್ರಣಕ್ಕೆ ಬಳಕೆ ಮಾಡಿಕೊಂಡಿದೆ. ಪ್ರಸ್ತುತ ಎರಡನೇ ಮುದ್ರಣಕ್ಕೆಂದು ಅಂದಾಜು 30 ಲಕ್ಷ ರೂ.ಗಳಿಗೂ ಹೆಚ್ಚು ಖರ್ಚು ಮಾಡಲಾಗಿದೆ.

ಮುದ್ರಣ ವೆಚ್ಚ ದುಬಾರಿ:
ಕುಪ್ಪಳ್ಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಸಮಗ್ರ ಸಾಹಿತ್ಯ ಸಂಪುಟ ಪ್ರಕಟಿಸಿದ್ದು, ಮುದ್ರಣ ವೆಚ್ಚ ಸೇರಿ ಪುಸ್ತಕಗಳನ್ನು ಗ್ರಾಹಕರಿಗೆ ತಲುಪಿಸುವ ಶುಲ್ಕ ದುಬಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ ಬಾರಿ ಕೇವಲ ಮೂರು ಸಾವಿರ ರೂ.ಗಳಿಗೆ ಮಾರಾಟ ಮಾಡಿದ ಕೃತಿಗಳ ಬೆಲೆಯನ್ನು ಈ ಬಾರಿ ಸ್ವಲ್ಪ ಜಾಸ್ತಿ ಮಾಡಲಾಗಿದೆ. ಈ ಬಾರಿ ಶೇ.30ರಷ್ಟು ರಿಯಾಯಿತಿ ನೀಡಿ 5600 ರೂ.ಗಳಿಗೆ ಮಾರಾಟ ಮಾಡಲಾಗುವುದು. 2ನೇ ಮುದ್ರಣಗೊಂಡ 11 ಸಂಪುಟಗಳನ್ನು ಒಂದು ಕಿಟ್‌ನಲ್ಲಿಟ್ಟು ಕೇವಲ 4 ಸಾವಿರ ರೂ.ಗಳಿಗೆ ಗ್ರಾಹಕರ ಮನೆಗಳಿಗೆ ತಲುಪಿಸುವ ವ್ಯವಸ್ಥೆಯನ್ನು ಪ್ರತಿಷ್ಠಾನ ಮಾಡಲಿದೆ. 11 ಸಂಪುಟಗಳನ್ನು ಒಳಗೊಂಡ ಕಿಟ್‌ ಬರೋಬರಿ 13 ಕೆ.ಜಿ ತೂಕವಿದೆ. ಗ್ರಾಹಕರು ವಾಹನಗಳಲ್ಲಿ ಬಂದು ಖರೀದಿಸಿದರೆ, ತೆಗೆದುಕೊಂಡು ಹೋಗಲು ಸಾಧ್ಯ. ಇಲ್ಲವಾದರೆ ಕಷ್ಟವಾಗುತ್ತದೆ ಎಂದು ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಕಾರ್ಯದರ್ಶಿ ಕಡಿದಾಳ್‌ ಪ್ರಕಾಶ್‌ ಮಾಹಿತಿ ನೀಡಿದರು.
ಓದುಗರಿಗೆ ಮತ್ತು ಸಾಹಿತ್ಯಾಸಕ್ತರಿಗೆ ಸುಲಭವಾಗಿ ತಮಗೆ ಬೇಕಾದ ಗದ್ಯ, ಕಾವ್ಯ, ನಾಟಕ ಇತ್ಯಾದಿ ಪ್ರಕಾರಗಳ ವಿಭಾಗವನ್ನು ಹುಡುಕಲು ಅನುಕೂಲವಾಗುವಂತೆ ಪರಿವಿಡಿ(ಇಂಡೆಕ್ಸ್‌)ಯನ್ನು ಈ ಸಂಪುಟಗಳಲ್ಲಿ ನೀಡಿರುವುದು ವಿಶೇಷ. 

ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದಲ್ಲಿ 11 ಸಂಪುಟಗಳನ್ನು ಖರೀದಿ ಮಾಡುವವರಿಗೆ ಮಾತ್ರ ಶೇ.30ರಷ್ಟು ರಿಯಾಯಿತಿ ಸಿಗಲಿದೆ. ಉಳಿದಂತೆ ವಿವಿಧ ಪುಸ್ತಕ ಮಳಿಗೆಗಳಲ್ಲಿ ಹೇಗೆ ದರ ನಿಗಧಿ ಮಾಡಿರುತ್ತಾರೋ ಗೊತ್ತಿಲ್ಲ. ಶೀಘ್ರವೇ 2ನೇ ಮುದ್ರಣದ ಸಂಪುಟಗಳನ್ನು ಎಲ್ಲಿ ಬಿಡುಗಡೆ ಮಾಡಬೇಕು ಎಂಬುದರ ಕುರಿತು ಚರ್ಚೆ ನಡೆಸಲಾಗುತ್ತಿದೆ. 
– ಕಡಿದಾಳ್‌ ಪ್ರಕಾಶ್‌, ಕಾರ್ಯದರ್ಶಿ, ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ

– ಸಂಪತ್‌ ತರೀಕೆರೆ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.